ಪಾಕಿಸ್ತಾನ ಪರ ಘೋಷಣೆ: ಅರುದ್ರಾ ಪೋಷಕರಿಗೆ ಆಘಾತ
ಬೆಂಗಳೂರು, ಫೆಬ್ರವರಿ 21: ಟೌನ್ ಹಾಲ್ ಬಳಿ ಪ್ರತಿಭಟನೆ ವೇಳೆ ಭಿತ್ತಿ ಪತ್ರ ಪ್ರದರ್ಶಿಸಿದ ಯುವತಿ ಅರುದ್ರಾಳ ಅಜ್ಜ ಅಜ್ಜಿ, ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಅತ್ಯಂತ ಸಭ್ಯ ಮತ್ತು ಸಂಪ್ರದಾಯಸ್ಥ ಕುಟುಂಬ. ಆಕೆಯನ್ನು ನಾವು ಅನ್ನಪೂರ್ಣ ಎಂಬ ಹೆಸರಿನಿಂದ ಕರೆಯುತ್ತೇವೆ. ಆಕೆ ಎಂದಿಗೂ ತನ್ನ ವೈಯಕ್ತಿಕ ಅಭಿಪ್ರಾಯ, ನಿಲುವುಗಳ ಕುರಿತು ನಮ್ಮೊಂದಿಗೆ ಮಾತನಾಡಿರಲಿಲ್ಲ. ಈ ಘಟನೆಯಿಂದ ನಮಗೂ ಅಚ್ಚರಿಯಾಗಿದೆ ಎಂದು ಹೇಳಿದ್ದಾರೆ.
ಆಕೆ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಓದಿದ್ದಳು. ಕಚೇರಿಯಿಂದ ಮನೆ ದೂರ ಇದೆ ಎನ್ನುವ ಕಾರಣಕ್ಕೆ ಆಕೆ ಸಿ.ವಿ. ರಾಮನ್ ನಗರದಲ್ಲಿ ವಾಸವಿದ್ದಳು. ಹತ್ತು ದಿನಗಳ ಹಿಂದಷ್ಟೇ ಮನೆಗೆ ಬಂದು ಹೋಗಿದ್ದಳು. ಅದನ್ನು ಹೊರತುಪಡಿಸಿದರೆ ಆಕೆ ಈ ರೀತಿ ಮನಸ್ಥಿತಿ ಹೊಂದಿದ್ದಳಾ ಎನ್ನುವುದು ನಮಗೆ ಗೊತ್ತಿಲ್ಲ ಎಂದು ಅರುದ್ರಾ ಅಜ್ಜ ರಾಮಮೂರ್ತಿ ತಿಳಿಸಿದರು.
ನೀವು ಕೇಳುತ್ತಿರುವ ಯುವತಿ ಬಗ್ಗೆ ನಮಗೆ ತಿಳಿದಿಲ್ಲ. ಆಕೆಯ ಬಗ್ಗೆ ಯಾವ ಮಾಹಿತಿಯೂ ಇರಲಿಲ್ಲ, ಈಗಲೂ ಇಲ್ಲ. ನೀವು ಹೇಳುವ ಯುವತಿ ನಮ್ಮ ಮೊಮ್ಮಗಳು ಅಲ್ಲ ಎಂದು ಅಮೂಲ್ಯ ಲಿಯೋನಾಗೂ ಅರುದ್ರಾಗೂ ಗೆಳೆತನವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಪೋಷಕರ ಮನೆಗೆ ಪೊಲೀಸರ ಭೇಟಿ
ಅರುದ್ರಾ ವಿರುದ್ಧ ಐಪಿಸಿ ಸೆಕ್ಷನ್ 153 a ಅಡಿ ವೈರತ್ವ ಬಿತ್ತುವುದು ಮತ್ತು ಸೆಕ್ಷನ್ 153 b ಅಡಿ ಭಾವೈಕ್ಯತೆ, ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವುದು ಪ್ರಕರಣಗಳನ್ನು ದಾಖಲಿಸಲಾಗಿದೆ.
ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್, ಅರುದ್ರಾ ಮನೆಗೆ ಭೇಟಿ ನೀಡಿ ಪೋಷಕರೊಂದಿಗೆ ಮಾತುಕತೆ ನಡೆಸಿದರು. ಇಂತಹ ಘಟನೆಗಳು ನಡೆದಾಗ ಮನೆಯ ಮುಂದೆ ಅಹಿತಕರ ಕೃತ್ಯಗಳು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸಿರುವುದಾಗಿ ಅವರು ತಿಳಿಸಿದರು.

ಪ್ರತಿಭಟನೆ ಮಾಡಿದರೆ ಕ್ರಮ
ಅರುದ್ರಾ ಪೋಷಕರ ಮನೆ ಎದುರು ಪ್ರತಿಭಟನೆ ಮಾಡಿದರೆ ಕ್ರಮ ತೆಗೆದುಕೊಳ್ಳಬಾರದು. ಅವರಿಗೆ ತೊಂದರೆ ನೀಡಲು ಮಾಧ್ಯಮದವರು, ಪೊಲೀಸರು ಮತ್ತು ಅಪರಿಚಿತರು ಹೋಗಬಾರದು. ಮಗಳು ಮತ್ತು ಮೊಮ್ಮಗಳು ಮಾಡಿರುವ ಕೆಲಸದ ಬಗ್ಗೆ ಅವರಿಗೆ ಮಾಹಿತಿ ಇಲ್ಲ. ನಾವು ಎಲ್ಲವನ್ನೂ ಅವರಿಗೆ ತಿಳಿಸಿದ್ದೇವೆ. ಅವರಿಗೆ ಇದರಿಂದ ಆಘಾತವಾಗಿದೆ. ನಾವು ಧಾರ್ಮಿಕ ವ್ಯಕ್ತಿಗಳು ಮತ್ತು ಕಾನೂನಿಗೆ ಬದ್ಧರಾಗಿರುವವರು ಎಂದು ಪೋಷಕರು ತಿಳಿಸಿದ್ದಾರೆ. ಸಂಬಂಧಿಸಿದ ಠಾಣೆಗೆ ತೆರಳಿ ಅಲ್ಲಿನ ಪ್ರಕ್ರಿಯೆಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಶಶಿಕುಮಾರ್ ಹೇಳಿದರು.

ಪೊಲೀಸರ ಪ್ರಕರಣಕ್ಕೆ ಸಾಕ್ಷಿ
ಅರುದ್ರಾ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ. ಅದಕ್ಕೆ ನಾವು ಸಾಕ್ಷಿಗಳಾಗಿ ಸಹಿ ಹಾಕಿದ್ದೇವೆ. ಹಾಗೆಯೇ ನಾವು ಕೂಡ ದೂರು ನೀಡಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವುದನ್ನು ಉಲ್ಲೇಖಿಸಿದ್ದೇವೆ ಎಂದು ಹಿಂದೂ ಜನಜಾಗೃತಿ ವೇದಿಕೆ ವಕ್ತಾರ ಮೋಹನ್ ತಿಳಿಸಿದರು.

ಶಾಂತಿ ಕದಡುವ ಪ್ರಯತ್ನ
ನಮ್ಮ ಪ್ರತಿಭಟನೆ ಮುಗಿಯುವ ಸಂದರ್ಭದಲ್ಲಿ ಯುವತಿಯೊಬ್ಬಳು ಅನಧಿಕೃತವಾಗಿ ಪ್ಲೇ ಕಾರ್ಡ್ ಹಿಡಿದು ನಮ್ಮ ಪ್ರತಿಭಟನೆಯಲ್ಲಿನ ಶಾಂತಿ ಕದಡಲು ಪ್ರಯತ್ನಿಸಿದ್ದಳು. ಇದು ಸಮಗ್ರತೆ, ಭದ್ರತೆ ಹಾಗೂ ಸಮುದಾಯದ ನಡುವೆ ದ್ವೇಷ ಬಿತ್ತುವ ಷಡ್ಯಂತ್ರ. ಆಕೆಯ ಹಿಂದೆ ಯಾರಿದ್ದಾರೆ ಎಂಬುದು ಸಂಪೂರ್ಣ ತನಿಖೆ ಆಗಬೇಕು. ಆಕೆಗೆ ಕಠಿಣ ಶಿಕ್ಷೆ ಅಗಬೇಕು ಎಂದು ಸಮಸ್ತ ಹಿಂದೂ ಸಂಘಟನೆಗಳ ಪರ ದೂರು ನೀಡಿದ್ದೇವೆ ಎಂದು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications