MLC ಪುಟ್ಟಣ್ಣ ಉಚ್ಚಾಟನೆ, ಮತ್ತಷ್ಟು ಸದಸ್ಯರು JDS ತೊರೆವ ಸಾಧ್ಯತೆ?
ಬೆಂಗಳೂರು, ನವೆಂಬರ್ 06: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜನತಾದಳದಿಂದ ಉಚ್ಚಾಟಿಸಲಾಗಿದೆ. ಈ ಬೆಳವಣಿಗೆಯ ನಂತರ ಮತ್ತಷ್ಟು ಜೆಡಿಎಸ್ ಸದಸ್ಯರು ಮತ್ತು ಶಾಸಕರು ಪಕ್ಷ ಬಿಡುವ ನಿರ್ಧಾರ ಮಾಡಿದ್ದಾರೆ ಎಂದು ವದಂತಿ ಹಬ್ಬಿದೆ.
ಜೆಡಿಎಸ್ ಸುಪ್ರಿಮೋ ಎಚ್.ಡಿ.ದೇವೇಗೌಡ ಅವರು ಭಿನ್ನಾಭಿಪ್ರಾಯ ಶಮನಕ್ಕಾಗಿ ನವೆಂಬರ್ 12 ರಂದು ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಪುಟ್ಟಣ್ಣ ಈ ಮೊದಲೇ ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದರು. ಅವರನ್ನು ಈ ಬಾರಿ ಬಿಜೆಪಿ ಶಿಕ್ಷಕರ ಕ್ಷೇತ್ರದಿಂದ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದೆ ಎಂಬ ಮಾತು ಕೇಳಿಬರುತ್ತಿದೆ.

ಪಕ್ಷ ವಿರೋಧಿ ಚಟುವಟಿಕೆ
ಉಚ್ಚಾಟನೆ ಕುರಿತು ಪುಟ್ಟಣ್ಣ ಅವರಿಗೆ ಪತ್ರ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, "ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ವಿಧಾನ ಪರಿಷತ್ ಸದಸ್ಯ ಪುಟ್ಟ ಆದ ತಮ್ಮನ್ನು ಈ ಕೂಡಲೇ ಜಾರಿಗೆ ಬರುವಂತೆ ಜನತಾದಳ ಪಕ್ಷದಿಂದ ಉಚ್ಚಾಟಿಸಲಾಗಿದೆ" ಎಂದಿದ್ದಾರೆ.

ಮೂರು ಬಾರಿ ಗೆದ್ದಿದ್ದ ಪುಟ್ಟಣ್ಣ
ಮೂರು ಬಾರಿ ಜೆಡಿಎಸ್ ನಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ, ಇತ್ತೀಚೆಗಷ್ಟೇ ಪಕ್ಷ ಬಿಡುವ ಬಗ್ಗೆ ಮಾತನಾಡಿದ್ದರು. ತಾವು ಮೂರು ಬಾರಿ ಗೆದ್ದರೂ ತಮ್ಮನ್ನು ಮೂಲೆಗುಂಪು ಮಾಡಿ, ಬೇರೊಬ್ಬರನ್ನು ಆ ಸ್ಥಾನಕ್ಕೆ ಆರಿಸುವ ಹುನ್ನಾರ ನಡೆಯುತ್ತಿದೆ ಎಂಬುದು ಅವರ ಆರೋಪವಾಗಿತ್ತು.

ಬಿಜೆಪಿಯಿಂದ ಸ್ಪರ್ಧೆ?
ಜೂನ್ 2020 ರಲ್ಲಿ ನಡೆಯಲಿರುವ ವಿಧಾನಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ತಮ್ಮನ್ನು ಅಭ್ಯರ್ಥಿ ಮಾಡುವುದಿಲ್ಲ, ಮತ್ತು ಬೇರೊಬ್ಬರನ್ನು ಈ ಸ್ಥಾನಕ್ಕೆ ಆರಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪುಟ್ಟಣ್ಣ ಪಕ್ಷ ಬಿಡುವ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಈ ಕ್ಷೇತ್ರದಿಂದ ಸ್ಪರ್ಧಿಸಬಹುದು ಎನ್ನಲಾಗಿದೆ

ರಾಜಕೀಯ ವಲಯದಲ್ಲಿ ಗೊಂದಲ
ಈಗಾಗಲೇ ಜೆಡಿಎಸ್ ನ ಕೆಲವು ವಿಧಾನಪರಿಷತ್ ಸದಸ್ಯರು ಮತ್ತು ಕೆಲವು ಶಾಸಕರು ಸಹ ಪಕ್ಷ ಬಿಡುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ವದಂತಿ ಹಬ್ಬಿದ್ದು, ಈ ಎಲ್ಲ ಭಿನ್ನಾಭಿಪ್ರಾಯಗಳನ್ನು ಸರಿದೂಗಿಸಲು ನವೆಂಬರ್ 12 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಉಪಚುನಾವಣೆಯ ನಂತರ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಂಭವವಿದ್ದು, ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಎಚ್.ಡಿ.ದೇವೇಗೌಡರು ಈಗಾಗಲೇ ಹೇಳಿಕೆ ನೀಡಿದ್ದಾರೆ. ಪಕ್ಷ ಬಿಟ್ಟು ಬಿಜೆಪಿಯತ್ತ ಮುಖ ಮಾಡಲು ಯೋಚಿಸುತ್ತಿರುವ ಶಾಸಕರ ನಡೆ, ಮತ್ತು ಬಿಜೆಪಿ ಬೆಂಬಲಕ್ಕೇ ನಿಲ್ಲಲು ಮುಂದಾಗಿರುವ ಅಧ್ಯಕ್ಷರ ನಡೆ ರಾಜಕೀಯ ವಲಯದಲ್ಲಿ ಗೊಂದಲ ಮೂಡಿಸಿದೆ!
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications