ದೇಶದ್ರೋಹಿ ಹೇಳಿಕೆಗೆ ಕ್ಷಮೆ ಕೋರುತ್ತೇನೆ, ಆದರೆ ಹಿಂಪಡೆಯೊಲ್ಲ: ಡಿವಿಎಸ್
ಬೆಂಗಳೂರು, ಅಕ್ಟೋಬರ್ 4: ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರನ್ನು 'ದೇಶದ್ರೋಹಿ' ಎಂದು ಪರೋಕ್ಷವಾಗಿ ನಿಂದಿಸಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುವುದಾಗಿ ತಿಳಿಸಿದ್ದಾರೆ. ಆದರೆ ತಾವು ನೀಡಿರುವ ಹೇಳಿಕೆಯನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ನಾನು ಚಕ್ರವರ್ತಿ ಸೂಲಿಬೆಲೆ ಅವರ ಹೆಸರನ್ನೇ ಪ್ರಸ್ತಾಪಿಸಿರಲಿಲ್ಲ. ಆದರೆ ಮಾಧ್ಯಮದವರು ಅವರ ಹೆಸರನ್ನು ಸುಮ್ಮನೆ ಹಾಕುತ್ತಿದ್ದಾರೆ. ಹಾರಿಕೆ ಸುದ್ದಿ ಹರಡುವವರು ದೇಶದ್ರೋಹಿಗಳು ಎನ್ನುವುದು ಗಾಂಧೀಜಿ ಅವರ ಮಾತು. ಮೋದಿ ಬಗ್ಗೆ ಟೀಕೆಗಳನ್ನು ಮಾಡಿರುವುದಕ್ಕೆ ಅವರ ಸಂಪುಟದ ಸಚಿವನಾಗಿ ಹಾಗೆ ಪ್ರತಿಕ್ರಿಯೆ ನೀಡಿದ್ದೇನೆ ಎಂದು ಹೇಳಿದರು.
'ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ' ಎಂದು ಸದಾನಂದ ಗೌಡ ಅವರು ಚಕ್ರವರ್ತಿ ಸೂಲಿಬೆಲೆ ಅವರ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದರು.
ಇದು ವ್ಯಾಪಕ ಚರ್ಚೆಗೆ ಒಳಗಾಗಿತ್ತು. ಸದಾನಂದ ಗೌಡ ವಿರುದ್ಧ ಬಿಜೆಪಿ ಬೆಂಬಲಿಗರೇ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಸದಾನಂದ ಗೌಡ ಅವರು ತಮ್ಮನ್ನು ಬ್ಲಾಕ್ ಮಾಡಿರುವುದಾಗಿ ಸೂಲಿಬೆಲೆ ತಿಳಿಸಿದ್ದರು.

ಪಾಪದ ವ್ಯಕ್ತಿಯಾಗಿರುವುದರಿಂದ ದಾಳಿ
'ನಾನು ಪಾಪದ ವ್ಯಕ್ತಿಯಾಗಿರುವುದರಿಂದ ನನ್ನ ಮೇಲೆ ದಾಳಿಗಳು ನಡೆಯುವುದು ಜಾಸ್ತಿ. ನಾಲಿಗೆ ಹರಿಬಿಡುವವರ ವಿರುದ್ಧ ಅವರೇನೂ ಹೇಳುವುದಿಲ್ಲ. ನಮ್ಮಂಥವರ ಬಗ್ಗೆ ಮಾತನಾಡುವಾಗ ಮಾತ್ರ ಅವರ ನಾಲಿಗೆ ಕತ್ತಿಯಾಗಿ ಬದಲಾಗುತ್ತದೆ' ಎಂದರು.

ಮೋದಿ, ಶಾ ಸ್ಪಂದಿಸಿದ್ದಾರೆ
'ನೆರೆ ಪರಿಹಾರದ ಕುರಿತು ಯಾರು ಎಷ್ಟೇ ಟೀಕೆಟಿಪ್ಪಣಿಗಳನ್ನು ಮಾಡಿದರೂ ಅಂಜುವುದಿಲ್ಲ. ರಾಜ್ಯ ಸರ್ಕಾರವು ಕೇಂದ್ರಕ್ಕೆ 15 ಸಾವಿರ ಕೋಟಿ ರೂ. ನಷ್ಟದ ಕುರಿತು ವರದಿ ನೀಡಲಾಗಿದೆ. ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದ್ದೇವೆ. ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ' ಎಂದು ತಿಳಿಸಿದರು.

ದಿಕ್ಕುತಪ್ಪಿಸುವವರ ಬಗ್ಗೆ ಅನುಕಂಪ
'ಪ್ರವಾಹ ಪರಿಹಾರದ ಕುರಿತು ಇಲ್ಲಸಲ್ಲದ ಸುಳ್ಳುಗಳನ್ನು ಹೇಳಿ ಜನರ ದಿಕ್ಕುತಪ್ಪಿಸುವವರ ಕುರಿತು ನನಗೆ ಅನುಕಂಪವಿದೆ. ನೆರೆ ಪೀಡಿತ ಪ್ರದೇಶದಲ್ಲಿ ಯಾವ ಯಾವ ಪರಿಹಾರ ಕಾರ್ಯಗಳು ನಡೆಯಬೇಕು ಎಂದು ವರದಿಗಳನ್ನು ತಯಾರಿಸಿರುವುದರ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗಾಗಲೇ ಮಾಹಿತಿ ನೀಡಿದ್ದಾರೆ. ತತ್ಕ್ಷಣದ ಪರಿಹಾರಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕ್ರಮ ತೆಗೆದುಕೊಂಡಿದ್ದಾರೆ' ಎಂದು ಸದಾನಂದ ಗೌಡ ಟ್ವೀಟ್ ಮಾಡಿದ್ದರು.

ಹೇಳಿದ ಕೂಡಲೆ ದೇಶದ್ರೋಹಿ ಆಗೊಲ್ಲ
ಸದಾನಂದಗೌಡರು ಯಾರನ್ನೂ ವೈಯಕ್ತಿಕವಾಗಿ ಹೆಸರಿಸಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆಯೋ ತಿಳಿದಿಲ್ಲ. ಆದರೆ ಹಾಗೆ ಹೇಳಿಕೆ ನೀಡಿದ ಕೂಡಲೇ ಯಾರೂ ದೇಶದ್ರೋಹಿ ಆಗಲು ಸಾಧ್ಯವಿಲ್ಲ. ಸೂಲಿಬೆಲೆ ಅವರು ಯುವಕರನ್ನು ಸಂಘಟನೆ ಮಾಡಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಪೇಜಾವರ ಶ್ರೀಗಳು ಬಾಗಲಕೋಟೆಯಲ್ಲಿ ಹೇಳಿಕೆ ನೀಡಿದ್ದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications