ಅಪೊಲೊ ಆಸ್ಪತ್ರೆಯಿಂದ ಮನೆ ಮನೆಗೆ ಕೋವಿಡ್-19 ಲಸಿಕೆ
ಬೆಂಗಳೂರು, ಏಪ್ರಿಲ್ 16: ಬೆಂಗಳೂರಿನಾದ್ಯಂತ ಇರುವ ಅಪಾರ್ಟ್ ಮೆಂಟ್ ನಿವಾಸಿಗಳ ಬಾಗಿಲಿಗೆ ಬಂದು ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮವನ್ನು ಅಪೊಲೊ ಕ್ರೆಡಲ್ ಮತ್ತು ಮಕ್ಕಳ ಆಸ್ಪತ್ರೆ ಹಮ್ಮಿಕೊಂಡಿದೆ.
ಇದರ ಮೊದಲ ಭಾಗವಾಗಿ ಅಪೊಲೊ ಕ್ರೆಡಲ್ ನಗರದ ಅತಿದೊಡ್ಡ ಅಪಾರ್ಟ್ಮೆಂಟ್ ಸಂಕೀರ್ಣಗಳಾದ ಪ್ರೆಸ್ಟೀಜ್ ಶಾಂತಿ ನಿಕೇತನ ಮತ್ತು ಸ್ಟರ್ಲಿಂಗ್ ಶಾಲೋಮ್ನ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ಗಳೊಂದಿಗೆ ಕೈ ಜೋಡಿಸಿ, ಯಶಸ್ವಿಯಾಗಿ 230 ಕ್ಕೂ ಹೆಚ್ಚು ಫಲಾನುಭವಿಗಳೊಂದಿಗೆ, ತನ್ನ ಮೊದಲ ಲಸಿಕೆಯ ಹಂತವನ್ನು ಪೂರ್ಣಗೊಳಿಸಿದೆ.
ಅಪೊಲೊ ಕ್ರೆಡಲ್ ಮತ್ತು ಮಕ್ಕಳ ಆಸ್ಪತ್ರೆ, ಏಪ್ರಿಲ್ 21, 2021 ರವರೆಗೆ ತನ್ನ ಎರಡನೆಯ ಹಂತದಲ್ಲಿ ನಗರದಾದ್ಯಂತ ಪ್ರಾರಂಭಿಸಲಿದೆ, ಈ ಸೇವೆಯು ಯಾವುದೇ ಹೆಚ್ಚುವರಿ ವೆಚ್ಚ ಇಲ್ಲದ ಸಾರ್ವಜನಿಕ ಹಿತಾಸಕ್ತಿಗಾಗಿ ಆರಂಭಿಸಲಾಗಿದೆ.

ಅಪೊಲೊ ಕ್ರೆಡಲ್ ಮತ್ತು ಮಕ್ಕಳ ಆಸ್ಪತ್ರೆ ಸಿಒಒ ಅನುಭವ್ ಪ್ರಶಾಂತ್ ಮಾತನಾಡಿ, "ಕೋವಿಡ್-19 ಲಸಿಕೆಯ ಆಯಾ ಸ್ಥಳದಲ್ಲಿ ಇರುವ ಬೆಂಗಳೂರಿನ ಅಪಾರ್ಟ್ಮೆಂಟ್ ಸಂಘಗಳು ಮತ್ತು ನಿವಾಸಿ ಕಲ್ಯಾಣ ಸಂಘಗಳೊಂದಿಗೆ (ಆರ್ ಡಬ್ಲ್ಯೂಎ) ಆಡಳಿತದಲ್ಲೇ ಈ ಯೋಜನೆ ನಿರ್ವಹಿಸಲು ನಾವು ಸಂತೋಷಪಡುತ್ತೇವೆ. ಕರ್ನಾಟಕದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟ ಅಂದಾಜು 50 ಲಕ್ಷ ಜನರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 14 ಲಕ್ಷ ಜನರು ಮತ್ತು ಕೊಮೊರ್ಬಿಡಿಟಿಗಳನ್ನು ಹೊಂದಿದ್ದಾರೆ. ಈ ರೀತಿಯ ಉಪಕ್ರಮವು ಲಸಿಕೆ ನೀಡಿಕೆಯ ನಿರ್ವಹಣೆಯನ್ನು ತ್ವರಿತಗೊಳಿಸಲು ಸಹಾಯ ಮಾಡುತ್ತದೆ''ಎಂದರು.

ವೈದ್ಯಕೀಯ ಸೇವೆಗಳ ನಿರ್ದೇಶಕ ಡಾ. ಅಜಯ್ ಗಂಗೋಲಿ, ಮಾತನಾಡಿ , ''70 ವರ್ಷಗಳಿಗಿಂತ ಹೆಚ್ಚಿನ ಜನರಿಗೆ ಸೇವೆಯನ್ನು ನೀಡುತ್ತಿದ್ದು, ವೇಗವಾಗಿ ಹರಡುತ್ತಿರುವ ಈ ಸಾಂಕ್ರಾಮಿಕ ಖಾಯಿಲೆಗೆ ಲಸಿಕೆ ಪಡೆಯಲು ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮತ್ತು ಹೆಚ್ಚು ಸಂಚಾರ ಮಾಡದ ದುರ್ಬಲ, ಅಸಹಾಯಕರಿಗೆ ಈ ಯೋಜನೆ ಅನುಕೂಲವಾಗಲಿದೆ"ಎಂದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications