ಶ್ರೀರಾಮುಲು ಒಬ್ಬ ದುರ್ಬಲ ನಾಯಕ: ಅನಿಲ್ ಲಾಡ್ ವಾಗ್ದಾಳಿ
ಬೆಂಗಳೂರು, ಅಕ್ಟೋಬರ್ 11: ಶ್ರೀರಾಮುಲು ಒಬ್ಬ ದುರ್ಬಲ ನಾಯಕ, ಅವರು ಅಷ್ಟು ಪ್ರಬಲ ನಾಯಕ ಆಗಿದ್ದರೆ ಯಾಕೆ ಮೊಣಕಾಲ್ಮೂರಿಗೆ ಹೋಗಿದ್ದಾರೆ ಎಂದು ಬಳ್ಳಾರಿ ಮಾಜಿ ಶಾಸಕ ಅನಿಲ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭೆ ಉಪ ಚುನಾವಣೆಗೆ ಬಳ್ಳಾರಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಡೆದಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ಬಲ ಇದೆ ಎಂದು ಮಾತನಾಡುತ್ತಾರೆ, ಶ್ರೀರಾಮುಲು ಕಾರಣದಿಂದಲೇ ಬಳ್ಳಾರಿಯಲ್ಲಿ ಪದೇ ಪದೇ ಉಪ ಚುನಾವಣೆ ಎದುರಾಗುತ್ತಿದೆ ಎಂದು ಗುಡುಗಿದರು.
ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಿಗೆ ಜಾರಕಿಹೊಳಿ-ಡಿಕೆಶಿ ಕಾರಣ?
ಬಳ್ಳಾರಿ ನಮ್ಮ ಭದ್ರಕೋಟೆ ಎಂದು ಹೇಳುತ್ತಾರೆ ಆದರೆ ಏನು ಅಭಿವೃದ್ಧಿ ಮಾಡಿದ್ದಾರೆ, ಈ ಚುನಾವಣೆ ನಿಜಕ್ಕೂ ದುಬಾರಿಯಾಗಿದೆ, ಉಪ ಚುನಾವಣೆ ಬಳಿಕ 4 ತಿಂಗಳಲ್ಲೇ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಇದರಿಂದ ರಾಜ್ಯ ಬೊಕ್ಕಸಕ್ಕೆ ಹೊಡೆತ ಬೀಳಲಿದೆ ಎಂದು ಹೇಳಿದರು.
ರಾಮನಗರ ಉಪ ಚುನಾವಣೆ : ಜೆಡಿಎಸ್ ಅಭ್ಯರ್ಥಿ ಘೋಷಣೆ
ಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ, ಒಂದೆರೆಡು ದಿನಗಳಲ್ಲಿ ಎಲ್ಲರೂ ಸೇರಿ ಆಯ್ಕೆ ಮಾಡುತ್ತೇವೆ, ಡಿಕೆ ಶಿವಕುಮಾರ್ ಅವರು ಪ್ರಭಾವಿ ನಾಯು, ಅವರನ್ನು ಬಳ್ಳಾರಿ ಉಸ್ತುವಾರಿಯನ್ನಾಗಿ ಮಾಡಿರುವುದಕ್ಕೆ ಯಾವುದೇ ಬೇಸರವಿಲ್ಲ ಎಂದರು.
ಉಪ ಚುನಾವಣೆ : ಉಸ್ತುವಾರಿಗಳನ್ನು ನೇಮಿಸಿದ ಕರ್ನಾಟಕ ಬಿಜೆಪಿ
ಬಳ್ಳಾರಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದಾರೆ ನಾವೇ ಕಣಕ್ಕಿಳಿಯುತ್ತಿದ್ದೆವು, ಆದರೆ ಅದು ಎಸ್ಟಿಗೆ ಮೀಸಲು ಕ್ಷೇತ್ರವಾಗಿದೆ. ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎನ್ನುವುದು ಸಹಜ, ನಾವೇನು ಠೇವಣಿ ಕಳೆದುಕೊಂಡಿಲ್ಲ, ಬಳ್ಳಾರಿ ಜನ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ನಮಗೆ ಬಹುಮತ ಇಲ್ಲದ ಕಾರಣ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ, ಹಾಗಾಗಿ ಒಟ್ಟಿಗೆ ಪ್ರಚಾರ ಮಾಡುತ್ತೇವೆ ಎಂದು ಹೇಳಿದರು.