ಮಗನ ಸಿನಿಮಾಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಅನಿತಾ ಕುಮಾರಸ್ವಾಮಿ
ಬೆಂಗಳೂರು, ಫೆಬ್ರವರಿ 07: ಮಗ ನಿಖಿಲ್ ಕುಮಾರಸ್ವಾಮಿ ಸಲುವಾಗಿ ತಾಯಿ ಅನಿತಾ ಕುಮಾರಸ್ವಾಮಿ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಹೌದು, ತಮ್ಮ ಒಡೆತನದ ಚೆನ್ನಾಂಬಿಕ ಬ್ಯಾನರ್ಸ್ ಅಡಿಯಲ್ಲಿ ಬಿಡುಗಡೆ ಆಗಿರುವ ನಿಖಿಲ್ ಕುಮಾರಸ್ವಾಮಿ ಅವರ ಸೀತಾರಾಮಕಲ್ಯಾಣ ಚಿತ್ರವನ್ನು ಆನ್ಲೈನ್ನಲ್ಲಿ ಬಿಡುಗಡೆ ಮಾಡಿದ್ದಾರೆಂದು ಆರೋಪಿಸಿ ಅನಿತಾ ಕುಮಾರಸ್ವಾಮಿ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Seetharama Kalyana Review : 'ಸೀತಾರಾಮ ಕಲ್ಯಾಣ', ಇದು ಎಲ್ಲದರ ಮಿಶ್ರಣ
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು ಫೆಬ್ರವರಿ 5 ರಂದು ಶಶಿಧರ್ ಟಿ.ಎಸ್. ಎಂಬುವರ ವಿರುದ್ಧ ದೂರು ನೀಡಿದ್ದು, ಪೊಲೀಸರು ಹಕ್ಕುಸಾಮ್ಯ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ನಾಯಕರಾಗಿ ನಟಿಸಿರುವ ಸೀತಾರಾಮಕಲ್ಯಾಣ ಚಿತ್ರವು ಜನವರಿ 25 ರಂದು ಬಿಡುಗಡೆ ಆಗಿತ್ತು, ಅದನ್ನು ಯಾರೋ ಮೊಬೈಲ್ನಲ್ಲಿ ಚಿತ್ರಿಸಿಕೊಂಡು ಫೆಸ್ಬುಕ್ ಮತ್ತು ಯೂಟ್ಯೂಬ್ಗೆ ಅಪ್ಲೋಡ್ ಮಾಡಿದ್ದರು.