2 ತಿಂಗಳಿನಲ್ಲಿ ಯಶವಂತಪುರ ಎಪಿಎಂಸಿ ಸ್ಥಳಾಂತರ
ಬೆಂಗಳೂರು, ಮಾರ್ಚ್ 18; ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಯನ್ನು ಎರಡು ತಿಂಗಳಿನಲ್ಲಿ ದಾಸನಪುರ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುತ್ತದೆ. ಈ ಹಿಂದೆಯೇ ಈ ಕುರಿತು ಘೋಷಣೆ ಮಾಡಲಾಗಿತ್ತು.
ಗುರುವಾರ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯ ಎಸ್. ರವಿ ಪ್ರಶ್ನೆಗೆ ಉತ್ತರ ನೀಡಿದ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, "ಯಶವಂತಪುರ ಎಪಿಎಂಸಿ ಮಾರುಕಟ್ಟೆಯನ್ನು ನಗರದ ಹೊರವಲಯದ ದಾಸನಪುರ ಮಾರುಕಟ್ಟೆಗೆ ಎರಡು ತಿಂಗಳಿನಲ್ಲಿ ಸ್ಥಳಾಂತರ ಮಾಡಲಾಗುತ್ತದೆ" ಎಂದರು.
"ಎಪಿಎಂಸಿ ಮಾರುಕಟ್ಟೆ ಸ್ಥಳಾಂತರ ವಿಳಂಬವಾಗುತ್ತಿದೆ. ಇದರ ಹಿಂದೆ ಷಡ್ಯಂತ್ರ ಅಡಗಿದೆ. ದಾಸನಪುರಕ್ಕೆ ಸ್ಥಳಾಂತರಗೊಳ್ಳಲು ಇಷ್ಟವಿಲ್ಲದ ವ್ಯಾಪಾರಿಗಳು ವಿಳಂಬ ಮಾಡುತ್ತಿದ್ದಾರೆ. ಆದರೆ ಎರಡು ತಿಂಗಳಿನಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ" ಎಂದು ಸಚಿವರು ಹೇಳಿದರು.

ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಆಗಮಿಸುವ ಸಾವಿರಾರು ಲಾರಿಗಳಿಂದ ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ಈ ಹಿಂದೆಯೇ ಮಾರುಕಟ್ಟೆಯನ್ನು ದಾಸನಪುರಕ್ಕೆ ಸ್ಥಳಾಂತರ ಮಾಡಲು ತೀರ್ಮಾನ ಕೈಗೊಳ್ಳಲಾಗಿತ್ತು.
ಅಲ್ಲದೇ ಕೋವಿಡ್ ಪರಿಸ್ಥಿತಿ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಜನದಟ್ಟಣೆ ಕಡಿಮೆ ಮಾಡಲು ಯಶವಂತಪುರ ಮಾರುಕಟ್ಟೆಯಿಂದ ತರಕಾರಿ, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಸಗಟು ವ್ಯಾಪಾರವನ್ನು ನೆಲಮಂಗಲ ಸಮೀಪದ ದಾಸನಪುರ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗಿತ್ತು.
ದಾಸನಪುರ ಮಾರುಕಟ್ಟೆ ಸುಮಾರು 64 ಎಕರೆ ಪ್ರದೇಶದಲ್ಲಿದೆ. ಯಶವಂತಪುರ ಎಪಿಎಂಸಿ ಮಾರುಕಟ್ಟೆ ಅಲ್ಲಿಗೆ ಸ್ಥಳಾಂತರವಾಗುವುದರಿಂದ ನಗರಕ್ಕೆ ಆಗಮಿಸುವ ಲಾರಿಗಳ ಸಂಚಾರ ಕಡಿಮೆಯಾಗಲಿದೆ. ಇದರಿಂದಾಗಿ ಯಶವಂತಪುರ ಸುತ್ತಮುತ್ತ ಸಂಚಾರ ದಟ್ಟಣೆ ಕಡಿಮೆಯಾಗಲಿದೆ.
2006ರಲ್ಲಿ ಭೂ ಸ್ವಾಧೀನ; ಬೆಂಗಳೂರು ನಗರದ ಬೆಳವಣಿಗೆಯನ್ನು ಗಮನಿಸಿದ ಸರ್ಕಾರ 2006ರಲ್ಲಿ ದಾಸನಪುರ ಬಳಿ 64 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತು. ವಿಶಾಲವಾದ ಮಾರುಕಟ್ಟೆಯನ್ನು ನಿರ್ಮಾಣ ಮಾಡಿತು. ವ್ಯಾಪಾರಿಗಳಿಗೆ ಅಗತ್ಯವಾದ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಯಿತು.
ಕಾಮಗಾರಿ ಪೂರ್ಣಗೊಂಡು ಸುಸಜ್ಜಿತ ಮಾರುಕಟ್ಟೆ ನಿರ್ಮಾಣವಾದರೂ ಯಶವಂತಪುರದಿಂದ ಎಪಿಎಂಸಿ ಸ್ಥಳಾಂತರ ಕೇವಲ ಘೋಷಣೆಯಾಗಿಯೇ ಉಳಿಯಿತು. ಆದರೆ ಕೋವಿಡ್ ಸಂದರ್ಭದಲ್ಲಿ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ವರ್ತಕರನ್ನು ಸಂಪೂರ್ಣವಾಗಿ ಯಶವಂತಪುರದಿಂದ ದಾಸನಪುರಕ್ಕೆ ಸ್ಥಳಾಂತರ ಮಾಡಲಾಯಿತು.
ಯಶವಂತಪುರದಲ್ಲಿ ಸ್ವಂತ ಮತ್ತು ಬಾಡಿಗೆ ಮಳಿಗೆ ಹೊಂದಿರುವ ವರ್ತಕರು ದಾಸನಪುರಕ್ಕೆ ಸ್ಥಳಾಂತರವಾಗಲು ಒಪ್ಪುತ್ತಿಲ್ಲ. ಕೆಲವು ವರ್ತಕರು ದಾಸನಪುರದಲ್ಲಿ ಈಗ ವಹಿವಾಟು ನಡೆಸುತ್ತಿದ್ದಾರೆ. ಯಶವಂತಪುರದಲ್ಲಿ ಸ್ವಂತ ಮಳಿಗೆ ಇಲ್ಲದ ವರ್ತಕರು ದಾಸನಪುರದಲ್ಲಿ ವಹಿವಾಟು ಮಾಡುತ್ತಿದ್ದಾರೆ. ಆದರೆ ಸಂಪೂರ್ಣ ಎಪಿಎಂಸಿ ಯಾವಾಗ ಸ್ಥಳಾಂತರವಾಗಲಿದೆ? ಎಂಬುದು ಜನರ ಪ್ರಶ್ನೆಯಾಗಿತ್ತು.
ಕೋವಿಡ್ ಪರಿಸ್ಥಿತಿ ಬಳಿಕ ಯಶವಂತಪುರ, ದಾಸನಪುರ ಎರಡೂ ಕಡೆ ವ್ಯಾಪಾರ ವಹಿವಾಟು ನಡೆಸಲು ಒಪ್ಪಿಗೆ ನೀಡಲಾಗಿತ್ತು. ಇದಕ್ಕೆ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಸಾಲ ಮಾಡಿ ಮಳಿಗೆ ತೆರೆದಿದ್ದೇವೆ. ಹೀಗೆ ಎರಡು ಕಡೆ ಮಳಿಗೆ ನಡೆಸಲು ಸಾಧ್ಯವಿದೆಯೇ? ಎಂದು ಪಶ್ನೆ ಮಾಡಿದ್ದರು.
ಅಲ್ಲದೇ ಎರಡು ಕಡೆ ವ್ಯಾಪಾರ ವಹಿವಾಟು ನಡೆಯುತ್ತಿದ್ದರೆ ರೈತರು ಸಹ ಗೊಂದಲಕ್ಕೆ ಒಳಗಾಗಿದ್ದಾರೆ. ಎಲ್ಲಿ ಬೆಳೆಗೆ ಉತ್ತಮ ಬೆಲೆ ಸಿಗುತ್ತದೆ?. ಉತ್ಪನ್ನವನ್ನು ಎಲ್ಲಿಗೆ ತೆಗೆದುಕೊಂಡು ಹೋಗಬೇಕು? ಎಂಬುದು ಅವರ ಗೊಂದಲಕ್ಕೆ ಕಾರಣವಾಗಿದೆ.
ದಾಸನಪುರದ ಮಾರುಕಟ್ಟೆಯಲ್ಲಿ ಎ ಮ್ತು ಬಿ ಬ್ಲಾಕ್ ಸೇರಿ 252 ಮಳಿಗೆಗಳಿವೆ. ಬೆಂಗಳೂರು-ತುಮಕೂರು ರಸ್ತೆಯಿಂದ ಮಾರುಕಟ್ಟೆಗೆ 4 ಕಿ. ಮೀ. ದೂರವಿದೆ. ಆದರೆ ಯಶವಂತಪುರದಲ್ಲಿರುವ ಸ್ವಂತ ಮಳಿಗೆಗಳನ್ನು ಬಿಟ್ಟು ದಾಸನಪುರಕ್ಕೆ ಸ್ಥಳಾಂತರಗೊಳ್ಳಲು ವ್ಯಾಪಾರಿಗಳು ಒಪ್ಪುತ್ತಿಲ್ಲ.
ಸರ್ಕಾರ ವ್ಯಾಪಾರಿಗಳಿಗೆ ದಾಸನಪುರಕ್ಕೆ ಸ್ಥಳಾಂತರಗೊಳ್ಳಲು ಕೆಲವು ಷರತ್ತುಗಳನ್ನು ಹಾಕಿತ್ತು. ಆದರೆ ವ್ಯಾಪಾರಿಗಳು ಸ್ಥಳಾಂತರಕ್ಕೆ ಹಿಂದೇಟು ಹಾಕುವುದುದ ನೋಡಿ ಷರತ್ತುಗಳನ್ನು ಸಡಿಲಿಸಲಾಯಿತು. ಆದರೂ ಎಲ್ಲಾ ವ್ಯಾಪಾರಿಗಳು ಇನ್ನೂ ಸ್ಥಳಾಂತರಗೊಂಡಿಲ್ಲ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications