ಜನವಸತಿ ಪ್ರದೇಶದ ಬಳಿ ತುರ್ತಾಗಿ ಕೆಳಗಿಳಿದ ಸೇನಾ ಹೆಲಿಕಾಪ್ಟರ್
ಬೆಂಗಳೂರು, ಫೆಬ್ರವರಿ 6: ದಕ್ಷಿಣ ಬೆಂಗಳೂರು ವ್ಯಾಪ್ತಿಯ ತಲಘಟ್ಟಪುರ ಹತ್ತಿರದ ನಿವಾಸಿಗಳು ಭಾರೀ ಆತಂಕಕ್ಕೆ ಒಳಗಾದ ಘಟನೆ ನಡೆದಿದೆ. ಆರ್ಮಿ ಏವಿಯೇಷನ್ ಕಾರ್ಪ್ಸ್ ನ ಹೆಲಿಕಾಪ್ಟರ್ ಒಂದು ಜಮೀನಿನಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಸಿಬ್ಬಂದಿ ಸುರಕ್ಷಿತವಾಗಿದ್ದು, ಸಹಾಯಕ ತಂಡವು ಅ ನಂತರ ಹೆಲಿಕಾಪ್ಟರ್ ಕಾರ್ಯ ನಿರ್ವಹಿಸುವಂತೆ ಮಾಡುವಲ್ಲಿ ಸಫಲರಾಗಿದ್ದಾರೆ.
ಭಾರತೀಯ ಸೇನೆಯ ರುದ್ರ MK4 ಹೆಲಿಕಾಪ್ಟರ್ ಬೆಳಗ್ಗೆ ಹನ್ನೊಂದು ಗಂಟೆ ಸುಮಾರಿಗೆ ತುರ್ತಾಗಿ ಕೆಳಗೆ ಇಳಿದಿದೆ. ತಕ್ಷಣವೇ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಎಚ್ ಎಎಲ್ ಹೇಳುವಂತೆ, ಲಭ್ಯ ಮಾಹಿತಿಯ ಪ್ರಕಾರ ಇದು ಮುಂಜಾಗ್ರತಾ ಲ್ಯಾಂಡಿಂಗ್. ಸಂಸ್ಥೆಯ ತಾಂತ್ರಿಕ ತಂಡ ಸ್ಥಳಕ್ಕೆ ತೆರಳಿ ನೆರವು ನೀಡಿದೆ. ಆ ನಂತರ ಹೆಲಿಕಾಪ್ಟರ್ ಮತ್ತೆ ಹಾರಾಟ ನಡೆಸಿ, ವಾಪಸಾಗಿದೆ.
ಹೈಡ್ರಾಲಿಕ್ ವೈಫಲ್ಯ ಆಗಬಹುದು ಎಂಬ ಮುಂಜಾಗ್ರತೆ ಕಾರಣಕ್ಕೆ ತುರ್ತಾಗಿ ಕೆಳಗೆ ಇಳಿಸಲಾಗಿದೆ. ರಕ್ಷಣಾ ಸಚಿವಾಲಯದಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈಚೆಗಷ್ಟೇ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಮಿರೇಜ್ ವಿಮಾನಪತನವಾಗಿ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದರು.

ರುದ್ರ ಹೆಲಿಕಾಪ್ಟರ್ ಅನ್ನು ಭಾರತೀಯ ಸೇನೆಗಾಗಿ ಎಚ್ ಎಎಲ್ ನಿರ್ಮಾಣ ಮಾಡಿದೆ. ಇದಲ್ಲಿ ವೆಪನ್ ಸಿಸ್ಟಮ್ ಸಹ ಇದೆ. ಅತ್ಯಾಧುನಿಕ ಹಗುರ ಹೆಲಿಕಾಪ್ಟರ್ ಇದಾಗಿದೆ. ಭಾರತದಲ್ಲೇ ನಿರ್ಮಾಣವಾಗಿರುವ ಮೊದಲ ಶಸ್ತ್ರಸಜ್ಜಿತ ಹೆಲಿಕಾಪ್ಟರ್ ಇದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications