ಭಾಷೆ ವಿಚಾರದಲ್ಲಿ ಚರ್ಚೆಯ ಅಗತ್ಯ ಏನಿದೆ?: ಡಿ.ಕೆ. ಶಿವಕುಮಾರ್
ಬೆಂಗಳೂರು, ಏಪ್ರಿಲ್ 28: ಹಿಂದಿ ಭಾಷೆಯ ವಿವಾದವು ಪ್ರಾದೇಶಿಕ ಭಾಷೆಗಳ ಕುರಿತು ದೇಶದಲ್ಲಿ ಚರ್ಚೆಯಾಗುತ್ತಿದ್ದು, ನಮ್ಮ ದೇಶ ಅನೇಕ ಭಾಷೆಗಳಿಂದ ಕೂಡಿದೆ. ಪ್ರತಿಯೊಬ್ಬರಿಗೂ ಅವರವರ ಭಾಷೆ ಸ್ವಾಭಿಮಾನದ ವಿಷಯವಾಗಿದೆ. ನಮ್ಮ ರಾಜ್ಯದ ಕೊಡಗು, ಮಂಗಳೂರು ಭಾಗಗಳಲ್ಲಿ ಬೇರೆ ಭಾಷೆಗಳನ್ನು ಮಾತನಾಡಿದರೂ, ನಾವು ಅವರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ, ನಾನು ಯಾರ ಟ್ವೀಟ್ ಬಗ್ಗೆಯೂ ಪ್ರತಿಕ್ರಿಯೆ ನೀಡಲು ಸಿದ್ಧನಿಲ್ಲ. ದೇಶದಲ್ಲಿ ಯಾವ, ಯಾವ ಭಾಷೆಗೆ ಯಾವ ಮಾನ್ಯತೆ ನೀಡಬೇಕು ಎಂದು ಸರ್ಕಾರ ಈಗಾಗಲೇ ತೀರ್ಮಾನ ಮಾಡಿದೆ. ನಾವೆಲ್ಲ ಕನ್ನಡಿಗರು. ನಮಗೆ ನಮ್ಮದೇ ಆದ ಭಾಷೆ ಇದೆ. ಧ್ವಜ, ಸ್ವಾಭಿಮಾನವಿದೆ ಭಾಷೆ ಎಂದರೆ ಸ್ವಾಭಿಮಾನ ಪ್ರಶ್ನೆಯಾಗಿದೆ ಎಂದರು.
Koo Appಭಾರತದಲ್ಲಿ ಸರಿಸುಮಾರು 19,500 ಮಾತೃಭಾಷೆಗಳಿವೆ. ಭಾರತದೆಡೆಗಿನ ಪ್ರೀತಿ ಪ್ರತಿಯೊಂದು ಭಾಷೆಯಲ್ಲಿಯೂ ಏಕರೀತಿಯಲ್ಲಿ ವ್ಯಕ್ತವಾಗುತ್ತದೆ. ಯಾವುದೇ ಭಾಷೆಯು ಮತ್ತೊಂದರ ಮೇಲೆ ಪ್ರಾಬಲ್ಯ ಸಾಧಿಸದಂತೆ ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ಹೆಮ್ಮೆಯ ಕನ್ನಡಿಗನಾಗಿ ಮತ್ತು ಕಾಂಗ್ರೆಸ್ಸಿಗನಾಗಿ ನೆನಪಿಸಬಯಸುತ್ತೇನೆ. - D K Shivakumar (@dkshivakumar_official) 28 Apr 2022
ನಮ್ಮ ನೋಟಿನಲ್ಲಿ ಕನ್ನಡ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ನೀಡಿ ಮುದ್ರಣ ಮಾಡಲಾಗಿದೆ. ಈ ನೋಟು ರಾಜ್ಯ ಸೇರಿದಂತೆ ರಾಷ್ಟ್ರದಲ್ಲಿ ಚಲಾವಣೆಯಾಗುತ್ತದೆ.

ಹೀಗಾಗಿ ಭಾಷೆ ವಿಚಾರದಲ್ಲಿ ಚರ್ಚೆಯ ಅಗತ್ಯ ಏನಿದೆ? ಎಂದು ಪ್ರಶ್ನಿಸಿದರು. ದೇಶದ ಉತ್ತರ ಭಾಗದಲ್ಲಿ ಹಿಂದಿ ಭಾಷೆ ಮಾತನಾಡುತ್ತಿದ್ದು, ಆ ಭಾಷೆಗೆ ಯಾವ ರೀತಿ ಗೌರವ ನೀಡಬೇಕೋ ಅದನ್ನು ನೀಡಲಾಗುತ್ತಿದೆ. ಚಿತ್ರನಟರ ಮಾತಿಗೆ ನಾವು ಚರ್ಚೆ ಮಾಡುವ ಅಗತ್ಯವಿಲ್ಲ. ಒಂದು ವೇಳೆ ಕೇಂದ್ರ ಸಚಿವರು ಯಾರಾದರೂ ಈ ಬಗ್ಗೆ ಚರ್ಚೆ ಮಾಡಿದರೆ ಅದಕ್ಕೆ ಉತ್ತರ ನೀಡೋಣ ಎಂದರು.

Recommended Video
ನಮ್ಮ ನೆಲ, ಜಲ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ಹೀಗಾಗಿ ನಮ್ಮ ಮೊದಲ ಪ್ರಾತಿನಿಧ್ಯ ಕನ್ನಡ ಭಾಷೆಯಾಗಿರುತ್ತದೆ. ನಂತರ ನಾವು ಸಂವಿಧಾನದಲ್ಲಿ ನೀಡಲಾಗಿರುವ ಹಕ್ಕಿನ ಪ್ರಕಾರ ಬೇರೆ ಭಾಷೆಗಳನ್ನು ಬಳಸಬಹುದು. ನಮ್ಮ ಕೆಲವು ಸಂಸದರು ಹಿಂದಿ ಹಾಗೂ ಇಂಗ್ಲಿಷ್ ಭಾಷೆ ತಿಳಿದಿದ್ದರೂ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುತ್ತಾರೆ. ನನ್ನ ಸಹೋದರ ಹಲವು ಬಾರಿ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ್ದು, ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ವಿರೋಧಪಕ್ಷದ ನಾಯಕರಾಗಿರುವ ಕಾರಣ ಹಿಂದಿಯಲ್ಲಿ ಮಾತನಾಡುತ್ತಾರೆ ಎಂದರು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications