ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಶಾ ಕಾರ್ಯಕರ್ತೆಯರ ಮುಷ್ಕರಕ್ಕೆ ಡಿಕೆ ಶಿವಕುಮಾರ್ ಬೆಂಬಲ!

|
Google Oneindia Kannada News

ಬೆಂಗಳೂರು, ಜುಲೈ 8: ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಆಶಾ ಕಾರ್ಯಕರ್ತೆಯರು ಜುಲೈ 10ರಿಂದ ತಮ್ಮ ಕೆಲಸ ಸ್ಥಗಿತಗೊಳಿಸಲಿದ್ದಾರೆ.

ಮಾಸಿಕ ಗೌರವ ಧನ 12 ಸಾವಿರಕ್ಕೆ ಹೆಚ್ಚಳ ಮಾಡುವಂತೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿ ಮುಷ್ಕರ ಮಾಡಲು ತೀರ್ಮಾನಿಸಿದ್ದಾರೆ.

ಜುಲೈ 10ರಿಂದ ಕೆಲಸ ನಿಲ್ಲಿಸಿ ಆಶಾ ಕಾರ್ಯಕರ್ತೆಯರ ಮುಷ್ಕರಜುಲೈ 10ರಿಂದ ಕೆಲಸ ನಿಲ್ಲಿಸಿ ಆಶಾ ಕಾರ್ಯಕರ್ತೆಯರ ಮುಷ್ಕರ

ತಮ್ಮ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಹೋರಾಟದ ಹಾದಿ ತುಳಿದಿರುವ ಆಶಾ ಕಾರ್ಯಕರ್ತೆಯರು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ, ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ.

ಈ ವೇಳೆ ತಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿರುವ ಡಿ.ಕೆ ಶಿವಕುಮಾರ್ ನಿಮಗೆ ಬೇಕಾದ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

Asha workers meet Congress president DK Shivakumar

ಜುಲೈ 10ರಿಂದ ಅನಿರ್ದಿಷ್ಟಾವಧಿವರೆಗೂ ಮುಷ್ಕರ ನಡೆಸಲು ಆಶಾ ಕಾರ್ಯಕರ್ತೆಯರು ತೀರ್ಮಾನಿಸಿದ್ದು, ರಾಜ್ಯಾದ್ಯಂತ ಸುಮಾರು 45 ಸಾವಿರಕ್ಕೂ ಹೆಚ್ಚು ಜನರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

English summary
Asha workers meet Congress president DK Shivakumar today at sadashivanagar home. Asha workers asked support to their protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X