ಮೆಟ್ರೋ ವಿರುದ್ಧ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಪ್ರತಿಭಟನೆ
ಆನೇಕಲ್, ನ.21: ಬೆಂಗಳೂರು-ಹೊಸೂರು ರಸ್ತೆಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ 'ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ, ಸಗಟು ಮಳಿಗೆ ಎದುರು ಆನೇಕಲ್ ತಾಲೂಕು ವರ್ತಕರ ಸಂಘದವರು ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಸ್ವದೇಶಿ ಜಾಗರಣ ಮಂಚ್ ರಾಜ್ಯ ಸಂಘಟನಾ ಕಾರ್ಯದರ್ಶಿ ಜಗದೀಶ್, 'ತಾಲೂಕಿನಲ್ಲಿ ಚಿಲ್ಲರೆ ವ್ಯಾಪಾರವನ್ನೇ ನಂಬಿರುವ ಅಂಗಡಿಗಳು ಸಾವಿರಾರು ಸಂಖ್ಯೆಯಲ್ಲಿದ್ದು, ಬಹು ಕಾಲದಿಂದ ಇದೇ ವ್ಯಾಪಾರ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಮೆಟ್ರೋ ಮಾರುಕಟ್ಟೆಯವರು ಅತಿ ಕಡಿಮೆ ಬೆಲೆಯಲ್ಲಿ ಸಾಮಗ್ರಿ ಮಾರುವ ನೆಪದಲ್ಲಿ ಸಾರ್ವಜನಿಕರಿಗೆ ಮೋಸ ಮಾಡಲು ಹೊರಟಿದ್ದಾರೆ'ಎಂದು ದೂರಿದರು.
ವರ್ತಕರ ಸಂಘದ ಪ್ರತಿನಿಧಿಗಳು, ರಾಷ್ಟ್ರೀಯ ಕಿಸಾನ್ ಸಂಘದ ಕಾರ್ಯಕರ್ತರು ಕೋನಪ್ಪನ ಅಗ್ರಹಾರ, ಚಂದಾಪುರ, ಅತ್ತಿಬೆಲೆ, ಹುಸ್ಕೂರು, ವೀರಸಂದ್ರ, ರಾಜಾಪುರ ಸೇರಿದಂತೆ ಸ್ಥಳೀಯರು ಕೂಡಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೆಟ್ರೋಗೆ ಮತ್ತೆ ಪ್ರತಿಭಟನೆ ಭೀತಿ: ದಿನಕ್ಕೆ 20 ಕೋಟಿ ಸಂಪಾದಿಸುತ್ತಿದ್ದ ಬೆಂಗಳೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಸ್ಥೆ(APMC) ಮೇಲೆ ಮೆಟ್ರೋ ಎಂಬ ಜರ್ಮನಿಯ ದೈತ್ಯ ಹೋಲ್ ಸೇಲ್ ಸಂಸ್ಥೆ ಸವಾರಿ ಮಾಡತೊಡಗಿದ್ದನ್ನು ವರ್ತಕರ ಕಾರ್ಯ ಸಮಿತಿ ಖಂಡಿಸಿ ಭಾರಿ ಪ್ರತಿಭಟನೆ ನಡೆಸಿತ್ತು. ಈ ಘಟನೆ ನಡೆದು ದಶಕವಾದರೂ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿಗೆ ತೊಂದರೆ ತಪ್ಪಿಲ್ಲ.
ಯಶವಂತಪುರ, ಕನಕಪುರ ರಸ್ತೆ ನಂತರ ಬನ್ನೇರುಘಟ್ಟ ರಸ್ತೆ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮೆಟ್ರೋ ತನ್ನ ಮಳಿಗೆ ನಿರ್ಮಿಸುತ್ತಿದೆ. ಅಂದು 176 ಕೋಟಿ ಹೂಡಿಕೆ ಮಾಡುತ್ತಾ ಬೆಂಗಳೂರಿಗೆ ಕಾಲಿಟ್ಟದ್ದ ಮೆಟ್ರೋ ಭಾರತದಲ್ಲಿ ಒಟ್ಟಾರೆ 1,400 ಕೋಟಿ ರು ಹೂಡಿಕೆ ಮಾಡಿದೆ. ಭಾರತದಲ್ಲಿ 15ಕ್ಕೂ ಅಧಿಕ ಮಳಿಗೆ ಹೊಂದಿರುವ ಜರ್ಮನಿಯ ಹೋಲ್ ಸೇಲ್ ಕಂಪನಿ ಯ ಮೌಲ್ಯ ಸುಮಾರು 32 ಬಿಲಿಯನ್ ಯುರೋ ದಾಟುತ್ತದೆ.
ಎಲೆಕ್ಟ್ರಾನಿಕ್ ಸಿಟಿ ಸಮಸ್ಯೆ ಏನು? : 2 ರಿಂದ 3 ಲಕ್ಷ ಆದಾಯ ಹೊಂದಿರುವ ಸಣ್ಣ ವ್ಯಾಪಾರಿಗಳನ್ನು ಮೆಟ್ರೋ ಟಾರ್ಗೆಟ್ ಮಾಡಿಕೊಂಡಿದೆ. 50,000 ಚ.ಅ ವಿಸ್ತೀರ್ಣದ ಮಾರಾಟ ಮಳಿಗೆ, ಶೇಖರಣಾ ಘಟಕ(8 ರಿಂದ 10 ಸಾವಿರ) ಕೂಡಾ ಕಡಿಮೆ ವ್ಯಾಪ್ತಿ ಹೊಂದಿದೆ. ಸ್ಟಾರ್ ಹೋಟೆಲ್ ಗಳು, ಸಣ್ಣ ಉದ್ದಿಮೆದಾರರು ಹಾಗೂ ಸ್ಥಳೀಯ ಐಟಿ ಕಾರ್ಪೊರೇಟ್ ಕಚೇರಿಗಳನ್ನು ಮೆಟ್ರೋ ನಂಬಿಕೊಂಡಿದೆ. ಹೀಗಾಗಿ ಇದರಿಂದ ಚಿಲ್ಲರೆ ವ್ಯಾಪಾರಿಗಳಿಗೆ ತೊಂದರೆಯಾಗಲಿದೆ ಎಂದು ಪ್ರತಿಭಟನೆ ನಡೆಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications