ಬೆಂಗಳೂರಿನ ಜೆ.ಪಿ.ಭವನದಲ್ಲಿದ್ದ ಅಪ್ಪಾಜಿ ಕ್ಯಾಂಟೀನ್ಗೆ ಬೀಗ
ಬೆಂಗಳೂರು, ಡಿಸೆಂಬರ್ 26 : ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿಯಲ್ಲಿದ್ದ 'ಅಪ್ಪಾಜಿ ಕ್ಯಾಂಟೀನ್' ಬಾಗಿಲು ಮುಚ್ಚಿದೆ. ಕ್ಯಾಂಟೀನ್ ಅನ್ನು ಮುಚ್ಚಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸ್ಪಷ್ಟಪಡಿಸಿದ್ದಾರೆ.
'ಜೆಡಿಎಸ್ ಕಚೇರಿ ಆವರಣದಲ್ಲಿ ಆರಂಭವಾಗಿದ್ದ ಕ್ಯಾಂಟೀನ್ 1 ವರ್ಷದಿಂದ ನಡೆಯುತ್ತಿತ್ತು. ಕ್ಯಾಂಟೀನ್ಗೆ ಹೆಚ್ಚಿನ ಜನರು ಬರದ ಕಾರಣ ಆಹಾರ ವ್ಯರ್ಥವಾಗುತ್ತಿದೆ. ಆದ್ದರಿಂದ, 20 ದಿನಗಳ ಹಿಂದೆಯೇ ಕ್ಯಾಂಟೀನ್ ಮುಚ್ಚುವ ತೀರ್ಮಾನ ಮಾಡಲಾಗಿತ್ತು' ಎಂದು ಟಿ.ಎ.ಶರವಣ ಹೇಳಿದ್ದಾರೆ.
'ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರೊಂದಿಗೆ ಯಾವುದೇ ಅಸಮಾಧಾನವಿಲ್ಲ. ಎಚ್.ಡಿ.ರೇವಣ್ಣ ಅವರಿಗೆ ತಿಳಿಸಿಯೇ ಕ್ಯಾಂಟೀನ್ ಮುಚ್ಚುವ ತೀರ್ಮಾನವನ್ನು ಕೈಗೊಂಡಿದ್ದೇನೆ' ಎಂದು ಶರವಣ ಅವರು ಸ್ಪಷ್ಟನೆ ನೀಡಿದ್ದಾರೆ.

'ಹನುಂತನಗರದಲ್ಲಿರುವ ಕ್ಯಾಂಟೀನ್ ಅನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಪ್ರತಿ ದಿನ ಇಲ್ಲಿ 3,500 ಜನರು ಊಟ ಮಾಡುತ್ತಿದ್ದಾರೆ. ಹಸಿದವರಿಗೆ ಊಟ ನೀಡುವ ನನ್ನ ಉದ್ದೇಶ ಮುಂದುವರೆಯಲಿದೆ' ಎಂದು ಶರವಣ ತಿಳಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 5 ರೂ.ಗೆ ಉಪಹಾರ, 10 ರೂ. ಗೆ ಊಟ ನೀಡುವ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಆದರೆ, ಅದಕ್ಕೂ ಮೊದಲೇ ಹನುಮಂತನಗರದಲ್ಲಿ ಟಿ.ಎ.ಶರವಣ ಅವರು ಅಪ್ಪಾಜಿ ಕ್ಯಾಂಟೀನ್ ಅನ್ನು ಹನುಮಂತ ನಗರದಲ್ಲಿ ಮೊದಲು ಆರಂಭಿಸಿದರು.
5 ರೂ.ಗೆ ತಟ್ಟೆ ಇಡ್ಲಿ, ವಡೆ, ಖಾರಾಬಾತ್, ಕೇಸರಿ ಬಾತ್. 10 ರೂ.ಗೆ ಪೊಂಗಲ್, ರಾಗಿ ಮುದ್ದೆ, ಅನ್ನ ಸಾಂಬಾರು, 3 ರೂ. ಗೆ ಕಾಫಿ, ಟೀ ದೊರೆಯುತ್ತಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications