ಸಿಕ್ಕಿದ್ದು 90 ಲಕ್ಷ, ಲೆಕ್ಕ ತೋರಿಸಿದ್ದ 9 ಲಕ್ಷ!
ಬೆಂಗಳೂರು, ಡಿಸೆಂಬರ್ 05 : ಸಿಸಿಬಿ ಪೊಲೀಸರ ಅವ್ಯವಹಾರಗಳ ಪಟ್ಟಿ ಮುಗಿಯುವಂತೆ ಕಾಣುತ್ತಿಲ್ಲ. ಮೊನ್ನೆ ತಾನೆ ಪೊಲೀಸ್ ಕೇಂದ್ರ ಕಚೇರಿಯಿಂದಲೇ 3 ಕೋಟಿ ದೋಚಿದ್ದ ಪ್ರಕರಣ ರಾಜ್ಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಠಿಸಿದ್ದ ಬೆನ್ನಲ್ಲೆ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ನವೆಂಬರ್ 9ರಂದು ನಗರದ ಮಡಿವಾಳದಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು 90 ಲಕ್ಷ ಹಣ ವಶಪಡಿಸಿಕೊಂಡಿದ್ದರು, ಆದರೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾಗ ತೋರಿಸಿದ್ದು 9 ಲಕ್ಷ ರೂಪಾಯಿ ಮಾತ್ರ. 81 ಲಕ್ಷ ರೂಪಾಯಿ ಹಣವನ್ನು ದಾಳಿ ಮಾಡಿದ್ದ ಪೊಲೀಸರೆ ನುಂಗಿ ನೀರು ಕುಡಿದಿದ್ದರು.

ದಾಳಿ ಸಮಯದಲ್ಲಿ ಬಂಧಿಸಿದ್ದ ಆಂಧ್ರದ ಎಂ.ಎಲ್.ಸಿ ಅವರ ಸಂಬಂಧಿಗಳನ್ನು ಪ್ರಕರಣದಿಂದ ಹೊರಗಿಡಲು 35 ಲಕ್ಷ ರೂಪಾಯಿ ಬೇಡಿಕೆಯನ್ನೂ ಸಿಸಿಬಿ ಪೊಲೀಸರು ಇಟ್ಟಿದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ.
ಸಿಸಿಬಿ ಪೊಲೀಸರ ಖಜಾನೆ ಕಳವು ಪ್ರಕರಣ ಬೆಳಕಿಗೆ ಬಂದ ಮೇಲೆ ಧೈರ್ಯ ಮಾಡಿದ ಎಂಎಲ್ಸಿ ಸಂಬಂಧಿಗಳು ಕಮಿಷನರ್ ಗೆ ಮೋರೆ ಹೋಗಿದ್ದಾರೆ. ಕಮಿಷನರ್ ಅವರು ದೂರಿನ ತನಿಖೆ ಮಾಡಲು ಜಂಟಿ ಪೊಲೀಸ್ ಆಯುಕ್ತರಿಗೆ ಸೂಚಸಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications