ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ವೆಸ್ಟ್‌ ಕರ್ನಾಟಕ -2016 : ಹರಿದು ಬಂದ ಬಂಡವಾಳ ಸಾಗರ!

|
Google Oneindia Kannada News

ಬೆಂಗಳೂರು, ಫೆಬ್ರವರಿ 03 : ಮೂರು ದಿನಗಳ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 'ಇನ್ವೆಸ್ಟ್‌ ಕರ್ನಾಟಕ -2016'ರಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ಚಾಲನೆ ಸಿಕ್ಕಿದೆ. ದೇಶ-ವಿದೇಶಗಳ ವಿವಿಧ ಉದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ. [ಸಮಾವೇಶದ ಮೊದಲ ದಿನದ ಚಿತ್ರಗಳು]

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ದೀಪ ಬೆಳಗಿಸುವ ಮೂಲಕ ಮೂರು ದಿನಗಳ 'ಇನ್ವೆಸ್ಟ್‌ ಕರ್ನಾಟಕ -2016' ಸಮಾವೇಶಕ್ಕೆ ಚಾಲನೆ ನೀಡಿದರು. ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯ, ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. [ಇನ್ವೆಸ್ಟ್ ಕರ್ನಾಟಕ ಮೊಬೈಲ್ ಅಪ್ಲಿಕೇಶನ್]

 arun jaitley

ಉದ್ಯಮಿಗಳಾದ ರತನ್ ಟಾಟಾ, ವಿಪ್ರೋ ಸಂಸ್ಥೆಯ ಅಜೀಂ ಪ್ರೇಂಜಿ, ಇನ್ಫೋಸಿಸ್‌ ಮುಖ್ಯಸ್ಥ ನಾರಾಯಣಮೂರ್ತಿ, ಅನಿಲ್ ಅಂಬಾನಿ, ಗೌತಮ್ ಅದಾನಿ ಸೇರಿದಂತೆ ದೇಶ-ವಿದೇಶದ ಹಲವಾರು ಖ್ಯಾತ ಉದ್ಯಮಿಗಳು ಸಮಾವೇಶಕ್ಕೆ ಆಗಮಿಸಿದ್ದಾರೆ. ಈ ಸಮಾವೇಶದಿಂದಾಗಿ ರಾಜ್ಯದಲ್ಲಿ 2 ಲಕ್ಷ ಕೋಟಿ ರೂ.ಗಳಿಗೂ ಅಧಿಕ ಬಂಡವಾಳ ಹೂಡಿಕೆಯಾಗಬಹುದೆಂದು ಅಂದಾಜಿಸಲಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿ ಎರಡನೇ ಮತ್ತು ಮೂರನೇ ದರ್ಜೆಯ ನಗರಗಳಲ್ಲೂ ಕೈಗಾರಿಕೆಗಳನ್ನು ಸ್ಥಾಪಿಸುವುದು ಈ ಸಮಾವೇಶದ ಉದ್ದೇಶಗಳಲ್ಲಿ ಸೇರಿದೆ. ಅರಮನೆ ಮೈದಾನದ 1 ಲಕ್ಷ ಚದರಡಿ ಪ್ರದೇಶದಲ್ಲಿ ವಿವಿಧ ಕಂಪನಿಗಳಿಗೆ ವಸ್ತು ಪ್ರದರ್ಶನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. [ಇನ್ವೆಸ್ಟ್ ಕರ್ನಾಟಕ ವೆಬ್ ಸೈಟ್]

investment

ಹೂಡಿಕೆ ಕ್ಷೇತ್ರಗಳು : ಮೂರು ದಿನಗಳ ಸಮಾವೇಶದಲ್ಲಿ ಕೈಗಾರಿಕೆ, ಮೂಲಸೌಕರ್ಯ, ಪ್ರವಾಸೋದ್ಯಮ, ಇಂಧನ, ಜವಳಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಂಡವಾಳ ಹರಿದುಬರಲಿದೆ ಎಂದು ನಿರೀಕ್ಷಿಸಲಾಗಿದೆ.

English summary
Finance Minister Arun Jaitley on Wednesday inaugurated the Invest Karnataka global business meet 2016 at palace grounds, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X