ಇನ್ನು, ನಾಲ್ಕರಿಂದ ಏಳನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ
ಕರ್ನಾಟಕದಲ್ಲಿ ಇನ್ನು 4ರಿಂದ 7ನೇ ತರಗತಿವರೆಗಿನ ವಾರ್ಷಿಕ ಪರೀಕ್ಷೆಗಳನ್ನು ಪಬ್ಲಿಕ್ ಪರೀಕ್ಷೆಗಳನ್ನಾಗಿಸಲು ಸರ್ಕಾರ ನಿರ್ಧಾರ. ಬೆಂಗಳೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಪ್ರಕಟ
ಬೆಂಗಳೂರು, ಜುಲೈ 13: ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು ಇನ್ನು ಮುಂದೆ ನಾಲ್ಕರಿಂದ ಐದನೇ ತರಗತಿಯವರೆಗಿನ ಎಲ್ಲಾ ತರಗತಿಗಳ ವಾರ್ಷಿಕ ಪರೀಕ್ಷೆಗಳನ್ನು ಪಬ್ಲಿಕ್ ಪರಿಕ್ಷೆಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಶೇಠ್ ತಿಳಿಸಿದರು.
ಗುರುವಾರ, ನಗರದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಇತ್ತೀಚೆಗೆ ರಾಮನಗರದಲ್ಲಿ ಶಿಕ್ಷಕರ ಸಾಮರ್ಥ್ಯದ ಕುರಿತಂತೆ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಬಹುತೇಕ ಶಿಕ್ಷಕರು ಅನುತ್ತೀರ್ಣರಾಗಿದ್ದರು'' ಎಂದರು.

ತಮ್ಮ ಮಾತನ್ನು ಮುಂದುವರಿಸಿದ ಅವರು, ''ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, 4ರಿಂದ 7ನೇ ತರಗತಿವರೆಗಿನ ವಾರ್ಷಿಕ ಪರೀಕ್ಷೆಗಳನ್ನು ಪಬ್ಲಿಕ್ ಪರೀಕ್ಷೆಗಳನ್ನಾಗಿಸಲು ನಿರ್ಧರಿಸಿದೆ. ಇದರಿಂದ ಶಿಕ್ಷಕರ ಜವಾಬ್ದಾರಿ ಹೆಚ್ಚಲಿದ್ದು, ಗುಣಮಟ್ಟದ ಶಿಕ್ಷಣೆಗೆ ಆದ್ಯತೆ ಕಲ್ಪಿಸಲು ನೆರವಾಗುತ್ತದೆ'' ಎಂದು ಅವರು ವಿವರಿಸಿದರು.
ಈ ಪಬ್ಲಿಕ್ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನೂ ನೀಡಿ ಅವರಿಗೆ ಒಂದು ವರ್ಷ ಹಾಳಾಗದಂತೆ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
10 ಸಾವಿರ ಶಿಕ್ಷಕರ ನೇಮಕ
ಹಲವಾರು ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ ಎಂದು ತನ್ವೀರ್ ಶೇಠ್ ಇದೇ ವೇಳೆ ತಿಳಿಸಿದರು. ರಾಜ್ಯ ಸರ್ಕಾರ 10 ಸಾವಿರ ಶಿಕ್ಷಕರ ನೇಮಕಕ್ಕೆ ಅನುಮತಿ ನೀಡಿದೆ. ಅದರಲ್ಲಿ 6826 ಶಿಕ್ಷಕರನ್ನು ಹೈದರಾಬಾದ್ ಕರ್ನಾಟಕ ಭಾಗಕ್ಕೆ ನಿಯೋಜಿಸಲಾಗುವುದು. ಉಳಿದ 4600 ಶಿಕ್ಷಕರನ್ನು ಬೇರೆ ಬೇರೆ ಜಿಲ್ಲೆಗಳಿಗೆ ನೇಮಿಸಲಾಗುತ್ತದೆ ಎಂದರು.
ಗಡಿಭಾಗದ ಶಿಕ್ಷಕರಿಗೆ ಭತ್ಯೆ ನಿರ್ಧಾರ
ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ''ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ವಿಶೇಷ ಭತ್ಯೆ ನೀಡುವ ಕುರಿತು 6ನೇ ವೇತನ ಆಯೋಗದ ವರದಿಯ ನಂತರ ಪರಿಶೀಲನೆ ನಡೆಸಲಾಗುವುದು'' ಎಂದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications