ಹ್ಯಾಕರ್ ಶ್ರೀಕೃಷ್ಣ ವಿರುದ್ಧ ಮತ್ತೊಂದು ಕೇಸು : 13 ದಿನ ಸಿಸಿಬಿ ವಶಕ್ಕೆ
ಬೆಂಗಳೂರು, ಡಿಸೆಂಬರ್ 02 : ಡ್ರಗ್ ಡೀಲ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹ್ಯಾಕರ್ ಶ್ರೀಕೃಷ್ಣ ವಿರುದ್ಧ ಸಿಸಿಬಿ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿ ಹದಿಮೂರು ದಿನ ಪೊಲೀಸ್ ವಶಕ್ಕೆ ಪಡೆದಿದ್ದಾರೆ.ಅನೇಕ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡಿರುವ ಸಂಗತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.
ಹ್ಯಾಕರ್ ಶ್ರೀಕಿ ಅನೇಕ ವೆಬ್ ತಾಣ ಹಾಗೂ ಗೇಪ್ ಆಪ್ ಗಳನ್ನು ಹ್ಯಾಕ್ ಮಾಡಿ ಅಕ್ರಮ ಎಸಗಿದ್ದಾನೆ. ಸರ್ಕಾರಿ ವೆಬ್ ತಾಣಗಳನ್ನು ಹ್ಯಾಕ್ ಮಾಡಿದ್ದು ವಿಚಾರಣೆ ವೇಳೆ ಸಾಕಷ್ಟು ಮಾಹಿತಿ ಹೊರ ಬಂದಿದೆ. ಈ ಹಿನ್ನೆಲೆಯಲ್ಲಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಈ ಹೊಸ ಪ್ರಕರಣದ ವಿಚಾರಣೆಗಾಗಿ ಶ್ರೀಕೃಷ್ಣ ನನ್ನು ಪುನಃ ಹದಿಮೂರು ದಿನಗಳ ವಶಕ್ಕೆ ಪಡೆದುಕೊಂಡಿದ್ದಾರೆ. ಎಸಿಪಿ ಶ್ರೀಧರ್ ಪೂಜಾರ್ ವಿಚಾರಣೆ ನಡೆಸುತ್ತಿದ್ದು, ಇನ್ನಷ್ಡು ಸ್ಫೋಟಕ ಸಂಗತಿಗಳು ಹೊರ ಬೀಳುವ ಸಾಧ್ಯತೆ ಇವೆ.
ನ್ಯಾಯಾಂಗ ಬಂಧನಲ್ಲಿರುವ ಡ್ರಗ್ ಡೀಲ್ ಪ್ರಮುಖ ಆರೋಪಿ ಪ್ರಸಿದ್ಧ ಶೆಟ್ಡಿ, ಸುನೀಶ್ ಹೆಗ್ಡೆ ಅವರು ಹ್ಯಾಕರ್ ಶ್ರೀಕಿಗಾಗಿ ಹುಡುಕಾಡಿದ್ದರು. ಅತ ಸಿಗಲಿಲ್ಲ ಎಂಬ ಕಾರಣಕ್ಕೆ ಶ್ರೀಕೃಷ್ಣ ಸ್ನೇಹಿತರನ್ನು ಅಪಹರಿಸಿ ಹಲ್ಲೆ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಕಿ ಯ ಸ್ನೇಹಿತರು ಪ್ರಸಿದ್ಧ ಶೆಟ್ಟಿ ಹಾಗೂ ಸುನೀಶ್ ವಿರುದ್ಧ ದೂರು ದಾಖಲಿಸಿದ್ದರು.

ಇದರ ಬೆನ್ನಲ್ಲೇ ಹ್ಯಾಕರ್ ಶ್ರೀಕೃಷ್ಣ ವಿರುದ್ಧ ಮತ್ತೊಂದು ಕೇಸು ದಾಖಲಾಗಿದೆ. ಸಿಸಿಬಿ ಪೊಲೀಸರ ವಿಚಾರಣೆ ಮುಗಿದ ಕೂಡಲೇ ಸಿಐಡಿ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಜತೆಗೆ ವಿದ್ವತ್ ಹಲ್ಲೆ ಪ್ರಕರಣದಲ್ಲೂ ಶ್ರೀಕಿ ಮೂರನೇ ಆರೋಪಿಯಾಗಿದ್ದು, ವಿಚಾರಣೆ ಎದುರಿಸಬೇಕಾಗಿದೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಸೋಷಿಯಲ್ ಮೀಡಿಯಾದಲ್ಲಿ ನಕಲಿ ಖಾತೆ ತೆರೆದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಸಂದೇಶ: 473 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications