ಅರ್ಕಾವತಿ ಫೈಟ್ : ಸರ್ಕಾರದಿಂದ 1 ಲಕ್ಷ ಪುಟಗಳ ದಾಖಲೆ ಸಲ್ಲಿಕೆ
ಬೆಂಗಳೂರು, ಫೆ.9 : ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ಗೆ ಸಂಬಂಧಿಸಿದಂತೆ ಪ್ರತಿಕ್ಷಗಳು ದಾಖಲೆ ಬಿಡುಗಡೆ ಮಾಡುತ್ತಿವೆ. ಇತ್ತ ರಾಜ್ಯ ಸರ್ಕಾರ ಇಂದು ಡಿನೋಟಿಫಿಕೇಶನ್ ಕುರಿತ ಒಂದೂವರೆ ಲಕ್ಷ ಪುಟದ ದಾಖಲೆಯನ್ನು ನ್ಯಾಯಮೂರ್ತಿ ಕೆಂಪಣ್ಣ ಅವರ ವಿಚಾರಣಾ ಆಯೋಗಕ್ಕೆ ಸಲ್ಲಿಕೆ ಮಾಡಲಿದೆ.
ಭಾನುವಾರ ನವದೆಹಲಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದ್ದು, ಸೋಮವಾರ ದಾಖಲೆಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿನ ಪ್ರತಿಪಕ್ಷಗಳು ಅನಾರೋಗ್ಯದಿಂದ ಬಳಲುತ್ತಿವೆ. ಸರ್ಕಾರದ ಉತ್ತಮ ಕೆಲಸವನ್ನು ಸಹಿಸಲಾಗದೆ ಅರ್ಕಾವತಿ ಹಗರಣದ ಕತೆ ಕಟ್ಟುತ್ತಿವೆ ಎಂದು ಆರೋಪಿಸಿದ್ದಾರೆ.

ಅರ್ಕಾವತಿ ಡಿನೋಟಿಫಿಕೇಷನ್ ಹಗರಣಗಳು ನಡೆದಿರುವುದು ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಎಂದು ಹೇಳಿದ ಸಿಎಂ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿ ಬರೆದಿರುವ ಪುಸ್ತಕದಲ್ಲಿ ಹುಳಿ ಉಪ್ಪು ಖಾರ ಯಾವುದೂ ಇಲ್ಲ ಎಂದು ಲೇವಡಿ ಮಾಡಿದರು. [ಅರ್ಕಾವತಿ ಹಗರಣದಲ್ಲಿ ಸಿಂಗ್ ಪಾಲಿದೆ]
ಬರಲಿಗೆ ಮತ್ತೊಂದು ಅರ್ಕಾವತಿ ಪುಸ್ತಕ : ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ಗೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ 490 ಪುಟಗಳ ಪುಸ್ತಕವನ್ನು ಈಗಾಗಲೇ ಬಿಡುಗಡೆ ಮಾಡಿದ್ದಾರೆ. ಸದ್ಯ, ಕಾಂಗ್ರೆಸ್ ಸಹ ಕಿರು ಪುಸ್ತಕವನ್ನು ಹೊರತರಲಿದೆ. [ಅರ್ಕಾವತಿ ಕರ್ಮಕಾಂಡ : ಕುಮಾರಸ್ವಾಮಿ ಪುಸ್ತಕದಲ್ಲೇನಿದೆ?]
ಬಿಜೆಪಿ ಮತ್ತು ಜೆಡಿಎಸ್ ಅರ್ಕಾವತಿ ಹಗರಣಕ್ಕೆ ಸಂಬಂಧಿಸಿದಂತೆ ಜನರನ್ನು ತಪ್ಪುದಾರಿಗೆ ಎಳೆಯುತ್ತಿವೆ. ಸುಳ್ಳು ದಾಖಲೆಗಳನ್ನು ಬಿಡುಗಡೆ ಮಾಡಿದ ಅದನ್ನು ಸತ್ಯವೆಂದು ಬಿಂಬಿಸಲು ಪ್ರಯತ್ನಿಸುತ್ತಿವೆ. ಆದ್ದರಿಂದ ವಾಸ್ತವಾಂಶಗಳನ್ನು ಒಳಗೊಂಡ ಕಿರು ಪುಸ್ತಕವನ್ನು ಬಿಡುಗಡೆ ಮಾಡಲಾಗುತ್ತದೆ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ ಹೇಳಿದ್ದಾರೆ.
ಹಗರಣದ ತನಿಖೆಗೆ ನ್ಯಾ.ಕೆಂಪಣ್ಣ ಆಯೋಗವನ್ನು ಸರ್ಕಾರ ರಚನೆ ಮಾಡಿದೆ. ಅಲ್ಲಿಗೆ ದಾಖಲಾತಿಗಳನ್ನು ನೀಡುವ ಬದಲು ಪ್ರತಿಪಕ್ಷಗಳು ಹೇಳಿಕೆ ನೀಡುತ್ತಿವೆ. ಮಾಜಿ ಸಿಎಂ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ನೀಡಿ ಜನರಲ್ಲಿ ಗೊಂದಲ ಉಂಟುಮಾಡುತ್ತಿದ್ದಾರೆ ಎಂದು ಧನಂಜಯ ಅವರು ಆರೋಪಿಸಿದ್ದಾರೆ.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ











Click it and Unblock the Notifications