ನೋಯ್ಡಾ ಅವಳಿ ಕಟ್ಟಡ ಮಾದರಿಯಲ್ಲಿ ಬೆಂಗಳೂರು ಕಟ್ಟಡಗಳ ತೆರವು
ಬೆಂಗಳೂರು, ಸೆಪ್ಟೆಂಬರ್ 13: ಬೆಂಗಳೂರಿನಲ್ಲಿ ನಡೆಯುತ್ತಿರುವ ಅತಿಕ್ರಮಣಗಳ ತೆರವು ಕುರಿತು ಚರ್ಚೆ ವಾಗ್ವಾದಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಮಂಗಳವಾರ ಮುಂದಿನ ಮಳೆಗಾಲದ ವೇಳೆಗೆ ಎಲ್ಲಾ ಅತಿಕ್ರಮಣಗಳನ್ನು ನೋಯ್ಡಾ ಅವಳಿ ಗೋಪುರ ಶೈಲಿಯಲ್ಲಿ ನೆಲಸಮ ಮಾಡಿ ತೆರವುಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಕಳೆದ ತಿಂಗಳು ನೋಯ್ಡಾದಲ್ಲಿ ದೇಶದ ಗಮನ ಸೆಳೆದಿದ್ದ ಸೂಪರ್ಟೆಕ್ ಅವಳಿ ಗೋಪುರಗಳ ನೆಲಸಮವನ್ನು ಉಲ್ಲೇಖಿಸಿದ ಸಚಿವರು, ಮುಂದಿನ ಮಳೆಗಾಲದ ವೇಳೆಗೆ ನಾವು ಬೆಂಗಳೂರಿನಲ್ಲಿ ಬಾಕಿ ಉಳಿದಿರುವ ಎಲ್ಲಾ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲಾಗುವುದು. ನೋಯ್ಡಾದಂತೆ ಎಲ್ಲಾ ಅಪಾರ್ಟ್ಮೆಂಟ್ಗಳನ್ನು ನೆಲಸಮ ಮಾಡಲಾಗುವುದು. ಅಧಿಕಾರಿಗಳು ಮತ್ತು ಬಿಲ್ಡರ್ಗಳ ವಿರುದ್ಧ ಕ್ರಮ ಮತ್ತು ಪ್ರವಾಹದಂತಹ ಪರಿಸ್ಥಿತಿಯ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಅವರು ತಿಳಿಸಿದರು.

ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಬುಲ್ಡೋಜರ್ ಕಾರ್ಯಾಚರಣೆ
ರಾಜ ಕಾಲುವೆಯಲ್ಲಿ ಮುಕ್ತವಾಗಿ ನೀರು ಹರಿದು ಹೋಗಲು ಸಮಸ್ಯೆ ಉಂಟು ಮಾಡಿ ಮನೆ ಕಟ್ಟಿಕೊಂಡಿರುವವರಿಗೆ ಒತ್ತುವರಿ ತೆರವು ನೋಟಿಸ್ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿಳಿಸಿದ್ದರು. ಈ ವರ್ಷದ ಆರಂಭದಲ್ಲಿ ಕೋಮು ಘರ್ಷಣೆಯ ಸಂದರ್ಭದಲ್ಲಿ ಪಕ್ಷಪಾತದ ಬುಲ್ಡೋಜರ್ ಕಾರ್ಯಚರಣೆಗಾಗಿ ಬಿಜೆಪಿಯು ಈ ಹಿಂದೆ ಆಡಳಿತ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ತೀವ್ರ ಟೀಕೆಯನ್ನು ಎದುರಿಸಿತ್ತು.

ದಿನನಿತ್ಯ ಪ್ರಯಾಣಿಕರಿಗೆ ಟ್ರಾಫಿಕ್ ಕಿರಿಕಿರಿ
ಕಳೆದ ಕೆಲವು ವಾರಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರು ಜಲಾವೃತದಿಂದ ತತ್ತರಿಸಿದೆ. ಈ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸ್ಥಳೀಯರು ಪ್ರವಾಹದಂತಹ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದಾರೆ. ದಿನನಿತ್ಯ ಪ್ರಯಾಣಿಕರು ಹಲವಾರು ಗಂಟೆಗಳ ಕಾಲ ಟ್ರಾಫಿಕ್ನಲ್ಲಿ ಸಿಲುಕಿಕೊಳ್ಳುತ್ತಾರೆ ಎಂಬ ವರದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ಎದುರಿಸುತ್ತಿವೆ. ಬೆಂಗಳೂರಿನ ವೈದ್ಯರೊಬ್ಬರು ಟ್ರಾಫಿಕ್ನಲ್ಲಿ ಸಿಲುಕಿಕೊಂಡು ತಮ್ಮ ಕಾರನ್ನು ಬಿಟ್ಟು ಮೂರು ಕಿಲೋಮೀಟರ್ ಓಡಿ ಶಸ್ತ್ರ ಚಿಕಿತ್ಸೆ ಮಾಡಿದ ವರದಿಯು ಪರಿಸ್ಥಿತಿಯ ಗಂಭೀರತೆಗೆ ಹಿಡಿದ ಕನ್ನಡಿಯಾಗಿತ್ತು.

ಆಡಳಿತಾರೂಢ ಬಿಜೆಪಿಗೆ ತರಾಟೆ
ವಿರೋಧ ಪಕ್ಷ ಕಾಂಗ್ರೆಸ್ ಬೆಂಗಳೂರಿನಲ್ಲಿ ಅಕ್ರಮ ನಿರ್ಮಾಣಗಳು ಮತ್ತು ಜಾಗದ ದುರುಪಯೋಗಕ್ಕೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಎಂದು ಸರ್ಕಾರವನ್ನು ದೂಷಿಸಿದರೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೂಲಸೌಕರ್ಯಗಳ ಕೊರತೆ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ಕೆರೆಗಳ ನಿರ್ವಹಣೆಗೆ ಎಂದಿಗೂ ಯೋಚಿಸಲಿಲ್ಲ
ಆದರೆ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ಸಂಪೂರ್ಣ ಯೋಜಿತವಲ್ಲದ ಆಡಳಿತದಿಂದ ಇದು ಸಂಭವಿಸಿದೆ. ಇದು ಕಾಂಗ್ರೆಸ್ ಸರ್ಕಾರದ ಕೆಟ್ಟ ಆಡಳಿತದ ಪರಿಣಾಮವಾಗಿದೆ. ಅವರು ಕೆರೆಗಳ ನಿರ್ವಹಣೆಗೆ ಎಂದಿಗೂ ಯೋಚಿಸಲಿಲ್ಲ. ಕೆರೆ ಬದಿಗಳಲ್ಲಿ ಬಲ, ಎಡ ಮತ್ತು ಉತ್ತರದಲ್ಲಿ ನಿರ್ಮಾಣಕ್ಕೆ ಅನುಮತಿ ನೀಡಿದರು. ಮತ್ತು ವಲಯವನ್ನು ಬಫರ್ ಮಾಡಿದರು ಎಂದು ಹೇಳಿದ್ದರು. ಏತನ್ಮಧ್ಯೆ, ರಾಜಕಾಲುವೆ ಅಭಿವೃದ್ಧಿಯಲ್ಲಿನ ಅವ್ಯವಹಾರದ ಬಗ್ಗೆ ಆಮ್ ಆದ್ಮಿ ಪಕ್ಷವೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಜಲಾವೃತದಿಂದ ಹೆಚ್ಚು ಹಾನಿಗೊಳಗಾದವರಿಗೆ ಪಕ್ಷವು ಉತ್ತರವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications