ಡಿಸಿಪಿ ಅಣ್ಣಾಮಲೈ ವರ್ಗಾವಣೆ ಆದೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ
ಬೆಂಗಳೂರು, ಫೆಬ್ರವರಿ 21: ಬೆಂಗಳೂರು ದಕ್ಷಿಣ ಭಾಗದ ಡಿಸಿಪಿ ಅಣ್ಣಾ ಮಲೈ ಅವರನ್ನು ವರ್ಗಾವಣೆ ಮಾಡಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿತ್ತು ಅದರಲ್ಲಿ ಡಿಸಿಪಿ ಅಣ್ಣಾ ಮಲೈ ಅವರ ಹೆಸರು ಕೂಡ ಇದ್ದಿದ್ದು ಚರ್ಚೆ ಗ್ರಾಸವಾಗಿತ್ತು. ಆದರೆ ಯಾವುದೇ ಹುದ್ದೆ ನೀಡಿಲ್ಲದಿರುವುದು ಚರ್ಚೆಗೆ ಕಾರಣವಾಗಿತ್ತು.
ಬೆಂಗಳೂರು ದಕ್ಷಿಣ ನೂತನ ಡೆಪ್ಯೂಟಿ ಕಮಿಷನರ್, ಐಪಿಎಸ್, ಕೆ ಅಣ್ಣಾಮಲೈ ಸಂದರ್ಶನ
ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಅಣ್ಣಾಮಲೈ ವರ್ಗಾವಣೆ ಆದೇಶವನ್ನು ರದ್ದು ಮಾಡಿದೆ ಅದರ ಜೊತೆಗೆ ಇದು ಸಿಬ್ಬಂದಿಯ ಎಡವಟ್ಟಿನಿಂದ ಆದ ಪ್ರಮಾದ ಅಧಿಕಾರಿಗಳ ಹೆಸರನ್ನು ಟೈಪ್ ಮಾಡುವುದರ ಜೊತೆಗೆ ಅಣ್ಣಾಮಲೈ ಅವರ ಹೆಸರನ್ನೂ ಟೈಪ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಣ್ಣಾಮಲೈ ಬೆಂಗಳೂರಿನಲ್ಲಿ ಹಲವು ರೌಡಶೀಟರ್ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ, ನೂರಾರು ವಾಹನಗಳನ್ನು ಜಪ್ತಿ ಮಾಡಿದ್ದರು, ಅಣ್ಣಾಮಲೈ ಅವರು ಇರುವುದರಿಂದಲೇ ಅಪರಾಧಗಳು ಕಡಿಮೆಯಾಗಿದೆ ಎನ್ನುವುದು ಹಲವರ ಅಭಿಪ್ರಾಯವಾಗಿದೆ. ಚಿಕ್ಕಮಗಳೂರಿನಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಬೆಂಗಳೂರಲ್ಲಿ ಭೂ ಮಾಫಿಯಾ ನಿಲ್ಲಿಸಿಲು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.