ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು: ಸಿಎಂ ಸಿದ್ದರಾಮಯ್ಯ ಆಪ್ತರ ಎದುರೇ ಅಶ್ವತ್ಥ್ ನಾರಾಯಣ್ ಹೇಳಿಕೆ
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಂದಿನ ದಿನಗಳಲ್ಲಿ ಸಿಎಂ ಆಗಬೇಕು ಎಂದು ಹೇಳುವ ಮೂಲಕ ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅಚ್ಚರಿ ಮೂಡಿಸಿದ್ದಾರೆ. ಮಂಗಳವಾರ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಒಂದೇ ವೇದಿಕೆ ಹಂಚಿಕೊಂಡಿದ್ದರು.
ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರೂ ಇದ್ದರು. ಈ ಸಂದರ್ಭದಲ್ಲೇ ಅಶ್ವತ್ಥ್ ನಾರಾಯಣ್ ಡಿಕೆಶಿ ಸಿಎಂ ಆಗಬೇಕು ಎಂದಿದ್ದು, ಸಿದ್ದರಾಮಯ್ಯ ಬೆಂಬಲಿಗರಿಗೆ ಶಾಕ್ ನೀಡಿದರು.

ನಗರದ ಶೇಷಾದ್ರಿಪುರದಲ್ಲಿ ಜನರ ಅಹವಾಲು ಕೇಳುವ 'ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮದಲ್ಲಿ ಅಶ್ವತ್ಥ ನಾರಾಯಣ ಭಾಗವಹಿಸಿದ್ದರು, ರಾಜಕೀಯ ವಿರೋಧಿಗಳು ಎಂದೇ ಬಿಂಬಿಸಿಕೊಂಡಿದ್ದರು ಡಿಕೆಶಿ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಅಚ್ಚರಿ ಮೂಡಿಸಿದರು.
ಸಮಾರಂಭದಲ್ಲಿ ಭಾಷಣ ಮಾಡಿದ ಅಶ್ವತ್ಥ್ ನಾರಾಯಣ, 'ನಿಮಗೆ ಒಳ್ಳೆಯದಾಗಲಿ, ಇನ್ನೂ ಉನ್ನತ ಸ್ಥಾನಕ್ಕೆ ಹೋಗುವಂತಾಗಲಿ. ನಾಡಿನ ಜನ ಅವಕಾಶ ಕೊಟ್ಟಿದ್ದಾರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯೂ ಆಗಲಿ' ಎಂದು ಡಿಕೆ ಶಿವಕುಮಾರ್ ಅವರಿಗೆ ಹಾರೈಸಿದರು.
ಅಂದು ವೇದಿಕೆ ಮೇಲೆ ಜಗಳ, ಇಂದು ಬೆಂಬಲ
ವಿಧಾನಸಭಾ ಚುನಾವಣೆಗೆ ಮುನ್ನ ರಾಮನಗರ ಜಿಲ್ಲಾ ಉಸ್ತುವಾರಿಯಾಗಿದ್ದ ಡಾ. ಅಶ್ವತ್ಥ್ ನಾರಾಯಣ, ಕಾರ್ಯಕ್ರಮವೊಂದರಲ್ಲಿ ಡಿಕೆ ಸಹೋದರರ ವಿರುದ್ಧ ಮಾತನಾಡಿದ್ದರು. ಈ ಸಂದರ್ಭದಲ್ಲೇ ಸಂಸದ ಡಿಕೆ ಸುರೇಶ್ ಮತ್ತು ಅಶ್ವತ್ಥ್ ನಾರಾಯಣ ನಡುವೆ ಜಗಳವಾಗಿತ್ತು. ಆ ಬಳಿಕ ಡಿಕೆ ಸಹೋದರರು ಮತ್ತು ಅಶ್ವತ್ಥ್ ನಾರಾಯಣ ಪ್ರಚಾರದ ಸಂದರ್ಭದಲ್ಲಿ ಒಬ್ಬರಿಗೊಬ್ಬರು ಟಾಂಗ್ ಕೊಡುವುದು ಸಾಮಾನ್ಯವಾಗಿತ್ತು. ಆದರೆ ಈಗ ಅಶ್ವತ್ಥ್ ನಾರಾಯಣ್ ಬಹಿರಂಗವಾಗಿ ಡಿಕೆಶಿಗೆ ಬೆಂಬಲ ನೀಡಿ ಅಚ್ಚರಿ ಮೂಡಿಸಿದ್ದಾರೆ.
ಪಾದಚಾರಿಗಳು, ವಿಶೇಷವಾಗಿ ವೃದ್ಧರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸುವ ಮೂಲಕ ಸರ್ಕಾರವು ಉತ್ತಮ ಕೆಲಸ ಮಾಡುತ್ತಿದೆ. ಡಿಕೆ ಶಿವಕುಮಾರ್ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಅಶ್ವತ್ಥ ನಾರಾಯಣ ಹೊಗಳಿದರು. ಅಶ್ವತ್ಥ ನಾರಾಯಣ್ ಮತ್ತು ಶಿವಕುಮಾರ್ ಇಬ್ಬರೂ ಪ್ರಬಲ ಒಕ್ಕಲಿಗ ಸಮುದಾಯದಿಂದ ಬಂದವರಾಗಿದ್ದಾರೆ.
ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಸಚಿವ ಜಮೀರ್ ಅಹಮದ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದ್ದರು. ಶಿವಕುಮಾರ್ ಅವರು ಹಲವು ಸಂದರ್ಭಗಳಲ್ಲಿ ಮುಖ್ಯಮಂತ್ರಿಯಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ, ಇದು ಪಕ್ಷದಲ್ಲಿ ಹಗ್ಗ ಜಗ್ಗಾಟಕ್ಕೆ ಕೂಡ ಕಾರಣವಾಗಿತ್ತು.
-
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ












Click it and Unblock the Notifications