ಮಿಲಿಟರಿಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ಇಬ್ಬರ ಬಂಧನ
ಬೆಂಗಳೂರು, ಆಗಸ್ಟ್ 11: ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಲಕ್ಷಾಂತರ ಹಣ ಪಡೆದು ನಕಲಿ ಅಪಾಯಿಂಟ್ಮೆಂಟ್ ಆರ್ಡರ್ ನೀಡುತ್ತಿದ್ದ ವಂಚಕರನ್ನು ಬೆಂಗಳೂರು ಪೊಲೀಸರು ಸೆರೆ ಹಿಡಿದಿದ್ದಾರೆ.
ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ಯಾರಾದರೂ ಹೇಳಿದರೆ ಖಂಡಿತ ಅದು ಸುಳ್ಳು ನಂಬಬೇಡಿ, ನಿಮ್ಮ ಸ್ವಂತ ಬಲವನ್ನು ಪ್ರದರ್ಶಿಸಿ ಸೇನೆಗೆ ಸೇರಿಕೊಳ್ಳಿ.
ಇಂತಹ ಒಂದು ತಂಡವನ್ನು ಬೆಂಗಳೂರು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೇನೆಯಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ಹೇಳಿ ವಂಚನೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಪ್ರತಿ ಅಭ್ಯರ್ಥಿಯಿಂದ ಎರಡು ಲಕ್ಷ ಬೇಡಿಕೆ ಇಡುತ್ತಿದ್ದ ವಂಚಕರು ಮೊದಲ ಹಂತದಲ್ಲಿ 40 ಸಾವಿರ ರೂ ಪಡೆದು ನಕಲಿ ಅಪಾಯಿಂಟ್ಮೆಂಟ್ ಆರ್ಡರ್ ನೀಡುತ್ತಿದ್ದರು.

ಆರೋಪಿಗಳಾದ ಕೃಷ್ಣರಾಜನ್, ಜ್ಯೋತಿಲಕ್ಷ್ಮಿ, ಸುಜಾತ, ಮೆಹಬೂಬ್ಬಾಷ ವಿರುದ್ಧ ಪ್ರಕರಣ ದಾಖಲಾಗಿತ್ತು. ಇವರಲ್ಲಿ ಕೃಷ್ಣರಾಜನ್ ಮತ್ತು ಸುಜಾತರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ. ಊಟಿ ಇನ್ನಿತರೆ ಪ್ರದೇಶಗಳಿಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸುತ್ತಿದ್ದರು ಎಂದು ದೀಪು ಶಂಕರ ಅವರು ಹೆಬ್ಬಾಳ ಪೊಲೀಸರಿಗೆ ದೂರು ನೀಡಿದ್ದರು.
ವಂಚಕರು ಹಲವರಿಗೆ ಈ ರೀತಿ ಮೋಸ ಮಾಡಿರುವುದಾಗಿ ಅವರು ತಿಳಿಸಿದ್ದರು. ಸುಜಾತ ಎಂಬಾಕೆ ಈ ಹಿಂದೆಯೂ ಕೆಲಸ ಕೊಡಿಸುವುದಾಗಿ ವಂಚಿಸಿರುವ ಸಂಬಂಧ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಇಬ್ಬರು ವಂಚಕರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications