ಭಾಷೆ ವಿಚಾರದಲ್ಲಿ ಚರ್ಚೆಯ ಅಗತ್ಯ ಏನಿದೆ?: ಡಿ.ಕೆ. ಶಿವಕುಮಾರ್
ಬೆಂಗಳೂರು, ಏಪ್ರಿಲ್ 28: ಹಿಂದಿ ಭಾಷೆಯ ವಿವಾದವು ಪ್ರಾದೇಶಿಕ ಭಾಷೆಗಳ ಕುರಿತು ದೇಶದಲ್ಲಿ ಚರ್ಚೆಯಾಗುತ್ತಿದ್ದು, ನಮ್ಮ ದೇಶ ಅನೇಕ ಭಾಷೆಗಳಿಂದ ಕೂಡಿದೆ. ಪ್ರತಿಯೊಬ್ಬರಿಗೂ ಅವರವರ ಭಾಷೆ ಸ್ವಾಭಿಮಾನದ ವಿಷಯವಾಗಿದೆ. ನಮ್ಮ ರಾಜ್ಯದ ಕೊಡಗು, ಮಂಗಳೂರು ಭಾಗಗಳಲ್ಲಿ ಬೇರೆ ಭಾಷೆಗಳನ್ನು ಮಾತನಾಡಿದರೂ, ನಾವು ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ, ನಾನು ಯಾರ ಟ್ವೀಟ್ ಬಗ್ಗೆಯೂ ಪ್ರತಿಕ್ರಿಯೆ ನೀಡಲು ಸಿದ್ಧನಿಲ್ಲ. ದೇಶದಲ್ಲಿ ಯಾವ, ಯಾವ ಭಾಷೆಗೆ ಯಾವ ಮಾನ್ಯತೆ ನೀಡಬೇಕು ಎಂದು ಸರ್ಕಾರ ಈಗಾಗಲೇ ತೀರ್ಮಾನ ಮಾಡಿದೆ. ನಾವೆಲ್ಲ ಕನ್ನಡಿಗರು. ನಮಗೆ ನಮ್ಮದೇ ಆದ ಭಾಷೆ ಇದೆ. ಧ್ವಜ, ಸ್ವಾಭಿಮಾನವಿದೆ ಭಾಷೆ ಎಂದರೆ ಸ್ವಾಭಿಮಾನ ಪ್ರಶ್ನೆಯಾಗಿದೆ ಎಂದರು.
Koo Appಭಾರತದಲ್ಲಿ ಸರಿಸುಮಾರು 19,500 ಮಾತೃಭಾಷೆಗಳಿವೆ. ಭಾರತದೆಡೆಗಿನ ಪ್ರೀತಿ ಪ್ರತಿಯೊಂದು ಭಾಷೆಯಲ್ಲಿಯೂ ಏಕರೀತಿಯಲ್ಲಿ ವ್ಯಕ್ತವಾಗುತ್ತದೆ. ಯಾವುದೇ ಭಾಷೆಯು ಮತ್ತೊಂದರ ಮೇಲೆ ಪ್ರಾಬಲ್ಯ ಸಾಧಿಸದಂತೆ ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ಹೆಮ್ಮೆಯ ಕನ್ನಡಿಗನಾಗಿ ಮತ್ತು ಕಾಂಗ್ರೆಸ್ಸಿಗನಾಗಿ ನೆನಪಿಸಬಯಸುತ್ತೇನೆ. - D K Shivakumar (@dkshivakumar_official) 28 Apr 2022
ನಮ್ಮ ನೋಟಿನಲ್ಲಿ ಕನ್ನಡ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ನೀಡಿ ಮುದ್ರಣ ಮಾಡಲಾಗಿದೆ. ಈ ನೋಟು ರಾಜ್ಯ ಸೇರಿದಂತೆ ರಾಷ್ಟ್ರದಲ್ಲಿ ಚಲಾವಣೆಯಾಗುತ್ತದೆ.

ಹೀಗಾಗಿ ಭಾಷೆ ವಿಚಾರದಲ್ಲಿ ಚರ್ಚೆಯ ಅಗತ್ಯ ಏನಿದೆ? ಎಂದು ಪ್ರಶ್ನಿಸಿದರು. ದೇಶದ ಉತ್ತರ ಭಾಗದಲ್ಲಿ ಹಿಂದಿ ಭಾಷೆ ಮಾತನಾಡುತ್ತಿದ್ದು, ಆ ಭಾಷೆಗೆ ಯಾವ ರೀತಿ ಗೌರವ ನೀಡಬೇಕೋ ಅದನ್ನು ನೀಡಲಾಗುತ್ತಿದೆ. ಚಿತ್ರನಟರ ಮಾತಿಗೆ ನಾವು ಚರ್ಚೆ ಮಾಡುವ ಅಗತ್ಯವಿಲ್ಲ. ಒಂದು ವೇಳೆ ಕೇಂದ್ರ ಸಚಿವರು ಯಾರಾದರೂ ಈ ಬಗ್ಗೆ ಚರ್ಚೆ ಮಾಡಿದರೆ ಅದಕ್ಕೆ ಉತ್ತರ ನೀಡೋಣ ಎಂದರು.

Recommended Video
ನಮ್ಮ ನೆಲ, ಜಲ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಹೀಗಾಗಿ ನಮ್ಮ ಮೊದಲ ಪ್ರಾತಿನಿಧ್ಯ ಕನ್ನಡ ಭಾಷೆಯಾಗಿರುತ್ತದೆ. ನಂತರ ನಾವು ಸಂವಿಧಾನದಲ್ಲಿ ನೀಡಲಾಗಿರುವ ಹಕ್ಕಿನ ಪ್ರಕಾರ ಬೇರೆ ಭಾಷೆಗಳನ್ನು ಬಳಸಬಹುದು. ನಮ್ಮ ಕೆಲವು ಸಂಸದರು ಹಿಂದಿ ಹಾಗೂ ಇಂಗ್ಲಿಷ್ ಭಾಷೆ ತಿಳಿದಿದ್ದರೂ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುತ್ತಾರೆ. ನನ್ನ ಸಹೋದರ ಹಲವು ಬಾರಿ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ್ದು, ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ವಿರೋಧಪಕ್ಷದ ನಾಯಕರಾಗಿರುವ ಕಾರಣ ಹಿಂದಿಯಲ್ಲಿ ಮಾತನಾಡುತ್ತಾರೆ ಎಂದರು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications