ಯುವ ಕೃಷಿಕರೆ ಇಲ್ಲಿ ಗಮನಿಸಿ, ನವೋದ್ಯಮ ಯೋಜನೆಯಡಿ ಭರ್ಜರಿ ಅವಕಾಶ!
ಬೆಂಗಳೂರು: ಕೃಷಿ ಇಲಾಖೆ ವತಿಯಿಂದ ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಗ್ರಾಮಿಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಅತ್ಯುತ್ತಮ ಯೋಜನೆ ಕೈಗೊಳ್ಳಲಾಗಿದೆ. ಈ ಮೂಲಕ ಕೃಷಿಯ ನೂತನ ತಾಂತ್ರಿಕತೆ, ನವೀನ ಪರಿಕಲ್ಪನೆ ವಾಣಿಜ್ಯೀಕರಣ ಉತ್ತೇಜಿಸುವ ಸಲುವಾಗಿ ನವೋದ್ಯಮ ಯೋಜನೆ ಅಡಿ, ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆ ಕುರಿತು ಸಂಪೂರ್ಣ ಮಾಹಿತಿಗೆ ಮುಂದೆ ಓದಿ.
ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆ ಜತೆ ಆರಂಭಿಸುವ ಹೊಸ ಕೃಷಿ ನವೋದ್ಯಮಿಗಳಿಗೆ ಶೇಕಡ 50 ರಷ್ಟು ಸಹಾಯಧನ (ಕನಿಷ್ಠ- ರೂ. 5 ಲಕ್ಷದಿಂದ ಗರಿಷ್ಟ ರೂ. 20 ಲಕ್ಷ ತನಕ) ಬ್ಯಾಂಕ್ ಸಾಲದ ಮುಖಾಂತರ ನೀಡಲಾಗುವುದು. ಹಾಗೂ ಕೃಷಿ ವಲಯದಲ್ಲಿ ಈಗಾಗಲೇ ಸ್ಥಾಪಿಸಲಾದ ನವೋದ್ಯಮ ವಿಸ್ತರಣೆಗಾಗಿ ಹಾಗೂ ಉನ್ನತೀಕರಣಕ್ಕಾಗಿ ಶೇಕಡ 50 ರಷ್ಟು ಸಹಾಯಧನವನ್ನು (ಕನಿಷ್ಠ ರೂ. 20 ಲಕ್ಷದಿಂದ ಗರಿಷ್ಟ ರೂ. 50 ಲಕ್ಷ ವರಗೆ) ಕೃಷಿ ವಲಯದ ನವೋದ್ಯಮಿಗಳಿಗೆ ಬ್ಯಾಂಕ್ ಸಾಲದ ಮುಖಾಂತರ ನೀಡಲಾಗುವುದು.

ವಿಶೇಷ ತರಬೇತಿಗೂ ವ್ಯವಸ್ಥೆ ಇದೆ
ಆಯ್ಕೆಯಾದ ನವೋದ್ಯಮಿಗೆ ಸಾಮರ್ಥ್ಯ ಅಭಿವೃದ್ಧಿಗೆ ಕೃಷಿ ವಿಶ್ವವಿದ್ಯಾಲಯ ICAR, CFTRI, CSIR, C-CAMP ಮತ್ತೆ ಇತರೆ ಸಂಶೋಧನಾ ಸಂಸ್ಥೆಗಳಾದ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಸ್ಥಾಪಿತವಾದ ಕೃಷಿ ನಾವೀನ್ಯತೆಗಾಗಿ ಶ್ರೇಷ್ಠತೆಯ ಕೇಂದ್ರಗಳ ಮೂಲಕ ತರಬೇತಿ ನೀಡಲಾಗುವುದು.
ಅರ್ಜಿ ಪಡೆಯಲು ಹೀಗೆ ಮಾಡಬಹುದು
ಆಸಕ್ತ ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಪ್ರಗತಿಪರ ರೈತರು ಹೆಚ್ಚಿನ ಮಾಹಿತಿಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಆನೇಕಲ್ ಮತ್ತು ಬೆಂಗಳೂರು ಉತ್ತರ, ಉಪ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು ಇಲ್ಲಿ ಭೇಟಿ ನೀಡಿ ಅರ್ಜಿ ಪಡೆಯಬಹುದು. ಅಥವಾ ದೂ. ಸಂಖ್ಯೆ: 080-26711594 ಗೆ ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಒಟ್ನಲ್ಲಿ ಸರ್ಕಾರದ ಈ ಯೋಜನೆ ಸದುಪಯೋಗ ಮಾಡಿಕೊಳ್ಳಲು ಈ ಮೂಲಕ ಪ್ರಕಟಣೆ ನೀಡಿ ಮಾಹಿತಿ ಕೊಡಲಾಗಿದೆ. ಹಾಗೇ ಯೋಜನೆಯ ಕುರಿತು ಯಾವುದೇ ರೀತಿಯ ಮಾಹಿತಿ ಪಡೆಯಲು ಕಚೇರಿ ಅಥವಾ ದೂರವಾಣಿ ಸಂಖ್ಯೆಗೆ ಅರ್ಹ ಅಭ್ಯರ್ಥಿಗಳು ಸಂಪರ್ಕವನ್ನೂ ಮಾಡಬಹುದು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications