ಬೆಂಗಳೂರಿನಲ್ಲಿ ಪ್ರತಿಭಟನೆ: ಫುಲ್ ಟ್ರಾಫಿಕ್ ಜಾಮ್
ಬೆಂಗಳೂರು.ಫೆಬ್ರವರಿ 3: ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ನಗರದ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು, ವಾಹನ ಸವಾರರು ಪರದಾಡಿದರು.
ರಾಜ್ಯದ ವಿವಿಧೆಡೆಯಿಂದ ರಾಜಧಾನಿ ಬೆಂಗಳೂರಿಗೆ ಅಗಮಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸರಕಾರ ವಿರುದ್ದ ಘೋಷಣೆ ಕೂಗುತ್ತಾ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಮೆರವಣಿಗೆ ನಡೆಸಿದರು. ಈ ವೇಳೆ ಒಂದು ಗಂಟೆಗೂ ಮೀಗಿಲಾಗಿ ವಾಹನ ದಟ್ಟಣೆ ಏರ್ಪಟ್ಟಿತ್ತು. ಸಾವಿರಾರು ಮಹಿಳೆಯರು ಬೆಂಗಳೂರಿನ ರಸ್ತೆಯಲ್ಲಿ ಪ್ರತಿಭಟನೆಗಾಗಿ ಮೆರವಣಿಗೆ ಸಾಗಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿತ್ತು. ಇನ್ನು ಸಾರ್ವಜನಿಕರು, ವಾಹನ ಸವಾರರು ಯಾವಾಗ ಈ ಧರಣಿ ನಿಲ್ಲುತ್ತದಪ್ಪಾ ಎಂದು ಪರಿತಪಿಸಿದರು.[ಎಲ್ಲ ಪ್ರತಿಭಟನೆಗಳನ್ನು ಸರ್ಕಾರ ಹತ್ತಿಕ್ಕುತ್ತಿರುವುದೇಕೆ?]

ಸಮಾನವೇತನ ನೀಡಬೇಕು, ಕಾರ್ಮಿಕರ ಕಾಯ್ದೆ ಜಾರಿಗೊಳಿಸಬೇಕು, ಕೆಲಸ ಕಾಯಮಾತಿ, ನಗರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತುಟಿ ಭತ್ಯೆ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಪದೇ ಪದೇ ಸರ್ಕಾರಗಳಿಗೆ ಒತ್ತಾಯಿಸುತ್ತಿದ್ದರೂ ಇದುವರೆಗೂ ಬೇಡಿಕೆಗಳು ಈಡೇರಿಲ್ಲ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯ ಕಾರ್ಯದರ್ಶಿ ವಿಜಯಲಕ್ಷ್ಮಿ , ಖಜಾಂಚಿ ಎಂ.ಪಿ.ಭಾರತಿ ಒತ್ತಾಯಿಸಿದರು.[ಮಂಗಳೂರು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ಖಾಲಿ ಇವೆ]
ಬೆಂಗಳೂರಿನಲ್ಲಿ ಇತ್ತೀಚೆಗೆ ಪ್ರತಿಭಟನೆ ಹೆಚ್ಚಾಗುತ್ತಿದ್ದು, ಇದಕ್ಕಾಗಿ ಪ್ರೀಡಂ ಪಾರ್ಕಿನಲ್ಲಿ ಅವಕಾಶ ಮಾಡಿಕೊಡಲಾಗಿದ್ದರೂ ಅನೇಕ ಕಡೆಗಳಲ್ಲಿ ಪ್ರತಿಭಟಸಿ ವಾಹನ ಸವಾರರಿಗೆ ತೊಂದರೆ ಕೊಡುವುದ ಯಾವ ನ್ಯಾಯ ಎಂದು ನಾಗರಿಕರು ಪ್ರಶ್ನಿಸಿದ್ದಾರೆ.
-
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್












Click it and Unblock the Notifications