ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಠಾಣೆಗೆ ಹಾಜರಾದ ಅರ್ಜುನ್ ಸರ್ಜಾ
ಬೆಂಗಳೂರು, ನವೆಂಬರ್ 05: ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿರುವ ಹಿರಿಯ ನಟ ಅರ್ಜುನ್ ಸರ್ಜಾ ಅವರು ವಿಚಾರಣೆಗೆಂದು ಕಬ್ಬನ್ ಪಾರ್ಕ್ನ ಪೊಲೀಸ್ ಠಾಣೆಗೆ ಹಾಜರಾದರು.
ನಟಿ ಶ್ರುತಿ ಹರಿಹರನ್ ಅವರು ಕೆಲವು ದಿನಗಳ ಹಿಂದೆ ಫೇಸ್ಬುಕ್ನಲ್ಲಿ #ಮೀಟೂ ಅಭಿಯಾನದಡಿ, ಅರ್ಜುನ್ ಸರ್ಜಾ ಅವರು ತಮಗೆ ಎರಡು ವರ್ಷಗಳ ಹಿಂದೆ 'ವಿಸ್ಮಯ' ಸಿನಿಮಾ ಚಿತ್ರೀಕರಣದ ವೇಳೆ ಲೈಂಗಿಕವಾಗಿ ದುರ್ವತನೆ ತೋರಿದ್ದರು ಎಂದು ಬರೆದುಕೊಂಡಿದ್ದರು.
ನಂತರದ ದಿನಗಳಲ್ಲಿ ಇದು ಭಾರಿ ವಿವಾದ ಸೃಷ್ಠಿಸಿತು, ಚಲನಚಿತ್ರ ಮಂಡಳಿ ನಡೆಸಿದ ಸಂಧಾನ ಸಹ ವಿಫಲವಾದ ಹಿನ್ನಲೆಯಲ್ಲಿ ಶ್ರುತಿ ಅವರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಹಾಗಾಗಿ ಇಂದು ಪೊಲೀಸರ ಮುಂದೆ ವಿಚಾರಣೆಗೆ ಅರ್ಜುನ್ ಸರ್ಜಾ ಹಾಜರಾಗಿದ್ದಾರೆ.
ಅರ್ಜುನ್ ಸರ್ಜಾ ಅವರು ಬರುತ್ತಾರೆಂದು ಕಬ್ಬನ್ ಪಾರ್ಕ್ ಠಾಣೆಯ ಮುಂದೆ ನೂರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಸೇರಿದ್ದರು. ಅರ್ಜುನ್ ಸರ್ಜಾ ಬರುತ್ತಿದ್ದಂತೆ ಅವರ ಪರ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಕೂಡ ಭಾಗಿ
ಅರ್ಜುನ್ ಸರ್ಜಾ ಅವರೊಂದಿಗೆ ಸಂಬಂಧಿಕರಾದ ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಕೂಡ ಆಗಮಿಸಿದ್ದರು. ಜೊತೆಗೆ ಬಿಜೆಪಿ ಮಾಜಿ ಸಂಸದೆ ತೇಜಸ್ವಿನಿ ಸಹ ಠಾಣೆಗೆ ಬಂದಿದ್ದರು. ತನಿಖಾಧಿಕಾರಿ ಅಣ್ಣಯ್ಯ ರೆಡ್ಡಿ, ಎಸ್ಐ ರೇಣುಕಾ ಅವರು ಸರ್ಜಾ ಅವರನ್ನು ವಿಚಾರಣೆ ನಡೆಸಿದ್ದಾರೆ. ಹೇಳಿಕೆಗಳನ್ನು ದಾಖಲಿಸಿಕೊಂಡು ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.

ಸ್ಥಳ ಮಹಜರು ಮಾಡಿದ್ದಾರೆ
ಶ್ರುತಿ ಅವರ ದೂರಿನ ಸಂಬಂಧ ಪೊಲೀಸರು ಈಗಾಗಲೇ ಸ್ಥಳ ಮಹಜರು ಮಾಡಿದ್ದಾರೆ. ದೂರಿನಲ್ಲಿ ಶ್ರುತಿ ಹರಿಹರನ್ ಅವರು ಪ್ರಸ್ತಾಪಿಸಿದ್ದ ಐದು ಜನರನ್ನು ಕರೆಸಿ ಅವರ ಹೇಳಿಕೆಗಳನ್ನೂ ಪೊಲೀಸರು ಪಡೆದಿದ್ದಾರೆ.

ಹೈಕೋರ್ಟ್ ಮೊರೆ ಹೋಗಿರುವ ಸರ್ಜಾ
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಅನ್ನು ರದ್ದು ಮಾಡಬೇಕು ಎಂದು ಅರ್ಜುನ್ ಸರ್ಜಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು ಅದರ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಲಾಗಿದೆ. ಆದರೆ ಪ್ರಕರಣ ಸಂಬಂಧ ಯಾರನ್ನೂ ಬಂಧಿಸದಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ.

ಶ್ರುತಿ ಹರಿಹರನ್ ವಿರುದ್ಧವೂ ಪ್ರಕರಣ
ತಮ್ಮ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಅವರು 5 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಅದರ ವಿಚಾರಣೆ ನವೆಂಬರ್ 9 ರಂದು ನಡೆಯಲಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications