ಆಂಬಿಡೆಂಟ್ ಪ್ರಕರಣ: ಸಿಸಿಬಿ ಅಲೋಕ್ ಕುಮಾರ್ ಭೇಟಿ ಮಾಡಿದ ರವಿಕೃಷ್ಣಾ ರೆಡ್ಡಿ
ಬೆಂಗಳೂರು, ಡಿಸೆಂಬರ್ 20: ಆಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಚಮುಕ್ತ ಕರ್ನಾಟಕ ವೇದಿಕೆ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ಇಂದು ಸಿಸಿಬಿ ಕಚೇರಿಗೆ ಭೇಟಿ ನೀಡಿ ಸಿಸಿಬಿ ಆಯುಕ್ತ ಅಲೋಕ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು.
ಆಂಬಿಡೆಂಟ್ ಪ್ರಕರಣದ ಬಗ್ಗೆ ಹಲವು ಮನವಿ ಪತ್ರಗಳನ್ನು ಹಿಡಿದು ಸಿಸಿಬಿ ಕಚೇರಿಗೆ ಹೋಗಿದ್ದ ರವಿಕೃಷ್ಣಾ ರೆಡ್ಡಿ ಅಲೋಕ್ ಕುಮಾರ್ ಹಾಗೂ ಆಂಬಿಡೆಂಟ್ ತನಿಖಾಧಿಕಾರಿ ಎಸಿಪಿ ಬಾಲರಾಜ್ ಮತ್ತು ಡಿಸಿಪಿ ಗುರುರಾಜ್ ಅವರನ್ನು ಭೇಟಿ ಮಾಡಿದ್ದಾಗಿ ಮಾಧ್ಯಮಗಳಿಗೆ ತಿಳಿಸಿದರು.
"ತನ್ನಿಂದ ಕೆಲವು ಹಾಲಿ/ಮಾಜಿ ಸಚಿವ/ಶಾಸಕರು ಹಾಗೂ ಕೆಲವು ಪೊಲೀಸ್ ಅಧಿಕಾರಿಗಳು ಹಣ ಪಡೆದಿದ್ದಾರೆ ಮತ್ತು ಅವರು ಯಾರು ಎಂದೂ ಸಯ್ಯದ್ ಫರೀದ್ ತನಗೆ ವಿಚಾರಣೆಯ ಸಂದರ್ಭದಲ್ಲಿ ತಿಳಿಸಿದ್ದಾನೆ" ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ಮಾಜಿ ತನಿಖಾಧಿಕಾರಿ ಎಸಿಪಿ ವೆಂಕಟೇಶ ಪ್ರಸನ್ನರನ್ನೂ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿ ಪರಿಗಣಿಸಬೇಕೆಂದು ಅಲೋಕ್ ಕುಮಾರ್ ಅವರು ಬಳಿ ಕೋರಿದ್ದಾಗಿ ರವಿಕೃಷ್ಣಾ ರೆಡ್ಡಿ ಅವರು ಹೇಳಿದ್ದಾರೆ.

ಆಂಬಿಡೆಂಟ್ ಪ್ರಕರಣದ ಬಗ್ಗೆ ಅಲೋಕ್ ಕುಮಾರ್ ಹಾಗೂ ತನಿಖಾಧಿಕಾರಿಗಳ ಬಳಿ ಸುಮಾರು ಅರ್ಧ ಗಂಟೆ ಕಾಲ ಚರ್ಚೆ ಮಾಡಿದ್ದಾಗಿ ರವಿಕೃಷ್ಣಾ ರೆಡ್ಡಿ ತಿಳಿಸಿದ್ದು, ರವಿಕೃಷ್ಣಾ ರೆಡ್ಡಿ ಅವರ ಮಾತು ಕೇಳಿದ ಅಲೋಕ್ ಕುಮಾರ್ ಅವರು, ತನಿಖಾಧಿಕಾರಿಗೆ, ಮಾಜಿ ತನಿಖಾಧಿಕಾರಿ ಬಳಿ ಹೇಳಿಕೆ ಪಡೆಯಲು ಸೂಚಿಸಿದ್ದಾರೆ ಎಂದು ಸ್ವತಃ ರವಿಕೃಷ್ಣಾ ರೆಡ್ಡಿ ಅವರು ಮಾಧ್ಯಮಗಳಿಗೆ ತಿಳಿಸಿದರು.
ಸಂತ್ರಸ್ತರಿಗೆ ಶೀಘ್ರ ನ್ಯಾಯ ಮತ್ತು ಪರಿಹಾರ ಆಗ್ರಹಿಸಿ ಮತ್ತು ಇಡೀ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಶನಿವಾರದಿಂದ (22-12-2018) ಮತ್ತೆ ಧರಣಿ ಸತ್ಯಾಗ್ರಹ ಆರಂಭವಾಗುತ್ತದೆ. ನ್ಯಾಯಪರರು ಬೆಂಬಲಿಸಬೇಕೆಂದು ಇದೇ ಸಂದರ್ಭದಲ್ಲಿ ರವಿಕೃಷ್ಣಾ ರೆಡ್ಡಿ ಅವರು ಕೋರಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications