ಮೆಟ್ರೋ ಮಾರ್ಗ: ಬನ್ನೇರುಘಟ್ಟ ರಸ್ತೆಯಲ್ಲಿ 185 ಮರಗಳ ಸ್ಥಳಾಂತರ
ಬೆಂಗಳೂರು, ಜನವರಿ 09: ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆಯಲ್ಲಿ ಗೊಟ್ಟಿಗೆರೆ-ನಾಗವಾರ ಮಾರ್ಗದ ಕಾಮಗಾರಿ ಸಲುವಾಗಿ ಬಲಿಯಾಗಬೇಕಾಗಿದ್ದ ಬನ್ನೇರುಘಟ್ಟ ರಸ್ತೆ ಪಕ್ಕದ185ಮರಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ.
ಈ ಮರಗಳ ಸ್ಥಳಾಂತರ ಕಾಮರ್ಯವೂ ಆರಂಭವಾಗಿದೆ. ಈ ಮರಗಳ ಪೈಕಿ 51 ಮರಗಳನ್ನು ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಆವರಣಕ್ಕೆ ಹಾಗೂ ಉಳಿದ 134 ಮರಗಳನ್ನು ಬಿಬಿಎಂಪಿಯ ಶಾಂತಿನಿಕೇತನ ಉದ್ಯಾನಕ್ಕೆ ಸ್ಥಳಾಂತರಿಸಲಾಗುತ್ತಿದೆ. ಇದರ ಸಂಪೂರ್ಣ ಹೊಣೆಯನ್ನು ಮೆಟ್ರೋ ನಿಗಮವಹಿಸಿಕೊಂಡಿದೆ.
ಕಾಮಗಾರಿಗಾಗಿ ಅವುಗಳನ್ನು ಕಡಿಯುವುದು ಅಥವಾ ಸ್ಥಳಾಂತರ ಮಾಡುವುದು ಅನಿವಾರ್ಯ. ಮರಗಳ ಹನನಕ್ಕೆ ಸ್ಥಳೀಯರೂ ವಿರೋಧಿಸಿದ್ದರು. ಹೀಗಾಗಿ, ಸ್ಥಳಾಂತರಕ್ಕೆ ನಿಗಮದ ಅಧಿಕಾರಿಗಳು ಮುಂದಾಗಿದ್ದಾರೆ.
ಪ್ರತಿ ಮರದ ಸ್ಥಳಾಂತರಕ್ಕೆ10,750 ರೂ.ನಂತೆ 185 ಮರಗಳ ಸ್ಥಳಾಂತರಕ್ಕೆ 19,88,750 ಖರ್ಚಾಗಲಿದೆ. ಈಗಾಗಲೇ ಆ ಮರಗಳ ರೆಂಬೆ ಕೊಂಬೆಗಳನ್ನು ಕಡಿಯುವ ಕೆಲಸ ಆರಂಭವಾಗಿದೆ ಎಂದು ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯುಎ ವಸಂತರಾವ್ ತಿಳಿಸಿದ್ದಾರೆ.

ಟ್ವಿಟರ್ ನಲ್ಲಿ ಮೆಚ್ಚುಗೆ: ಬನ್ನೇರುಘಟ್ಟ ರಸ್ತೆ ಮಾರ್ಗದಲ್ಲಿ ಮೆಟ್ರೊ ಕಾಮಗಾರಿಗಾಗಿ ಬಲಿಯಾಗಬೇಕಿದ್ದ ಮರಗಳನ್ನು ಸ್ಥಳಾಂತರ ಮಾಡುವುದಾಗಿ ನಿಗಮವು ಟ್ವಿಟರ್ ನಲ್ಲಿ ತಿಳಿಸಿದೆ. ಇದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ












Click it and Unblock the Notifications