ಶಿವಾನಂದ ಸ್ಟೀಲ್ ಬ್ರಿಡ್ಜ: 40% ಕಮಿಷನ್ ಮೇಲ್ಸೇತುವೆ- ಎಎಪಿ ಪ್ರತಿಭಟನೆ
ಬೆಂಗಳೂರು, ಆಗಸ್ಟ್ 29: ಬೆಂಗಳೂರಿನ ಶಿವಾನಂದ ವೃತ್ತ ಉಕ್ಕಿನ ಮೇಲ್ಸೇತುವೆಯನ್ನು '40% ಕಮಿಷನ್ ಮೇಲ್ಸೇತುವೆ' ಎಂದು ಹೆಸರಿಟ್ಟು ನಾಮಕರಣಕ್ಕೆ ಮುಂದಾಗಿದ್ದ ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಾನಂದ ವೃತ್ತ ಉಕ್ಕಿನ ಮೇಲ್ಸೇತುವೆ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಈ ಮೇಲ್ಸೇತುವೆಯು ಬಿಜೆಪಿ ಸರ್ಕಾರದ 40% ಕಮಿಷನ್ ಪಾಪದ ಕೂಸು ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿತ್ತು. ಈ ಕಾರಣಕ್ಕಾಗಿ ಸರ್ಕಾರದಿಂದ ಮೇಲ್ಸೇತುವೆ ಉದ್ಘಾಟನೆ (ಆಗಸ್ಟ್ 30)ಗೂ ಮುನ್ನ '40% ಕಮಿಷನ್ ಮೇಲ್ಸೇತುವೆ' ಎಂದು ನಾಮಕರಣ ಮಾಡಿ ಉದ್ಘಾಟಿಸಲು ಮುಂದಾಗಿದ್ದರು. ಸರ್ಕಾರದ ವಿರುದ್ಧ ಪ್ರತಿಭಟನೆಗೂ ಈ ವೇಳೆ ಕಾರ್ಯಕರ್ತರು ಮುಂದಾಗಿದ್ದರು.
ಉಕ್ಕಿನ ಮೇಲ್ಸೇತುವೆ ಮುಂದೆ ನಾಮಫಲಕ ಹಾಕಿ ನೂರಾರು ಕಾರ್ಯಕರ್ತರು ಸೋಮವಾರ ಮಧ್ಯಾಹ್ನ 3 ಗಂಟೆಗೆ ಜಮಾಯಿಸಿದ್ದರು. ಸರ್ಕಾರದ ವಿರುದ್ಧ ಧಿಕ್ಕಾರ, ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಎಎಪಿ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ಎಎಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು.

ಇದಕ್ಕೂ ಮುನ್ನ ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಎಎಪಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, "ಸ್ಟೀಲ್ ಮೇಲ್ಸೇತುವೆ ಆರಂಭದಲ್ಲಿ 19 ಕೋಟಿಗೆ ಎಂದು ಅಂದಾಜಿಸಲಾಗಿತ್ತು. ಆದರೆ ಐದು ವರ್ಷವಾದರೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ವಿವಿಧ ಕಾರಣಗಳಿಂದ ಮೇಲ್ಸೇತುವೆ ಕಾಮಗಾರಿ ವಿಳಂಬವಾಯಿತು," ಎಂದರು.
ಕಾಮಗಾರಿ ವಿಳಂಬ ಮಾಡಿ ಬಿಜೆಪಿ ಭ್ರಷ್ಟಚಾರ
"ವರ್ಷದಿಂದ ವರ್ಷಕ್ಕೆ ಗಡುವು ಮೀರಿದ ಕಾಮಗಾರಿಯ ಅಂದಾಜು ವೆಚ್ಚ 19ಕೋಟಿಯಿಂದ 39ಕೋಟಿಗೆ ಏರಿಕೆ ಆಯಿತು. ಅದಲ್ಲದೇ ಕೋಟ್ಯಂತರು ರೂಪಾಯಿ ಖರ್ಚು ಮಾಡಿದರೂ ಕಳಪೆ ಕಾಮಗಾರಿ ಮಾಡಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ. ಜನರ ತೆರಿಗೆ ಹಣವನ್ನು ಬಿಜೆಪಿ ಸರ್ಕಾರ ಲೂಟಿ ಮಾಡಿದೆ," ಎಂದು ದಾಸರಿ ಆರೋಪಿಸಿದರು.

"ಬೆಂಗಳೂರಿನಲ್ಲಿ ಕಾಮಗಾರಿ ವಿಳಂಬ ಇದೇನು ಮೊದಲಲ್ಲ. ನಗರದಲ್ಲಿ ಅನೇಕ ಕಾಮಗಾರಿಗಳ ಅಂದಾಜು ವೆಚ್ಚವನ್ನು ಮೂರು ನಾಲ್ಕು ಪಟ್ಟು ಹೆಚ್ಚಿಸಿದೆ. ಸಾಕಷ್ಟು ಬಾರಿ ಸಮಯ ವ್ಯರ್ಥ ಮಾಡಿದೆ. ಈ ಮೂಲಕ 40ಪರ್ಸೆಂಟ್ ಕಮಿಷನ್ ದಂಧೆಯಲ್ಲಿ ಮುಳುಗಿದ್ದು, ಅವರಿಗೆ ಮುಂದಿನ ದಿನಗಳಲ್ಲಿ ಜನರೆ ತಕ್ಕ ಪಾಠ ಕಲಿಸಲಿದ್ದಾರೆ," ಎಂದು ಮೋಹನ್ ದಾಸರಿ ಕಿಡಿ ಕಾರಿದರು.
ಆ.30ಕ್ಕೆ ಮೇಲ್ಸೇತುವೆಗೆ ಉದ್ಘಾಟನೆ ಚಾಲನೆ
ಈ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷ ವಿಜಯ್ ಶರ್ಮಾ, ಮುಖಂಡರುಗಳಾದ ಜಗದೀಶ್ ವಿ.ಸದಂ , ಸುರೇಶ್ ರಾಥೋಡ್, ಚನ್ನಪ್ಪಗೌಡ ನಲ್ಲೂರು, ಉಷಾ ಮೋಹನ್, ಸುಹಾಸಿನಿ ಪಣಿರಾಜ್, ಗೋಪಿನಾಥ್ ಸೇರಿದಂತೆ ಅನೇಕ ಕಾರ್ಯಕರ್ತರು ಗಳು ಉಪಸ್ಥಿತರಿದ್ದರು.
ಶಿವಾನಂದ ಉಕ್ಕಿನ ಮೇಲ್ಸೇತುವೆಯು ಆಗಸ್ಟ್ 30ರಂದು ಮಂಗಳವಾರ ರಾಜ್ಯ ಸರ್ಕಾರದ ವತಿಯಿಂದ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಆಗಸ್ಟ್ 15ರಂದು ಮೇಲ್ಸೇತುವೆಯ ಒಂದು ಬದಿ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಮಂಗಳವಾರ ಮೇಲ್ಸೇತುವೆ ಸಂಪೂರ್ಣವಾಗಿ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications