ಅಂಗನವಾಡಿ ಕಾರ್ಯಕರ್ತೆಯರ ಧರಣಿ ವಾಪಸ್
ಮುಖ್ಯಮಂತ್ರಿ ಸಿದ್ಧರಾಮಯ್ಯ ಅಂಗನವಾಡಿ ಕಾರ್ಯಕರ್ತೆಯರು, ಮುಖಂಡರ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು ಧರಣಿ ಹಿಂಪಡೆಯಲು ತೀರ್ಮಾನಿಸಲಾಗಿದೆ.
ಬೆಂಗಳೂರು, ಮಾರ್ಚ್ 21: ದಿನದ ಪ್ರಮುಖ ಬೆಳವಣಿಗೆಯಲ್ಲಿ ಫ್ರೀಡಂ ಪಾರ್ಕಿನಲ್ಲಿ ನಿನ್ನೆಯಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹೋರಾಟ ಹಿಂತೆಗೆದುಕೊಳ್ಳಲು ತೀರ್ಮಾನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮುಖಂಡರ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು ಧರಣಿ ಹಿಂಪಡೆಯಲು ತೀರ್ಮಾನಿಸಲಾಗಿದೆ.[ಅನ್ನ, ನೀರು ಇಲ್ಲದೆ ಪರದಾಡಿದ ಅಂಗನವಾಡಿ ಕಾರ್ಯಕರ್ತೆಯರು!]

ಮುಖ್ಯಮಂತ್ರಿಗಳ ಸಭೆಯಲ್ಲಿ ನಿಡುಮಾಮಿಡಿ ಶ್ರೀ, ಮರಳು ಸಿದ್ಧಪ್ಪ, ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಈ ಸಂದರ್ಭ ಏಪ್ರಿಲ್ 19ರಂದು ಸಭೆ ನಡೆಸಿ ಚರ್ಚಿಸಲು ನಿರ್ಧರಿಸಲಾಗಿದೆ.[ಆಹೋರಾತ್ರಿ ಧರಣಿ, ಮೂವರು ಅಂಗನವಾಡಿ ಕಾರ್ಯಕರ್ತೆಯರು ಅಸ್ವಸ್ಥ]












Click it and Unblock the Notifications