ಭಾರಿ ಮಳೆಯ ಮಧ್ಯೆ ಮುಂದುವರಿದ ಆಶಾ ಕಾರ್ಯಕರ್ತರ ಧರಣಿ
ಬೆಂಗಳೂರು, ಸೆಪ್ಟೆಂಬರ್ 8: ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಸುಮಾರು 15 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರ ಆಗಾಗ ಸುರಿಯುವ ಜಡಿ ಮಳೆ ಮತ್ತು ಬಿಸಿಲಿನ ಮಧ್ಯೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (AIUTUC) ವತಿಯಿಂದ ಈ ಅನಿರ್ಧಿಷ್ಟಾವಧಿ, ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗಿದೆ.

ಫ್ರೀಡಂ ಪಾರ್ಕ್ ನಲ್ಲಿ ಪೆಂಡಾಲ್ ಹಾಕಲಾಗಿದ್ದು ಮಳೆ ಬಂದರೆ ಮಾತ್ರ ಕಾರ್ಯಕರ್ತರಿಗೆ ಇಲ್ಲಿ ಯಾವುದೇ ಆಶ್ರಯವಿಲ್ಲ. ಪಕ್ಕದಲ್ಲಿ ಕಲ್ಯಾಣ ಮಂಟಪ ಬುಕ್ ಮಾಡಲಾಗಿದೆಯಾದರೂ 15,000 ಸಾವಿರ ಜನಕ್ಕೆ ಸಾಕಾಗುತ್ತಿಲ್ಲ. ಹೀಗಾಗಿ ಶುಕ್ರವಾರ ಮಂಧ್ಯಾಹ್ನ ಸುರಿದ ಭಾರೀ ಮಳೆಯಲ್ಲಿ ರಸ್ತೆಯಲ್ಲೇ ಕೊಡೆ ಹಿಡಿದುಕೊಂಡು ಆಶಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನಾಕಾರರ ಬೇಡಿಕೆಗಳೇನು?
1. ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಕನಿಷ್ಟ 18,000 ಮಾಸಿಕ ವೇತನ ನಿಗದಿಪಡಿಸಿ, ಪ್ರತಿ ತಿಂಗಳು ನೀಡಬೇಕು.
2. 'ಆಶಾ ಸಾಫ್ಟ್' ರದ್ದುಪಡಿಸಿ, ಆಶಾಗಳು ದುಡಿದಷ್ಟು ಕೇಂದ್ರ ಸರ್ಕಾರದಿಂದ ಪ್ರೋತ್ಸಾಹ ಧನ ಪ್ರತಿ ತಿಂಗಳು ನೀಡಲು ಕ್ರಮ ಕೈಗೊಳ್ಳಬೇಕು.
3. ಆಶಾ ಕಾರ್ಯಕರ್ತೆಯರನ್ನು ಖಾಯಂಗೊಳಿಸಿ ಹಾಗೂ ಪಿ.ಎಫ್, ಇಎಸ್ಐ, ಪಿಂಚಣಿ ಸೌಲಭ್ಯಗಳನ್ನು ಒದಗಿಸಬೇಕು.
ಈ ಬೇಡಿಕೆಗಳಲ್ಲದೆ ಇನ್ನೂ 5 ಬೇಡಿಕೆಗಳು ಸೇರಿ ಒಟ್ಟು 8 ಬೇಡಿಕೆಗಳನ್ನು ಆಶಾ ಕಾರ್ಯಕರ್ತರು ಸರಕಾರದ ಮುಂದೆ ಇಟ್ಟಿದ್ದಾರೆ.

ಆಶಾ ಕಾರ್ಯಕರ್ತರು ಜನತೆಯ ಮಧ್ಯೆ ಇದ್ದು ಇಲಾಖೆಯ ಸೇವೆಗಳನ್ನು ಅಚ್ಚುಕಟ್ಟಾಗಿ ತಲುಪಿಸುವಲ್ಲಿ ಜನತೆಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ನಮ್ಮ ಕಷ್ಟಕ್ಕೆ, ದುಡಿಮೆಗೆ ತಕ್ಕಂತೆ ವೇತನ ಸಿಗುತ್ತಿಲ್ಲ. ಕೇವಲ 3,000 ರೂಪಾಯಿ ವೇತನ ನೀಡಲಾಗುತ್ತಿದೆ ಎಂಬುದು ಕಾರ್ಯಕರ್ತರ ಅಳಲು.
ಇನ್ನು ಗುರುವಾರ ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನ ರಜನೀಶ್ ಮತ್ತು ಆರೋಗ್ಯ ಸಚಿವ ರಮೇಶ್ ಕುಮಾರ್ ಕುಮಾರ್ ಭೇಟಿ ನೀಡಿ ಕಾರ್ಯಕರ್ತರ ಮನವೊಲಿಸಲು ಪ್ರಯತ್ನಪಟ್ಟರು. ವೇತನವನ್ನು 5 ಸಾವಿರ ರೂಪಾಯಿಗೆ ಏರಿಸುವ ಭರವಸೆ ನೀಡಿದರು. ಆದರೆ ಇದಕ್ಕೆ ಆಶಾ ಕಾರ್ಯಕರ್ತರು ಜಗ್ಗದೆ ಪ್ರತಿಭಟನೆ ಮುಂದುವರಿಸಿದ್ದಾರೆ.

ಶುಕ್ರವಾರ ಆಶಾ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಜಾಗಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್, ಬಿ.ಎನ್ ವಿಜಯಕುಮಾರ್, ಜೆಡಿಎಸ್ ಶಾಸಕ ಶರಣವ ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications