ಬೆಂಗಳೂರಿನಲ್ಲೇ ತೆರೆದುಕೊಂಡ ಕ್ರಿಸ್ ಮಸ್ ಆಚರಣೆಯ 'ಹೊಸಲೋಕ'!
ಬೆಂಗಳೂರು, ಡಿಸೆಂಬರ್.06: ಬೆಂಗಳೂರು ಅಂದರೆ ಹಾಗೆ. ಇದೊಂದು ರಂಗಿನ ಲೋಕ. ಇಲ್ಲಿ ಎಲ್ಲ ಅಭಿರುಚಿಯ ಜನರು ಇದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಎಲ್ಲ ಹಬ್ಬಗಳನ್ನೂ ಅದ್ಧೂರಿಯಾಗಿ ವಿಜೃಂಭಣೆಯಿಂದ ಆಚರಿಸುತ್ತಾರೆ.
ಇನ್ನು, ಡಿಸೆಂಬರ್ ತಿಂಗಳು ಎಂದರೆ ಮೊದಲಿಗೆ ನೆನಪಿಗೆ ಬರುವುದೇ ಕ್ರಿಸ್ ಮಸ್ ಹಬ್ಬ. ಈ ಹಬ್ಬ ಕೇವಲ ನಮ್ಮ ದೇಶವಷ್ಟೇ ಅಲ್ಲ, ವಿಶ್ವದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಇದರ ಮಧ್ಯೆ ಕ್ರಿಸ್ ಮಸ್ ಆಚರಣೆಗಾಗಿ ಬೆಂಗಳೂರಿನಲ್ಲಿ ಹೊಸ ಪ್ರಪಂಚವೇ ತೆರೆದುಕೊಂಡಿದೆ.
ಕ್ರಿಸ್ ಮಸ್ ಪ್ರಯುಕ್ತ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಆರ್ಟಿ ಜಾನ್ ಬಜಾರ್ ಪ್ರದರ್ಶನವನ್ನು ಉದ್ಘಾಟನೆ ಮಾಡಲಾಯಿತು. ಡಿಸೆಂಬರ್.06 ರಿಂದ ಡಿಸೆಂಬರ್.16ರವರೆಗೆ 10 ದಿನಗಳ ಕಾಲ ಪ್ರದರ್ಶನ ನಡೆಯಲಿದೆ.

ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ನಡೆಯಲಿರುವ ಆರ್ಟಿ ಜಾನ್ ಬಜಾರ್ ಪ್ರದರ್ಶನದಲ್ಲಿ ಕ್ರಿಸ್ ಮಸ್ ಹಬ್ಬಕ್ಕೆ ಮತ್ತಷ್ಟು ರಂಗು ತುಂಬುವಂತಾ ವಸ್ತುಗಳನ್ನು ಮಾರಾಟಕ್ಕೆ ಇರಿಸಲಾಗಿದೆ. ಈ ಪ್ರದರ್ಶನದಲ್ಲಿ ಮಣ್ಣಿನ ದೀಪ, ಹಿತ್ತಾಳೆ ದೀಪ, ಲಕ್ಷ್ಮಿ ದೀಪ, ಗಜರಾಜ ದೀಪ, ಹೀಗೆ ಹತ್ತು ಹಲವಾರು ಬಗೆಯ ದೀಪಗಳನ್ನು ಮಾರಾಟಕ್ಕೂ ಇರಿಸಲಾಗಿತ್ತು. ದೇಶದ ಎಲ್ಲಾ ಭಾಗದ ಕರಕುಶಲ ಕರ್ಮಿಗಳು ತಯಾರಿಸಿದ ವಿಭಿನ್ನ ಬಗೆಯ ದೀಪಗಳನ್ನು ಪ್ರದರ್ಶನ ಹಾಗೂ ಮಾರಾಟ ಮಾಡಲಾಗುತ್ತಿದೆ.

ಈ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಪ್ರಮುಖ ಆಕರ್ಷಣೆಯೇ ತಹರೇವಾರಿ ದೀಪಗಳು. ಒಂದೇ ವೇದಿಕೆಯಲ್ಲಿ ವಿಭಿನ್ನ ರೀತಿಯ ತಹರೇವಾರಿ ದೀಪಗಳನ್ನು ಖರೀದಿಸಬಹುದು. ಇದರ ಜೊತೆಗೆ ಹಬ್ಬಕ್ಕೆ ಬೇಕಾಗಿರುವ ಎಲ್ಲ ರೀತಿಯ ಸಾಮಗ್ರಿಗಳನ್ನು ಕೊಂಡುಕೊಳ್ಳಬಹುದು. ಅಲಂಕಾರಿಕ ವಸ್ತುಗಳ ಜೊತೆ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ಖರೀದಿಸಬಹುದು.

ಮಣ್ಣು, ಕಲ್ಲು, ಮರಗಳಿಂದ ತಯಾರಿಸಿದ ವಿಭಿನ್ನ ವಸ್ತುಗಳೇ ಮುಖ್ಯ ಆಕರ್ಷಣೆಯಾಗಿದ್ದವು. 100ಕ್ಕೂ ಹೆಚ್ಚು ಅಂಗಡಿಗಳಿದ್ದು, ದೇಶದ ಎಲ್ಲ ಭಾಗಗಳಿಂದ ಆಗಮಿಸಿದ ಕಲಾಕಾರರು ತಮ್ಮ ಕಲೆಯನ್ನು ಪ್ರದರ್ಶಿಸಲಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications