ಅರ್ಕಾವತಿ ವಿವಾದ : ಸಿಎಂ ವಿರುದ್ಧ ದೂರು, ದಾಖಲೆ ಸಲ್ಲಿಕೆ
ಬೆಂಗಳೂರು, ಮಾ.2 : ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ಸಲ್ಲಿಕೆಯಾಗಿದೆ. ವಕೀಲರಿಬ್ಬರು ಇಂದು ನ್ಯಾಯಮೂರ್ತಿ ಕೆಂಪಣ್ಣ ನೇತೃತ್ವದ ತನಿಖಾ ಆಯೋಗಕ್ಕೆ ದೂರು ಮತ್ತು 810 ಪುಟಗಳ ದಾಖಲೆಗಳನ್ನು ಸಲ್ಲಿಕೆ ಮಾಡಿದ್ದಾರೆ.
ಬಿಜೆಪಿ ಬೆಂಬಲಿತ ವಕೀಲರಾದ ಎಸ್.ನಟರಾಜ್ ಶರ್ಮಾ ಮತ್ತು ದೊರೆರಾಜು ಅವರು ಬೆಂಗಳೂರಿನ ಕಾವೇರಿ ಭವನದ 6ನೇ ಮಹಡಿಯಲ್ಲಿರುವ ಕೆಂಪಣ್ಣ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ. ಆಯೋಗದ ಕಾರ್ಯದರ್ಶಿ ಎಸ್.ಶ್ರೀವತ್ಸ ಕೆದಿಲಾಯ ಅವರು ದೂರು ಸ್ವೀಕರಿಸಿದ್ದಾರೆ. [ಅರ್ಕಾವತಿ ಕಡತಗಳನ್ನು ಮುಟ್ಟಿಯೇ ಇಲ್ಲ]

ದೂರು ಸಲ್ಲಿಕೆ ನಂತರ ಮಾತನಾಡಿದ ನಟರಾಜ್ ಶರ್ಮಾ ಅವರು, ದಾಖಲೆ ಸಂಗ್ರಹ ವಿಳಂಬವಾದ ಕಾರಣ ದೂರು ಸಲ್ಲಿಸಲು ವಿಳಂಬವಾಯಿತು. ಆಯೋಗಕ್ಕೆ ಸಲ್ಲಿಕೆ ಮಾಡಿರುವ 810 ಪುಟಗಳ ದಾಖಲೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪವನ್ನು ದೃಢಪಡಿಸುತ್ತವೆ. [ಸಿದ್ದರಾಮಯ್ಯ ವಿರುದ್ಧ ದೂರು ನೀಡಲು ಬಿಜೆಪಿ ಸಿದ್ಧತೆ]
ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರುದ್ಧ ದೂರು ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಇದುವರೆಗೂ ರಾಜ್ಯಪಾಲರಿಗೆ ಪ್ರತಿಕ್ರಿಯೆ ಬಂದಿಲ್ಲ. ದೂರು ಸಲ್ಲಿಸಲು ಅವಕಾಶ ದೊರೆಯುವ ವಿಶ್ವಾಸವಿದೆ ಎಂದು ನಟರಾಜ್ ಶರ್ಮಾ ಹೇಳಿದರು. [ಸಿಎಂ ಡಿನೋಟಿಫಿಕೇಶನ್ ಮಾಡಿದ್ದು ಎಷ್ಟು]
ಅವಧಿ ವಿಸ್ತರಣೆ ಮಾಡಲಾಗಿತ್ತು : ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಆಯೋಗದ ಅವಧಿಯನ್ನು 6 ತಿಂಗಳ ಕಾಲ ವಿಸ್ತರಣೆ ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿತ್ತು.
ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಕುರಿತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಈಗಾಗಲೇ ಕೆಂಪಣ್ಣ ಅವರ ಆಯೋಗಕ್ಕೆ ಸುಮಾರು 1 ಲಕ್ಷ ಪುಟಗಳ ದಾಖಲೆಯನ್ನು ಸಲ್ಲಿಕೆ ಮಾಡಿದೆ.
-
ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications