ಕುಮುದ್ವತಿ, ಅರ್ಕಾವತಿ ನದಿಗಳಿಗೆ ಬಫರ್ ಜೋನ್ ನಿಗದಿ
ಬೆಂಗಳೂರು, ಜುಲೈ 24: ಕುಮುದ್ವತಿ ಹಾಗೂ ಅರ್ಕಾವತಿ ನದಿಗೆ ಬಫರ್ ಜೋನ್ ನಿಗದಿಪಡಿಸಲಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ , ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಎಲ್ಲಾ ನಗರ ಯೋಜನಾ ಪ್ರಾಧಿಕಾರಗಳು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಿದೆ.
ಜೊತೆಗೆ ಬೆಂಗಳೂರು ಮಹಾನಗರ ಪ್ರದೇಶ ಪರಿಷ್ಕೃತ ರಚನಾ ನಕ್ಷೆ 2031ರಲ್ಲಿ ನಗರಾಭಿವೃದ್ಧಿ ಇಲಾಖೆಯ ನಿಯಮಾವಳಿಗಳನ್ನು ಅಳವಡಿಕೆ ಮಾಡಿಕೊಳ್ಳುವಂತೆ ಆದೇಶಿಸಿದೆ.
ತಿಪ್ಪಗೊಂಡನಹಳ್ಳಿ ಜಲಾಶಯ ಹಾಗೂ ಜಲಾನಯನ ಪ್ರದೇಶದಲ್ಲಿ ಬರುವ ಅರ್ಕಾವತಿ ಮತ್ತು ಕುಮದ್ವತಿ ನದಿ ವ್ಯಾಪ್ತಿಗೆ ಬಫರ್ ಜೋನ್ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ತಿಪ್ಪಗೊಂಡನಹಳ್ಳಿ ಜಲಾನಯನ ಪ್ರದೇಶ ಸಂರಕ್ಷಣೆಗಾಗಿ 2003ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಮುಂದುವರೆಸುವ ಕುರಿತು ಹೈಕೋರ್ಟ್ ಸ್ಪಷ್ಟನೆ ಕೇಳಿದ ಹಿನ್ನೆಲೆಯಲ್ಲಿ ಜೂನ್ 26 ರಂದು ನಡೆದ ಸಂಪುಟ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ, ಬಫರ್ ಜೋನ್ ನಿಗದಿಪಡಿಸಿ ಕ್ಮಕೈಗೊಳ್ಳುವಂತೆ ನಿರ್ಣಯ ತೆಗೆದುಕೊಳ್ಳಲಾಗಿತ್ತು.
ನಗರಾಭಿವೃದ್ಧಿ ಇಲಾಖೆ 2003ರಲ್ಲಿ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹೊರಡಿಸಿದ್ದ ಆದೇಶದಲ್ಲಿ ತಿಪ್ಪಗೊಂಡನಹಳ್ಳಿ ಜಲಾಶಯದ ಪ್ರಥಮ ಮತ್ತು ದ್ವಿತೀಯ ವಲಯದ ವ್ಯಾಪ್ತಿ ಪ್ರದೇಶದಲ್ಲಿ ಅಂತರ್ಜಲ ಕಲುಷಿತಗೊಳ್ಳದಂತೆ ಕಾಪಾಡುವುದು, ಮೀನುಗಾರಿಕೆ, ಗಣಿಗಾರಿಕೆ ಅವಕಾಶ ನೀಡುವಂತಿಲ್ಲ.
ಜಲಾಶಯದ ವ್ಯಾಪ್ತಿಯಲ್ಲಿ ತ್ಯಾಜ್ಯ ಸುರಿಯುವಂತಿಲ್ಲ, ತ್ಯಾಜ್ಯ ನೀರನ್ನು ಸಂಸ್ಕರಿಸದೇ ಬಿಡುವಂತಿಲ್ಲ ಹಾಗೂ ನಿರ್ಮಾಗೊಳ್ಳುವ ನೂತನ ಕಟ್ಟಡದಲ್ಲಿ ಕಡ್ಡಾಯವಾಗಿ ಮಳೆ ನೀರು ಸಂಗ್ರಹಣೆ ವ್ಯವಸ್ಥೆ ಕೈಗೊಳ್ಳಬೇಕು. ಸಾವಯವ, ರಾಸಾಯನಿಕ ಗೊಬ್ಬರ ಮತ್ತು ಔಷಧಿಯೇತರ ಕೃಷಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಲಾಗಿದೆ.
ಕೆರೆಯ ತುದಿಯಿಂದ 30 ಮೀಟರ್ ಪ್ರಾಥಮಿಕ ನೈಸರ್ಗಿಕ ರಾಜಕಾಲುವೆ ಅಂಚಿನಿಂದ 30 ಮೀಟರ್, ದ್ವಿತೀಯ ದರ್ಜೆ ಕಾಲುವೆಯ ತುದಿಯಿಂದ 15 ಮೀಟರ್, ತೃತೀಯ ದರ್ಜೆಯ ಕಾಲುಎಯ ತುದಿಯಿಂದ 10 ಮೀಟರ್ ಬಫರ್ ಜೋನ್ ಇರಬೇಕು ಎಂದು ನಿಗದಿಪಡಿಸಿ ಆದೇಶ ಹೊರಡಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications