ನೀರಿನ ಸಮಸ್ಯೆ, ಆರ್ಟ್ ಆಫ್ ಲಿವಿಂಗ್ನಿಂದ ಸಮಾವೇಶ
ಬೆಂಗಳೂರು, ಡಿಸೆಂಬರ್ 03 : ದೇಶವನ್ನು ಕಾಡುತ್ತಿರುವ ತೀವ್ರ ನೀರಿನ ಸಮಸ್ಯೆಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಲು 'ಆರ್ಟ್ ಆಫ್ ಲಿವಿಂಗ್' ಸಂಸ್ಥೆಯು ಮಾಡುತ್ತಿರುವ ಯತ್ನದ ಒಂದು ಅಂಗವಾಗಿ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ.
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಕೇಂದ್ರದಲ್ಲಿ ಡಿಸೆಂಬರ್ 5 ಮತ್ತು 6ರಂದು 'ನದಿಗಳ ಪುನಶ್ಚೇತನದ ಸಮಾವೇಶವನ್ನು' ಆಯೋಜನೆ ಮಾಡಲಾಗಿದೆ. ಇಂಟರ್ ನ್ಯಾಷನಲ್ ಅಸೋಷಿಯೇಶನ್ ಫಾರ್ ಹ್ಯೂಮನ್ ವಾಲ್ಯೂಸ್ ಜೊತೆ ಜಂಟಿಯಾಗಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ.

ಕಳೆದ 4 ದಶಕಗಳಲ್ಲೆ ಇರದಷ್ಟು ತೀವ್ರವಾಗಿರುವ ನೀರಿನ ಸಮಸ್ಯೆಯನ್ನು ನೀಗಿಸಲು ವೈಜ್ಞಾನಿಕವಾದ ಮತ್ತು ಸುಸ್ಥಿರವಾದ ದಾರಿಗಳನ್ನು ಕಂಡುಕೊಳ್ಳುತ್ತಿರುವ ನಿಟ್ಟಿನಲ್ಲಿ ಇದು ಮಹತ್ವದ್ದಾಗಿದೆ. ಈ ಖಂಡದ 54% ದಷ್ಟು ಭಾಗ ನೀರಿನ ಅಭಾವದಿಂದ ಬಳಲುತ್ತಿದೆ ಮತ್ತು ಅನೇಕ ನದಿಗಳು ಇಂಗಿ ಹೋಗಿ ಧೂಳಿನ ಮಡುವಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ 2025ರಷ್ಟರಲ್ಲಿ ಇಡೀ ದೇಶವು ತೀವ್ರ ನೀರಿನ ಸಮಸ್ಯೆಯನ್ನು ಅನುಭವಿಸಲಿದೆ.
ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ಗುರುದೇವ್ ಶ್ರೀ ರವಿಶಂಕರರು, 'ಜೀವನದ ಆಧಾರವೇ ನೀರು. ನೀರನ್ನು ಮತ್ತು ನೀರಿನ ಮೂಲಗಳನ್ನು ಸಂರಕ್ಷಿಸುವುದೇ ಪ್ರಮುಖ ವಾಗಬೇಕು. ಇಡೀ ದೇಶಗಳಲ್ಲಿ ನೀರಿನ ದೇಹಗಳನ್ನು, ಮೂಲವನ್ನು ಪರಿಸರ ಸ್ನೇಹಿ ರೀತಿಗಳಿಂದ ಸಂರಕ್ಷಿಸುವ ರೀತಿಗಳನ್ನು ಈ ಸಮಾವೇಶ ರೂಪಿಸಲಿದೆ' ಎಂದು ಹೇಳಿದರು.
ಎರಡು ದಿವಸಗಳ ಈ ಸಮಾವೇಶದಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಜ್ಞಾನಿಗಳು, ತಜ್ಞರು, ಭಾಗೀದಾರರು, ನಿಯಮರೂಪಕರು ಭಾಗವಹಿಸಲಿದ್ದು, ಈಗಿರುವ ಜಲಸಂಪನ್ಮೂಲಗಳ ಸಂರಕ್ಷಣೆ, ನೀರಿನ ಸೌಲಭ್ಯಗಳ ಸುಸ್ಥಿರವಾದ ಸಂರಕ್ಷಣೆಗಾಗಿ ನಕ್ಷೆವನ್ನು ರೂಪಿಸುವುದರೊಡನೆ, ಇದುವರೆಗೂ ಚಾಲ್ತಿಯಲ್ಲಿರುವ ನದಿ ಪುನಶ್ಚೇತನ ಮಾದರಿಗಳ ಆರ್ಥಿಕ-ಸಾಮಾಜಿಕ ಪ್ರಭಾವದ ಬಗ್ಗೆಯೂ ಚರ್ಚಿಸಲಿದ್ದಾರೆ.
2013ರಿಂದಲೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ನದಿಗಳ ಪುನಶ್ಚೇತನಕ್ಕಾಗಿ ಶ್ರಮಿಸುತ್ತಿದ್ದು, ಇದುವರೆಗೂ ಮರಣಶಯ್ಯೆಯಲ್ಲಿರುವ ನಾಲ್ಕು ರಾಜ್ಯಗಳ (ಮಹಾರಾಷ್ಟ್ರ, ಕರ್ನಾಟಕ, ತಮಿಳು ನಾಡು ಮತ್ತು ಕೇರಳದ) 33 ನದಿಗಳ ಪುನಶ್ಚೇತನ ಕಾರ್ಯದಲ್ಲಿ ತೊಡಗಿದೆ. 3,000ಹಳ್ಳಿಗಳಿಗೆ ಇದರಿಂದ ಲಾಭವಾಗಿದೆ. ನೀರಿಗಾಗಿ ನಡೆಸುತ್ತಿರುವ ಕಾರ್ಯಕ್ಕೆ ಈ ಸಮಾವೇಶವು ಮತ್ತಷ್ಟು ಪುಷ್ಟಿ ನೀಡಲಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು












Click it and Unblock the Notifications