ಬೀದಿ ನಾಯಿಗಳಿಗೆ ಅನ್ನ ಹಾಕಿದರೆ ಚಪ್ಪಲಿ ಏಟು ಬೀಳುತ್ತೆ ಹುಷಾರ್ !
ಬೆಂಗಳೂರು, ಮಾರ್ಚ್ 06 : ಬೀದಿ ನಾಯಿಗಳಿಗೆ ಅನ್ನ ಹಾಕಿದರೆ ಚಪ್ಪಲಿಯಲ್ಲಿ ಹೊಡೆಯುವ ಮಂದಿ ಬೆಂಗಳೂರಿನಲ್ಲಿದ್ದಾರೆ. ಹೌದು, ಇಂತಹ ಮನ ಕಲುಕುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಬೀದಿ ನಾಯಿಗಳಿಗೆ ಅನ್ನ ಹಾಕುತ್ತಿದ್ದ ಮಹಿಳಾ ಟೆಕ್ಕಿ ಜತೆ ಜಗಳ ತೆಗೆದ ಸ್ಥಳೀಯರು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಮಾತ್ರವಲ್ಲ ಸಾರ್ವಜನಿಕವಾಗಿ ಯುವಕನೊಬ್ಬ ಚಪ್ಪಲಿಯಿಂದ ಬೆನ್ನಿಗೆ ಎಸೆದು ವಿಕೃತ ಮೆರೆದಿದ್ದಾನೆ. ಈ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ನಾಗರಬಾವಿಯ ವಿನಾಯಕ ಲೇಔಟ್ ಸತ್ಯಜಿತ್ ಎಂಬುವರ ಪತ್ನಿ ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು, ನಾಯಿಯನ್ನು ಸಾಕಿದ್ದರು. ಪ್ರತಿ ನಿತ್ಯ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದಳು. ಈ ನಾಯಿ ನೋಡಿ ಬೊಗಳುತ್ತಿದ್ದ ಬೀದಿ ನಾಯಿಗಳಿಗೆ ಪ್ರತಿ ನಿತ್ಯ ಆಹಾರ ಕೊಟ್ಟು ಸಲಹುತ್ತಿದ್ದಳು. ಇದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಮಹಿಳಾ ಟೆಕ್ಕಿ ಅನ್ನ ಹಾಕುವ ಕಾರಣದಿಂದಲೇ ಬೀದಿ ನಾಯಿಗಳು ರಾತ್ರಿ ವೇಳೆ ಬೈಕ್ ಸವಾರರ ಮೇಲೆ ಎರಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಈ ಬೀದಿಯಲ್ಲಿ ಓಡಾಡದಂತೆ ಮಹಿಳಾ ಟೆಕ್ಕಿಗೆ ಎಚ್ಚರಿಕೆ ನೀಡಿದ್ದರು.

ಇದಕ್ಕೆ ತಲೆ ಕೆಡಿಸಿಕೊಳ್ಳದ ಮಹಿಳಾ ಟೆಕ್ಕಿ ಶುಕ್ರವಾರ ಸಂಜೆ ಎಂದಿನಂತೆ ಬೀದಿ ನಾಯಿಗಳಿಗೆ ಅನ್ನ ಹಾಕಿದ್ದಾರೆ. ಈ ವೇಳೆ ಜಮಾಯಿಸಿದ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಯುವಕನೊಬ್ಬ ಮಹಿಳಾ ಟೆಕ್ಕಿಯ ಬೆನ್ನಿಗೆ ಚಪ್ಪಲಿಯಿಂದ ಹೊಡೆದಿದ್ದಾನೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳಾ ಟೆಕ್ಕಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಮಹಿಳೆಗೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications