Siddaramaiah: ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯ ಒಪ್ಪಲ್ಲ: ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 16: ಸಂವಿಧಾನ ಮತ್ತು ಶರಣ ಸಾಹಿತ್ಯದ ಆಶಯ ಒಂದೇ ಆಗಿದ್ದು, ಅವುಗಳು ಜಾತಿ ತಾರತಮ್ಯ ಇಲ್ಲದ ಸಮಾಜ ನಿರ್ಮಾಣದ ಗುರಿಯನ್ನು ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಮಾಡಿ, ಎಸ್.ಷಡಕ್ಷರಿ ಅವರ "ಕ್ಷಣ ಹೊತ್ತು ಅಣಿಮುತ್ತು" ಕೃತಿಯನ್ನು ಬಿಡುಗಡೆ ಮಾತನಾಡಿದರು.

ಸಂವಿಧಾನ ವಿರೋಧಿಗಳು ಶರಣ ಸಾಹಿತ್ಯವನ್ನೂ ಒಪ್ಪುವುದಿಲ್ಲ. ಇಂಥಾ ಸಂವಿಧಾನ ವಿರೋಧಿಗಳನ್ನು ನಾವು ದೂರ ಇಡಬೇಕು. ಸಮಾಜದ ಋಣ ನಮ್ಮ ಮೇಲಿದೆ. ಆ ಋಣವನ್ನು ತೀರಿಸುವ ಮೂಲಕ ಬಸವಾದಿ ಶರಣರ ಆಶಯದ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಶರಣರು ನುಡಿದಂತೆ ನಡೆದವರು. ನಾವೂ ಆ ಮಾರ್ಗದಲ್ಲಿ ನಡೆಯಬೇಕು ಎಂದು ಅವರು ಕರೆ ನೀಡಿದರು.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡುವ ಬೇಡಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ನಾವು ಅಲ್ಪ ಮಾನವರಾಗಬಾರದು: ಸಿಎಂ
ವಚನ ಸಂಸ್ಕೃತಿ ಅಂದರೆ ಮಾನವೀಯ ಸಂಸ್ಕೃತಿ. ಮಾನವೀಯ ಬದಲಾವಣೆಯನ್ನು ಸಮಾಜದಲ್ಲಿ ತರಲು ಬಸವಾದಿ ಶರಣರು ಹೋರಾಟ ಮಾಡಿದರು. ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಕಾರಣಕ್ಕೆ ಬಡತನ ಮತ್ತು ತಾರತಮ್ಯ ಹೆಚ್ಚಾಯಿತು.
ಬಸವಾದಿ ಶರಣರು ಅನುಭವ ಮಂಟಪದ ಮೂಲಕ ಮೇಲು ಕೀಳಿನ , ಜಾತಿ ತಾರತಮ್ಯದ ವ್ಯವಸ್ಥೆಯನ್ನು ಅಳಿಸಿ ಮನುಷ್ಯರಾಗಿ ಬಾಳುವುದೇ ಅತ್ಯುನ್ನತ ಧರ್ಮ ಎಂದು ಸಾರಿದರು. ನಾವು ವಿಶ್ವ ಮಾನವರಾಗದಿದ್ದರೂ ಬೇಡ, ಅಲ್ಪ ಮಾನವರಾಗಬಾರದು ಎಂದು ಹೇಳಿದರು.
ದ್ವೇಷ, ವೈರತ್ವ , ಸೇಡು ಮನುಷ್ಯನ ಗುಣ ಅಲ್ಲ. ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ಜಾತಿ-ಧರ್ಮದ ಕಾರಣಕ್ಕೆ ದ್ವೇಷಿಸುತ್ತೀವಿ. ಇದು ಅತ್ಯಂತ ಅನಾಗರಿಕ ಎಂದು ವಿವರಿಸಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ, ಸಾಹಿತಿ ಗೋ.ರು.ಚನ್ನಬಸಪ್ಪ , ರಮಣಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್.ಷಡಕ್ಷರಿ, ಸಂಪಾದಕರುಗಳಾದ ವಿಶ್ವೇಶ್ವರ್ ಭಟ್ ಮತ್ತು ರವಿ ಹೆಗಡೆ , ಲೇಖಕಿ ವೀಣಾ ಬನ್ನಂಜೆ, ಮನು ಬಳಿಗಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications