13 ನಿಮಿಷದಲ್ಲಿ ರಾಮಯ್ಯ ಆಸ್ಪತ್ರೆ ತಲುಪಿದ ಜೀವಂತ ಹೃದಯ!
ಬೆಂಗಳೂರು, ಸೆಪ್ಟೆಂಬರ್ 28 : ಬೆಂಗಳೂರು ಟ್ರಾಫಿಕ್ ಪೊಲೀಸರು ನಿರ್ಮಿಸಿದ ಸಿಗ್ನಲ್ ರಹಿತ ಹಸಿರು ಕಾರಿಡಾರ್ ನಿಂದಾಗಿ 11 ಕಿ.ಮೀ. ದೂರವನ್ನು ಕೇವಲ 13 ನಿಮಿಷದಲ್ಲಿ ಕ್ರಮಿಸಿ ಜೀವಂತ ಹೃದಯವನ್ನು ಬುಧವಾರ ಸಂಜೆ ರವಾನಿಸಲಾಗಿದೆ.
ಹಲಸೂರಿನ ಎಚ್ಸಿಜಿ ಆಸ್ಪತ್ರೆಯಿಂದ ವಿದ್ಯಾರಣ್ಯಪುರದಲ್ಲಿರುವ ಎಂಎಸ್ ರಾಮಯ್ಯ ಆಸ್ಪತ್ರೆಗೆ ಕಸಿಗಾಗಿ ಜೀವಂತ ಹೃದಯವನ್ನು ರವಾನಿಸಲಾಗಿದೆ. ಸಂಜೆ 7.21ಕ್ಕೆ ಹೊರಟ ಜೀವಂತ ಹೃದಯ 13 ನಿಮಿಷದಲ್ಲಿ ಎಂಎಸ್ ರಾಮಯ್ಯ ಆಸ್ಪತ್ರೆಯನ್ನು ತಲುಪಿದೆ. [ಬೆಂಗಳೂರಲ್ಲಿ ಮಿಡಿದ ಮತ್ತೊಂದು ಜೀವಂತ ಹೃದಯ]

ಜೀವಂತ ಹೃದಯವನ್ನು ಸಾಗಿಸಲು ಸಹಕಾರ ನೀಡಿದ್ದಕ್ಕಾಗಿ ಹೃದಯ ವೈಶಾಲ್ಯತೆಯನ್ನು ಮೆರೆದ ಬೆಂಗಳೂರಿನ ರಸ್ತೆ ಸಂಚಾರಿಗಳಿಗೆ ಧನ್ಯವಾದಗಳನ್ನು ಹೆಚ್ಚುವರಿ ಪೊಲೀಸ್ ಆಯಕ್ತ(ಸಂಚಾರ)ರಾಗಿರುವ ಆರ್ ಹಿತೇಂದ್ರ ಅವರು ಅರ್ಪಿಸಿದ್ದಾರೆ. ಇದನ್ನು ಸಾಧ್ಯವಾಗಿಸಿದ ಸಂಚಾರಿ ಪೊಲೀಸರಿಗೆ ಅನಂತ ಧನ್ಯವಾದಗಳು.
ಸುಸಜ್ಜಿತ ಪೆಟ್ಟಿಗೆಯಲ್ಲಿ ಜೀವಂತ ಹೃದಯ ಎನ್ಆರ್ ಸ್ಕ್ವೇರ್, ಕೆಜಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಸಿಐಡಿ ಕೆಳಸೇತುವೆ, ಬಸವೇಶ್ವರ ವೃತ್ತ, ಹಳೆ ಹೈಗ್ರೌಂಡ್ ಜಂಕ್ಷನ್, ವಿಂಡ್ಸರ್ ಮ್ಯಾನರ್ ಹೋಟೆಲ್, ಪಿಜಿ ಹಳ್ಳಿ, ಮೇಖ್ರಿ ವೃತ್ತ ಎಡತಿರುವು, ಸಿವಿ ರಾಮನ್ ರಸ್ತೆ, ಸದಾಶಿವನಗರ ಟ್ರಾಫಿಕ್ ಪೊಲೀಸ್ ಸ್ಟೇಷನ್ ಬಲತಿರುವು, ನ್ಯೂ ಬಿಇಎಲ್ ರಸ್ತೆಯಲ್ಲಿ ಸಾಗಿ ಎಂಎಸ್ ರಾಮಯ್ಯ ಆಸ್ಪತ್ರೆ ತಲುಪಿದೆ.
More From
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications