ಅನ್ನಭಾಗ್ಯ ಬಗ್ಗೆ ದೂರಿದ್ದರೆ ಕರೆ ಮಾಡಿ!
ಬೆಂಗಳೂರು, ನ. 14 : ಸಿಎಂ ಸಿದ್ದರಾಮಯ್ಯ ಅವರ ಕನಸಿನ ಅನ್ನಭಾಗ್ಯ ಯೋಜನೆ ಬಗ್ಗೆ ದೂರುಗಳು ಹೆಚ್ಚಾಗಿದ್ದರಿಂದ ಆಹಾರ ಸಹಾಯವಾಣಿ ಎಂಬ ಕಾಲ್ ಸೆಂಟರ್ ಆರಂಭಿಸಲಾಗಿದೆ. ಅನ್ನಭಾಗ್ಯ ಯೋಜನೆಯ ಕುರಿತು ಸಾರ್ವಜನಿಕರು ತಮ್ಮ ದೂರುಗಳನ್ನು ಕಾಲ್ ಸೆಂಟರ್ ಗೆ ಕರೆ ಮಾಡುವ ಮೂಲಕ ನೀಡಬಹುದುದಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ಮತ್ತು ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಬುಧವಾರ 1967 ನಂಬರಿನ ಆಹಾರವಾಣಿ'ಗೆ ಚಾಲನೆ ನೀಡಿದರು. ಸಹಾಯವಾಣಿ ನಿರ್ವಹಣೆಗೆ ಆಹಾರ ಮತ್ತು ನಾಗರಿಕ ಸರಬರಾಜು ಆಯುಕ್ತರ ಕಚೇರಿಯಲ್ಲಿ 'ಸಾರ್ವಜನಿಕ ಕುಂದು-ಕೊರತೆ ಶಾಖೆ' (ಪಿಜಿಆರ್) ಎಂಬ ಪ್ರತ್ಯೇಕ ಶಾಖೆ ತೆರೆಯಲಾಗಿದೆ ಎಂದು ಸಚಿವರು ಹೇಳಿದರು.

ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವೆರೆಗೆ 4 ದೂರವಾಣಿ ಲೈನ್ಗಳು ಸಹಾಯವಾಣಿಯಾಗಿ ಕಾರ್ಯ ನಿರ್ವಹಿಸಲಿವೆ. ರಾಜ್ಯದ ವಿವಿಧ ಭಾಗಗಳಿಂದ ಬರುವ ದೂರುಗಳನ್ನು ಸ್ವೀಕರಿಸಲು ಇಲಾಖೆಯ ಕಚೇರಿಯಲ್ಲಿ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಸಹಾಯವಾಣಿ 'ಜಿಲ್ಲಾ ದೂರು ಮತ್ತು ಕುಂದುಕೊರತೆ ನಿವಾರಣಾ' ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಉಚಿತ ಕರೆ ಮಾಡುವ ಮೂಲಕ ಜನರು ಅನ್ನಭಾಗ್ಯ ಯೋಜನೆಯ ಕುರಿತು ಜನರು ದೂರು ಸಲ್ಲಿಸಬಹುದಾಗಿದೆ. ಗ್ರಾಹಕರು ಮತ್ತು ಪಡಿತರ ಚೀಟಿ ಹೊಂದಿರುವ ಜನರಿಗೆ ಉತ್ತಮ ಸೇವೆ ಒದಗಿಸಲು ಈ ಸೇವೆ ಆರಂಭಿಸಲಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಈ ಸಹಾಯವಾಣಿ ಆರಂಭಿಸಲಾಗಿದ್ದು, 1967 ಸಂಖ್ಯೆಯು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ವಿಶೇಷ ಸಂಖ್ಯೆಯಾಗಿದೆ ಎಂದು ಸಚಿವರು ಹೇಳಿದರು.
ಎಂತಹ ದೂರು ನೀಡಬಹುದು : ಪಡಿತರ ಚೀಟಿ ವಿತರಣೆ, ನಕಲಿ ಪಡಿತರ ಚೀಟಿ ಬಗ್ಗೆ, ನ್ಯಾಯಬೆಲೆ ಅಂಗಡಿಗಳಲ್ಲಿ ಅಸಮರ್ಪಕ ಪಡಿತರ ವಿತರಣೆ, ಅಧಿಕಾರಿಗಳ ಕಾರ್ಯವೈಖರಿ, ನ್ಯಾಯಬೆಲೆ ಅಂಗಡಿ ಮತ್ತು ಸಂಘಗಳ ಬಗ್ಗೆ, ಅಸಮರ್ಪಕ ಅಡುಗೆ ಅನಿಲ ವಿತರಣೆ ಹಾಗೂ ಇಲಾಖೆಗೆ ಸಂಬಂಧಿಸಿದ ಮಾಹಿತಿ ಬಗ್ಗೆ ಆಹಾರವಾಣಿ ಮೂಲಕ ಜನರು ದೂರುಗಳನ್ನು ನೀಡಬಹುದು.
ಅನ್ನಭಾಗ್ಯ ಫಲಕ ಕಡ್ಡಾಯ : ರಾಜ್ಯದ ಎಲ್ಲ ನ್ಯಾಯಬೆಲೆ ಅಂಗಡಿ ನಾಮಫಲಕಗಳಲ್ಲಿ 'ಅನ್ನಭಾಗ್ಯ' ಎಂದು ಬರೆಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದ ಸರ್ಕಾರಿ, ಖಾಸಗಿ ಮತ್ತು ಸಹಕಾರಿ ಸೇರಿದಂತೆ ಎಲ್ಲ 20 ಸಾವಿರ ನ್ಯಾಯಬೆಲೆ ಅಂಗಡಿಗಳಲ್ಲಿ 'ಅನ್ನಭಾಗ್ಯ' ಎಂದು ಬರೆಸಿ ವಿಶೇಷ ರೀತಿಯಲ್ಲಿ ವಿನ್ಯಾಸಗೊಳಿಸದ ಏಕರೂಪದ ನಾಮಫಲಗಳನ್ನು ಪ್ರದರ್ಶಿಸಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications