ಭಾರಿ ಮಳೆಯ ಮಧ್ಯೆ ಮುಂದುವರಿದ ಆಶಾ ಕಾರ್ಯಕರ್ತರ ಧರಣಿ
ಬೆಂಗಳೂರು, ಸೆಪ್ಟೆಂಬರ್ 8: ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಸುಮಾರು 15 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರ ಆಗಾಗ ಸುರಿಯುವ ಜಡಿ ಮಳೆ ಮತ್ತು ಬಿಸಿಲಿನ ಮಧ್ಯೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (AIUTUC) ವತಿಯಿಂದ ಈ ಅನಿರ್ಧಿಷ್ಟಾವಧಿ, ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗಿದೆ.

ಫ್ರೀಡಂ ಪಾರ್ಕ್ ನಲ್ಲಿ ಪೆಂಡಾಲ್ ಹಾಕಲಾಗಿದ್ದು ಮಳೆ ಬಂದರೆ ಮಾತ್ರ ಕಾರ್ಯಕರ್ತರಿಗೆ ಇಲ್ಲಿ ಯಾವುದೇ ಆಶ್ರಯವಿಲ್ಲ. ಪಕ್ಕದಲ್ಲಿ ಕಲ್ಯಾಣ ಮಂಟಪ ಬುಕ್ ಮಾಡಲಾಗಿದೆಯಾದರೂ 15,000 ಸಾವಿರ ಜನಕ್ಕೆ ಸಾಕಾಗುತ್ತಿಲ್ಲ. ಹೀಗಾಗಿ ಶುಕ್ರವಾರ ಮಂಧ್ಯಾಹ್ನ ಸುರಿದ ಭಾರೀ ಮಳೆಯಲ್ಲಿ ರಸ್ತೆಯಲ್ಲೇ ಕೊಡೆ ಹಿಡಿದುಕೊಂಡು ಆಶಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನಾಕಾರರ ಬೇಡಿಕೆಗಳೇನು?
1. ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ 18,000 ಮಾಸಿಕ ವೇತನ ನಿಗದಿಪಡಿಸಿ, ಪ್ರತಿ ತಿಂಗಳು ನೀಡಬೇಕು.
2. 'ಆಶಾ ಸಾಫ್ಟ್' ರದ್ದುಪಡಿಸಿ, ಆಶಾಗಳು ದುಡಿದಷ್ಟು ಕೇಂದ್ರ ಸರ್ಕಾರದಿಂದ ಪ್ರೋತ್ಸಾಹ ಧನ ಪ್ರತಿ ತಿಂಗಳು ನೀಡಲು ಕ್ರಮ ಕೈಗೊಳ್ಳಬೇಕು.
3. ಆಶಾ ಕಾರ್ಯಕರ್ತೆಯರನ್ನು ಖಾಯಂಗೊಳಿಸಿ ಹಾಗೂ ಪಿ.ಎಫ್, ಇಎಸ್ಐ, ಪಿಂಚಣಿ ಸೌಲಭ್ಯಗಳನ್ನು ಒದಗಿಸಬೇಕು.
ಈ ಬೇಡಿಕೆಗಳಲ್ಲದೆ ಇನ್ನೂ 5 ಬೇಡಿಕೆಗಳು ಸೇರಿ ಒಟ್ಟು 8 ಬೇಡಿಕೆಗಳನ್ನು ಆಶಾ ಕಾರ್ಯಕರ್ತರು ಸರಕಾರದ ಮುಂದೆ ಇಟ್ಟಿದ್ದಾರೆ.

ಆಶಾ ಕಾರ್ಯಕರ್ತರು ಜನತೆಯ ಮಧ್ಯೆ ಇದ್ದು ಇಲಾಖೆಯ ಸೇವೆಗಳನ್ನು ಅಚ್ಚುಕಟ್ಟಾಗಿ ತಲುಪಿಸುವಲ್ಲಿ ಜನತೆಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ನಮ್ಮ ಕಷ್ಟಕ್ಕೆ, ದುಡಿಮೆಗೆ ತಕ್ಕಂತೆ ವೇತನ ಸಿಗುತ್ತಿಲ್ಲ. ಕೇವಲ 3,000 ರೂಪಾಯಿ ವೇತನ ನೀಡಲಾಗುತ್ತಿದೆ ಎಂಬುದು ಕಾರ್ಯಕರ್ತರ ಅಳಲು.
ಇನ್ನು ಗುರುವಾರ ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನ ರಜನೀಶ್ ಮತ್ತು ಆರೋಗ್ಯ ಸಚಿವ ರಮೇಶ್ ಕುಮಾರ್ ಕುಮಾರ್ ಭೇಟಿ ನೀಡಿ ಕಾರ್ಯಕರ್ತರ ಮನವೊಲಿಸಲು ಪ್ರಯತ್ನಪಟ್ಟರು. ವೇತನವನ್ನು 5 ಸಾವಿರ ರೂಪಾಯಿಗೆ ಏರಿಸುವ ಭರವಸೆ ನೀಡಿದರು. ಆದರೆ ಇದಕ್ಕೆ ಆಶಾ ಕಾರ್ಯಕರ್ತರು ಜಗ್ಗದೆ ಪ್ರತಿಭಟನೆ ಮುಂದುವರಿಸಿದ್ದಾರೆ.

ಶುಕ್ರವಾರ ಆಶಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಜಾಗಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್, ಬಿ.ಎನ್ ವಿಜಯಕುಮಾರ್, ಜೆಡಿಎಸ್ ಶಾಸಕ ಶರಣವ ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
-
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications