ಆನೇಕಲ್ : ಕೊಲೆ ಆರೋಪಿ ಮೆಂಟಲ್ ಮಂಜನ ಮೇಲೆ ಶೂಟೌಟ್
ಆನೇಕಲ್, ಜೂನ್ 18: ಆನೇಕಲ್ ತಾಲ್ಲೂಕಿನ ಹೊಸೂರು ರಸ್ತೆಯ ಚಿಂತಾಲ ಮಡಿವಾಳದಲ್ಲಿ ಮುನಿರಾಜು ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದ ಮೆಂಟಲ್ ಮಂಜ ಅಲಿಯಾಸ್ ಮಂಜುನಾಥನ ಮೇಲೆ ಶೂಟೌಟ್ ನಡೆಸಲಾಗಿದೆ.
ಮೆಂಟಲ್ ಮಂಜನ ಕಾಲಿಗೆ ಗುಂಡೇಟು ಬಿದ್ದಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ. ಆನೇಕಲ್ ಬನ್ನೇರುಘಟ್ಟ ರಸ್ತೆಯ ಸಕಲವಾರ ಗೇಟ್ ಬಳಿ ಮಂಜ ಇರುವ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದಾರೆ. ಆತನನ್ನು ಹಿಂಬಾಲಿಸಿಕೊಂಡು ಬಂದು ಸೆರೆ ಹಿಡಿಯಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ, ಪರಾರಿಯಾಗಲು ಯತ್ನಿಸಿದ್ದಾನೆ.

ಆನೇಕಲ್ ಉಪ ವಿಭಾಗದ ಡಿ.ವೈ.ಎಸ್.ಪಿ ಉಮೇಶ್ ಅವರು ಆತನ ಕಾಲಿಗೆ ಶೂಟ್ ಮಾಡಿದ್ದು, ಮಂಜನ ಬಲಗಾಲಿಗೆ 1 ಗುಂಡು ತಗುಲಿದೆ. ಆತನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ.
ಏನಿದು ಘಟನೆ: ಮುನಿರಾಜು ಎಂಬುವರ ಅತ್ತಿಗೆಗೆ ಮಂಜ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಅವನಿಗೆ ಎರಡು ಮೂರು ಬಾರಿ ಎಚ್ಚರಿಕೆ ನೀಡಲಾಗಿತ್ತು. ಇದೇ ವಿಚಾರಕ್ಕೆ 3 ದಿನಗಳ ಹಿಂದೆ ಇಬ್ಬರ ನಡುವೆ ಜಗಳವಾಗಿತ್ತು ನಂತರ ಮಾತುಕತೆ ನೆಪದಲ್ಲಿ ಕರೆಸಿಕೊಂಡು ಮಂಜನಿಗೆ ತದುಕಿ ಕಳಿಸಿದ್ದರು.
ಶನಿವಾರ ರಾತ್ರಿ ವೇಳೆ ಹೊಂಚು ಹಾಕಿ ಪೆಟ್ರೋಲ್ ಬಂಕ್ ವೊಂದರ ಬಳಿ ಇದ್ದ ಮುನಿರಾಜುವಿನ ಮೇಲೆ ದಾಳಿ ಮಾಡಿ, ಕೊಲೆಗೈದ ಮಂಜ ಪರಾರಿಯಾಗಿದ್ದ. ಈ ಪ್ರಕರಣ ಹೆಬ್ಬಗೋಡಿ ಠಾಣೆಯಲ್ಲಿ ದಾಖಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications