ಅರಳುಮಲ್ಲಿಗೆ ಪ್ರತಿಷ್ಠಾನದಿಂದ ವಿಶಿಷ್ಟ ಪುರಂದರ ಆರಾಧನೆ
“ಅರಳುಮಲ್ಲಿಗೆ ಪ್ರತಿಷ್ಠಾನ” ಸಂಸ್ಥೆಯು ನಗರದ ಗಾಯನ ಸಮಾಜದ ನವೀಕೃತ ಸಭಾಂಗಣದಲ್ಲಿ ವಿಶಿಷ್ಟವಾದ ದಾಸಸಾಹಿತ್ಯ ಉತ್ಸವವನ್ನು ಏರ್ಪಡಿಸಿತ್ತು.
ಬೆಂಗಳೂರು, ಜನವರಿ 27: "ಅರಳುಮಲ್ಲಿಗೆ ಪ್ರತಿಷ್ಠಾನ" ಸಂಸ್ಥೆಯು ನಗರದ ಗಾಯನ ಸಮಾಜದ ನವೀಕೃತ ಸಭಾಂಗಣದಲ್ಲಿ ವಿಶಿಷ್ಟವಾದ ದಾಸಸಾಹಿತ್ಯ ಉತ್ಸವವನ್ನು ಏರ್ಪಡಿಸಿತ್ತು. ಪುರಂದರದಾಸರ ಆರಾಧನಾ ಪ್ರಯುಕ್ತ ನಡೆದ ಈ ಸಮಾರಂಭದಲ್ಲಿ ರಾಷ್ಟ್ರೀಯ ಸನ್ಮಾನ ಹಾಗೂ ಅಪೂರ್ವ ಗ್ರಂಥಗಳ ಬಿಡುಗಡೆ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು.
ಭಾವಿ ಪರ್ಯಾಯ ಪೀಠವೇರಲಿರುವ ಉಡುಪಿಯ ಫಲಿಮಾರು ಪೀಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿಯವರು ಚಾಲನೆ ನೀಡಿದ ದಾಸಸಾಹಿತ್ಯೋತ್ಸವದಲ್ಲಿ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ, ವಿದ್ವಾನ್ ಆರ್.ಕೆ.ಪದ್ಮನಾಭ, ಶಾಸಕರಾದ ರವಿ ಸುಬ್ರಹ್ಮಣ್ಯ ಡಾ|| ಎಂ. ಆರ್. ವಿ. ಪ್ರಸಾದ್, ಶ್ರೀನಿವಾಸರಾವ್ ಕಸಬೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದಾಸವಾಣಿ ಖ್ಯಾತಿಯ ಶಶಿಧರ ಕೋಟೆ ಅವರಿಂದ ವಿಶೇಷ ಭಕ್ತಿಗಾಯನ ನಡೆಯಿತು.
ರಾಜ್ಯದ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಭಜನ ಆಂದೋಲನ ಮಾಡಿರುವ ಹರಿದಾಸ ಸಂಘದ ಸಂಸ್ಥಾಪಕರೂ, ಖ್ಯಾತ ಪ್ರವಚನಕಾರರೂ ಆದ ಹರಾ ನಾಗರಾಜಾಚಾರ್ಯರಿಗೆ ಇಂಡಿಯನ್ ಪೀಸ್ ಯೂನಿವರ್ಸಿಟಿಯು ಗೌರವ ಡಾಕ್ಟರೇಟ್ ಪದವಿ ನೀಡಿರುವ ಸಂದರ್ಭದಲ್ಲಿ ಶ್ರೀಯುತರಿಗೆ ರಾಷ್ಟ್ರೀಯ ಸನ್ಮಾನ ಕಾರ್ಯಕ್ರಮವನ್ನು ಅರಳುಮಲ್ಲಿಗೆ ಪ್ರತಿಷ್ಠಾನ ವ್ಯವಸ್ಥೆ ಮಾಡಿತ್ತು.

ಏಳು ನೂರು ಪುಟಗಳ ಗ್ರಂಥ
ಈಗಾಗಲೇ ಐವತ್ನಾಲ್ಕು ಹರಿದಾಸ ಗ್ರಂಥಗಳನ್ನು ಸಮಾಜಕ್ಕೆ ನೀಡಿ, ಜಗತ್ತಿನ ನಾನಾ ರಾಷ್ಟ್ರಗಳಲ್ಲಿ ಅತ್ಯಂತ ಪ್ರಭಾವಪೂರ್ಣವಾಗಿ ದಾಸಸಾಹಿತ್ಯ ಪ್ರಚಾರ ಮಾಡಿ ಬಂದಿರುವ ಅಂತರರಾಷ್ಟ್ರೀಯ ಖ್ಯಾತಿಯ ಹರಿದಾಸ ವಿದ್ವಾಂಸರಾದ ವಿದ್ಯಾವಾಚಸ್ಪತಿ ಡಾ|| ಅರಳುಮಲ್ಲಿಗೆ ಪಾರ್ಥಸಾರಥಿಯವರಿಂದ ರಚಿತವಾದ "ಪಾರ್ಥಸಾರಥಿ ವಿಠಲದಾಸರ ಸಹಸ್ರಾರು ಕೀರ್ತನೆಗಳು" ಎಂಬ ಏಳು ನೂರು ಪುಟಗಳ ಗ್ರಂಥ ಹಾಗೂ ಒಂದು ಸಾವಿರದ ಒಂಭೈನೂರು ಪುಟಗಳ ಉದ್ಗ್ರಂಥ "ಹರಿದಾಸರ ಹತ್ತುಸಾವಿರ ಹಾಡುಗಳು" ಕೃತಿಯ ನಾಲ್ಕನೆಯ ಆವೃತ್ತಿಯ ಲೋಕಾರ್ಪಣೆಯೂ ನಡೆಯಿತು.

ಹರಾ ನಾಗರಾಜಾಚಾರ್ಯ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಹರಾ ನಾಗರಾಜಾಚಾರ್ಯರಿಂದ ಸಂಪಾದಿತ ಕೃತಿ ಹರಿದಾಸವಾಣಿ ಈಗಾಗಲೇ 2 ಲಕ್ಷ ಪ್ರತಿಗಳು ಓದುಗರಿಗೆ ತಲುಪಿದ್ದು, ತೆಲುಗು, ತಮಿಳು ಭಾಷೆಗೂ ಅನುವಾದವಾಗಿದೆ. ವಾದಿರಾಜ ಪ್ರಶಸ್ತಿ, ವಿಜಯೀಂದ್ರ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಪುರಂದರ ಪ್ರಶಸ್ತಿ, ಮುಂತಾದ ಗೌರವ ಪ್ರಶಸ್ತಿ ಭಾಜನರಾಗಿದ್ದಾರೆ.

ಅರಳುಮಲ್ಲಿಗೆ ಪಾರ್ಥಸಾರಥಿ
ಐವತ್ನಾಲ್ಕು ಗ್ರಂಥಗಳು ಹಾಗೂ ನಲವತ್ತು ಧ್ವನಿ ಮುದ್ರಿಕೆಗಳು, ನಾಲ್ಕು ಸಹಸ್ರಕ್ಕೂ ಹೆಚ್ಚು ದೇಶವಿದೇಶಗಳಲ್ಲಿ ಮಾಡಿರುವ ಅಪೂರ್ವ ಪ್ರವಚನಗಳಿಂದಾಗಿ ವಿಶ್ವವಿಖ್ಯಾತರಾಗಿರುವ ಅರಳುಮಲ್ಲಿಗೆ ಪಾರ್ಥಸಾರಧಿಯವರು ಜಗತ್ತಿನ ನಾನಾ ರಾಷ್ಟ್ರಗಳ ಗಣ್ಯಾತಿಗಣ್ಯರಿಂದ ಹಾಗೂ ಪ್ರತಿಷ್ಠಿತ ಸಂಘಸಂಸ್ಥೆಗಳಿಂದ ವಿಶೇಷ ಗೌರವ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಗ್ಲೋಬಲ್ ವಿಷ್ಣು ಸಹಸ್ರನಾಮ ಸತ್ಸಂಗ ಫೆಡರೇಷನ್ ನಂಥ ಅಂತರರಾಷ್ಟ್ರೀಯ ಮಹತ್ವದ ಸಂಸ್ಥೆಯ ಸಂಸ್ಥಾಪಕರಾಗಿ, ದಾಸಸಾಹಿತ್ಯ ಹಾಗೂ ವಿಷ್ಣುಸಹಸ್ರನಾಮಗಳ ಬೃಹತ್ ಸಂಚಲನವನ್ನು ವಿಶ್ವಮಟ್ಟದಲ್ಲಿ ಶ್ರೀಯುತರು ಮೂಡಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಭಜನ ಆಂದೋಲನ
ರಾಜ್ಯದ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಭಜನ ಆಂದೋಲನ ಮಾಡಿರುವ ಹರಿದಾಸ ಸಂಘದ ಸಂಸ್ಥಾಪಕರೂ, ಖ್ಯಾತ ಪ್ರವಚನಕಾರರೂ ಆದ ಹರಾ ನಾಗರಾಜಾಚಾರ್ಯರಿಗೆ ಇಂಡಿಯನ್ ಪೀಸ್ ಯೂನಿವರ್ಸಿಟಿಯು ಗೌರವ ಡಾಕ್ಟರೇಟ್ ಪದವಿ ನೀಡಿರುವ ಸಂದರ್ಭದಲ್ಲಿ ಶ್ರೀಯುತರಿಗೆ ರಾಷ್ಟ್ರೀಯ ಸನ್ಮಾನ ಕಾರ್ಯಕ್ರಮವನ್ನು ಅರಳುಮಲ್ಲಿಗೆ ಪ್ರತಿಷ್ಠಾನ ವ್ಯವಸ್ಥೆ ಮಾಡಿತ್ತು.
ಈ ಕಾರ್ಯಕ್ರಮದಲ್ಲಿ ನಾಡಿನ ನಾನಾ ಭಜನಾ ಮಂಡಲಿಗಳು, ದಾಸಸಾಹಿತ್ಯ ತಂಡಗಳು ಹಾಗೂ ದಾಸಸಾಹಿತ್ಯದ ಹರಿದಾಸರುಗಳು, ಸಂಗೀತ ಸಂಸ್ಥೆಗಳ ಸದಸ್ಯರುಗಳು, ವ್ಯಾಪಕವಾಗಿ ಭಾಗವಹಿಸಿದ್ದರು.-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಪ್ರೇಮ್ ಬರೆದ ಹಾಡು ಅಕ್ಷರ ರೂಪದ ಬೆತ್ತಲೆ ಸಿನೆಮಾ ತೋರಿಸಿದಂತಿದೆ: ಅರುಣ್ ಜೋಳದಕೂಡ್ಲಿಗಿ ಬರಹ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications