ಅರ್ಕಾವತಿ ವಿವಾದ : ಸಿಎಂ ವಿರುದ್ಧ ದೂರು, ದಾಖಲೆ ಸಲ್ಲಿಕೆ
ಬೆಂಗಳೂರು, ಮಾ.2 : ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ಸಲ್ಲಿಕೆಯಾಗಿದೆ. ವಕೀಲರಿಬ್ಬರು ಇಂದು ನ್ಯಾಯಮೂರ್ತಿ ಕೆಂಪಣ್ಣ ನೇತೃತ್ವದ ತನಿಖಾ ಆಯೋಗಕ್ಕೆ ದೂರು ಮತ್ತು 810 ಪುಟಗಳ ದಾಖಲೆಗಳನ್ನು ಸಲ್ಲಿಕೆ ಮಾಡಿದ್ದಾರೆ.
ಬಿಜೆಪಿ ಬೆಂಬಲಿತ ವಕೀಲರಾದ ಎಸ್.ನಟರಾಜ್ ಶರ್ಮಾ ಮತ್ತು ದೊರೆರಾಜು ಅವರು ಬೆಂಗಳೂರಿನ ಕಾವೇರಿ ಭವನದ 6ನೇ ಮಹಡಿಯಲ್ಲಿರುವ ಕೆಂಪಣ್ಣ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ. ಆಯೋಗದ ಕಾರ್ಯದರ್ಶಿ ಎಸ್.ಶ್ರೀವತ್ಸ ಕೆದಿಲಾಯ ಅವರು ದೂರು ಸ್ವೀಕರಿಸಿದ್ದಾರೆ. [ಅರ್ಕಾವತಿ ಕಡತಗಳನ್ನು ಮುಟ್ಟಿಯೇ ಇಲ್ಲ]

ದೂರು ಸಲ್ಲಿಕೆ ನಂತರ ಮಾತನಾಡಿದ ನಟರಾಜ್ ಶರ್ಮಾ ಅವರು, ದಾಖಲೆ ಸಂಗ್ರಹ ವಿಳಂಬವಾದ ಕಾರಣ ದೂರು ಸಲ್ಲಿಸಲು ವಿಳಂಬವಾಯಿತು. ಆಯೋಗಕ್ಕೆ ಸಲ್ಲಿಕೆ ಮಾಡಿರುವ 810 ಪುಟಗಳ ದಾಖಲೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದಿರುವ ಆರೋಪವನ್ನು ದೃಢಪಡಿಸುತ್ತವೆ. [ಸಿದ್ದರಾಮಯ್ಯ ವಿರುದ್ಧ ದೂರು ನೀಡಲು ಬಿಜೆಪಿ ಸಿದ್ಧತೆ]
ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರುದ್ಧ ದೂರು ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಇದುವರೆಗೂ ರಾಜ್ಯಪಾಲರಿಗೆ ಪ್ರತಿಕ್ರಿಯೆ ಬಂದಿಲ್ಲ. ದೂರು ಸಲ್ಲಿಸಲು ಅವಕಾಶ ದೊರೆಯುವ ವಿಶ್ವಾಸವಿದೆ ಎಂದು ನಟರಾಜ್ ಶರ್ಮಾ ಹೇಳಿದರು. [ಸಿಎಂ ಡಿನೋಟಿಫಿಕೇಶನ್ ಮಾಡಿದ್ದು ಎಷ್ಟು]
ಅವಧಿ ವಿಸ್ತರಣೆ ಮಾಡಲಾಗಿತ್ತು : ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಆಯೋಗದ ಅವಧಿಯನ್ನು 6 ತಿಂಗಳ ಕಾಲ ವಿಸ್ತರಣೆ ಮಾಡಿ ಸರ್ಕಾರ ಶನಿವಾರ ಆದೇಶ ಹೊರಡಿಸಿತ್ತು.
ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಕುರಿತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಈಗಾಗಲೇ ಕೆಂಪಣ್ಣ ಅವರ ಆಯೋಗಕ್ಕೆ ಸುಮಾರು 1 ಲಕ್ಷ ಪುಟಗಳ ದಾಖಲೆಯನ್ನು ಸಲ್ಲಿಕೆ ಮಾಡಿದೆ.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications