ಶ್ರೀರಾಮುಲು ಒಬ್ಬ ದುರ್ಬಲ ನಾಯಕ: ಅನಿಲ್ ಲಾಡ್ ವಾಗ್ದಾಳಿ
ಬೆಂಗಳೂರು, ಅಕ್ಟೋಬರ್ 11: ಶ್ರೀರಾಮುಲು ಒಬ್ಬ ದುರ್ಬಲ ನಾಯಕ, ಅವರು ಅಷ್ಟು ಪ್ರಬಲ ನಾಯಕ ಆಗಿದ್ದರೆ ಯಾಕೆ ಮೊಣಕಾಲ್ಮೂರಿಗೆ ಹೋಗಿದ್ದಾರೆ ಎಂದು ಬಳ್ಳಾರಿ ಮಾಜಿ ಶಾಸಕ ಅನಿಲ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭೆ ಉಪ ಚುನಾವಣೆಗೆ ಬಳ್ಳಾರಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಡೆದಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ಬಲ ಇದೆ ಎಂದು ಮಾತನಾಡುತ್ತಾರೆ, ಶ್ರೀರಾಮುಲು ಕಾರಣದಿಂದಲೇ ಬಳ್ಳಾರಿಯಲ್ಲಿ ಪದೇ ಪದೇ ಉಪ ಚುನಾವಣೆ ಎದುರಾಗುತ್ತಿದೆ ಎಂದು ಗುಡುಗಿದರು.
ಬಳ್ಳಾರಿ ನಮ್ಮ ಭದ್ರಕೋಟೆ ಎಂದು ಹೇಳುತ್ತಾರೆ ಆದರೆ ಏನು ಅಭಿವೃದ್ಧಿ ಮಾಡಿದ್ದಾರೆ, ಈ ಚುನಾವಣೆ ನಿಜಕ್ಕೂ ದುಬಾರಿಯಾಗಿದೆ, ಉಪ ಚುನಾವಣೆ ಬಳಿಕ 4 ತಿಂಗಳಲ್ಲೇ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಇದರಿಂದ ರಾಜ್ಯ ಬೊಕ್ಕಸಕ್ಕೆ ಹೊಡೆತ ಬೀಳಲಿದೆ ಎಂದು ಹೇಳಿದರು.

ಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ, ಒಂದೆರೆಡು ದಿನಗಳಲ್ಲಿ ಎಲ್ಲರೂ ಸೇರಿ ಆಯ್ಕೆ ಮಾಡುತ್ತೇವೆ, ಡಿಕೆ ಶಿವಕುಮಾರ್ ಅವರು ಪ್ರಭಾವಿ ನಾಯು, ಅವರನ್ನು ಬಳ್ಳಾರಿ ಉಸ್ತುವಾರಿಯನ್ನಾಗಿ ಮಾಡಿರುವುದಕ್ಕೆ ಯಾವುದೇ ಬೇಸರವಿಲ್ಲ ಎಂದರು.
ಬಳ್ಳಾರಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದಾರೆ ನಾವೇ ಕಣಕ್ಕಿಳಿಯುತ್ತಿದ್ದೆವು, ಆದರೆ ಅದು ಎಸ್ಟಿಗೆ ಮೀಸಲು ಕ್ಷೇತ್ರವಾಗಿದೆ. ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎನ್ನುವುದು ಸಹಜ, ನಾವೇನು ಠೇವಣಿ ಕಳೆದುಕೊಂಡಿಲ್ಲ, ಬಳ್ಳಾರಿ ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ನಮಗೆ ಬಹುಮತ ಇಲ್ಲದ ಕಾರಣ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ, ಹಾಗಾಗಿ ಒಟ್ಟಿಗೆ ಪ್ರಚಾರ ಮಾಡುತ್ತೇವೆ ಎಂದು ಹೇಳಿದರು.
-
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ











Click it and Unblock the Notifications