ಮಂಗಳೂರು ಆಟೋ ಬ್ಲಾಸ್ಟ್ ಪ್ರಕರಣ: ಬೆಂಗಳೂರಲ್ಲಿ ಶಂಕಿತನ ಬಂಧನ
ಬೆಂಗಳೂರು, ನವೆಂಬರ್ 21: ಮಂಗಳೂರಿನ ನಾಗುರಿ ಬಳಿ ಆಟೋ ರಿಕ್ಷಾ ಬ್ಲಾಸ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಶಂಕಿತ ಆರೋಪಿಯೊಬ್ಬನ ಬಂಧನವಾಗಿದೆ.
ಮಹಮ್ಮದ್ ರುಹುಲ್ಲಾ ಎಂಬಾತನೇ ಬಂಧಿತ ವ್ಯಕ್ತಿ. ಈತ ಬೆಂಗಳೂರಿನ ಕೆ.ಜೆ.ಹಳ್ಳಿಯರುವ ಮಾಹಿತಿ ಕಲೆ ಹಾಕಿದ ಮೈಸೂರು ಪೊಲೀಸರು ಭಾನುವಾರವೇ ಬೆಂಗಳೂರಿಗೆ ಆಗಮಿಸಿದ್ದರು. ಯೋಜನೆಯಂತೆ ಪ್ರಕರಣದ ಶಂಕಿತ ಮಹಮ್ಮದ್ ರುಹುಲ್ಲಾ ಎಂಬಾತನನ್ನು ಬಂಧಿಸಲಾಗಿದೆ. ಈತನನ್ನು ವಿಚಾರಣೆ ಒಳಪಡಿಸಿರುವ ಪೊಲೀಸರಿಗೆ ಸಾಕಷ್ಟು ಮಾಹಿತಿ ಲಭ್ಯವಾಗಿದೆ. ಶಾರೀಕ್ ಬಗ್ಗೆಯೂ ಆರೋಪಿ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂದೆ ಬೆಂಗಳೂರಿನ ಕೆ.ಜಿ.ಹಳ್ಳಿಗೆ ಆಗಮಿಸಿದ್ದ ಬಂಧಿತ ಮಹಮ್ಮದ್ ಆಟೋ ಸ್ಪೋಟಕ್ಕೆ ಕಾರಣವಾಗಿರುವ ತೀರ್ಥಹಳ್ಳಿ ನಿವಾಸಿ ಶಾರೀಕ್ ಜೊತೆ ಭೇಟಿಯಾಗಿದ್ದ. ಅಲ್ಲಿಂದ ಈ ಇಬ್ಬರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಘಟನೆ ನಡೆದ ನಂತರ ರುಹುಲ್ಲಾ ಬೆಂಗಳೂರಿನಲ್ಲಿದ್ದರ ಬಗ್ಗೆ ಕೆ.ಜಿ.ಹಳ್ಳಿಯಲ್ಲಿರುವ ಬಗ್ಗೆ ನಗರದ ಪೂರ್ವ ವಿಭಾಗದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಆರೋಪಿಯನ್ನು ಬಂಧಿಸಿ ಸದ್ಯ ಮಂಗಳೂರಿಗೆ ಕರೆದೊಯ್ಯಲಾಗಿದೆ. ತನಿಖೆ ಪ್ರಗತಿಯಲ್ಲಿದೆ.

ಇನ್ನೂ ಪ್ರಕರಣ ನಡೆದ ಬಳಿಕ ಶಾರೀಕ್ ಹೆಸರು ಕೇಳಿ ಬಂದಿತ್ತು. ಆತನ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರಿಗೆ ಆತ ಇಸ್ಲಾಮಿಕ್ ಸ್ಟೇಟ್ ಜೊತೆ ಸಂಪರ್ಕ ಹೊಂದಿರುವ ಬಗ್ಗೆ ತಿಳಿದು ಬಂದಿದೆ. ಹೀಗಾಗಿ ಪ್ರಕರಣದಲ್ಲಿ ಆತನ ಹೆಸರನ್ನು ಪೊಲೀಸರು ಖಚಿತಪಡಿಸಿದ್ದಾರೆ. ಅಲ್ಲದೇ ತೀರ್ಥಹಳ್ಳಿ ಆತನ ಮನೆಗೂ ಪೊಲೀಸರು ದೌಡಾಯಿಸಿ ಹಲವರ ವಿಚಾರಣೆ ನಡೆಸಿ ತೆರಳಿದ್ದರು.

ಆಟೋ ಬ್ಲಾಸ್ಟ್ ಪ್ರಕರಣ ಸಂಬಂಧ ಭಾನುವಾರ ಮೈಸೂರಿನಲ್ಲಿ ಮಂಗಳೂರು ಹಾಗೂ ಮೈಸೂರು ಪೊಲೀಸರು ಲೋಕನಾಯಕ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿದ್ದರು. ನಂತರ ಅಲ್ಲಿದ್ದ ಇಬ್ಬರು ಶಂಕಿತರನ್ನು ಬಂಧಿಸಿದ್ದರು. ಮೈಸೂರು ಪೊಲೀಸರು ಸುಳಿವಿನ ಬೆನ್ನುಹತ್ತಿ ಬೆಂಗಳೂರಿಗೆ ಬಂದು, ಮತ್ತೊಬ್ಬ ಶಂಕಿತನನ್ನು ಬಂಧಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications