ವಿಶ್ವಾಸಮತ ಯಾಚನೆ ಮಾಡಿ, ಇಲ್ಲವಾದ್ರೆ ರಾಜೀನಾಮೆ ಕೊಡ್ತೀನಿ: ಸ್ಪೀಕರ್
ಬೆಂಗಳೂರು, ಜುಲೈ 22: ವಿಶ್ವಾಸಮತ ಯಾಚನೆಯು ಜಗ ಪ್ರಸವದಂತೆ ದೀರ್ಘವಾಗುತ್ತಿದೆ. ಇದು ಸ್ವತಃ ಸ್ಪೀಕರ್ ಅವರಿಗೇ ರೇಜಿಗೆ ಹುಟ್ಟಿಸಿದ್ದು, ಇಂದು ವಿಶ್ವಾಸಮತ ಅಂಗೀಕಾರ ಮಾಡಲೇ ಬೇಕು ಎಂದು ಸಿಎಂ ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಿದ್ದಾರೆ.
ಸೋಮವಾರ ವಿಶ್ವಾಸಮತ ಯಾಚನೆ ಮಾಡಿ ಎಂದು ಶುಕ್ರವಾರವೇ ಸ್ಪೀಕರ್ ರಮೇಶ್ ಕುಮಾರ್ ಅವರು ಸಿಎಂ ಅವರಿಗೆ ಮನವಿ ಮಾಡಿದ್ದರು. ಅದಕ್ಕೆ ಸಿಎಂ ಕುಮಾರಸ್ವಾಮಿ ಒಪ್ಪಿದ್ದರೂ ಸಹ ಆದರೆ ಇಂದು ಸಿಎಂ ಕುಮಾರಸ್ವಾಮಿ ಅವರು ಇನ್ನಷ್ಟು ಸಮಯವನ್ನು ಸ್ಪೀಕರ್ ಅವರ ಬಳಿ ಕೇಳಿದ್ದಾರೆ.
ಆದರೆ ಇದರಿಂದ ಅಸಮಾಧಾನಗೊಂಡ ಸ್ಪೀಕರ್ ರಮೇಶ್ ಕುಮಾರ್ ಅವರು, ಈಗಾಗಲೇ ಜನರಿಗೆ ನಮ್ಮ ಮೇಲೆ ವ್ಯತಿರಿಕ್ತ ಭಾವನೆ ಬಂದಿದೆ, ಮತ್ತೆ ನಾಳೆಗೆ ವಿಶ್ವಾಸಮತ ಮುಂದೂಡಿದರೆ ನಾನು ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ ಎಂದು ಸ್ಪೀಕರ್ ಅವರು ಹೇಳಿದ್ದಾರೆ.

ಇಂದು ರಾತ್ರಿ 9 ಗಂಟೆ ವೇಳೆಗೆ ವಿಶ್ವಾಸಮತ ಯಾಚನೆ ಮಾಡಿ, ಇಲ್ಲವಾದರೆ ನಾನೇ ರಾಜೀನಾಮೆ ಕೊಟ್ಟು ಹೊರ ನಡೆಯುತ್ತೇನೆ ಎಂದು ಸಿಎಂ ಮುಂದೆ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ ಎನ್ನಲಾಗಿದೆ.
ಇಂದೇ ವಿಶ್ವಾಸಮತ ಯಾಚನೆ ಆಗಲಿ ಎಂಬುದು ಸ್ಪೀಕರ್ ಅವರ ಆಸೆಯೂ ಆಗಿದೆ. ಇಂದೂ ಸಹ ಸದನದಲ್ಲಿ ಹಲವು ಬಾರಿ ಸ್ಪೀಕರ್ ಅವರು ಶಾಸಕರಲ್ಲಿ ಸಹ ಮನವಿ ಮಾಡಿದರು. ವಿಶ್ವಾಸಮತ ಯಾಚನೆ ಈಗಾಗಲೇ ತಡವಾಗಿದೆ, ಇಂದೂ ಸಹ ಮತಯಾಚನೆ ಆಗಲಿಲ್ಲವೆಂದರೆ ನಾನು ಅಪರಾಧಿಸ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಹೇಳಿದರು.
ಪಕ್ಷೇತರ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಿಕೊಂಡಿದ್ದು, ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ಹಾಗಾಗಿ ಅದರ ಫಲಿತಾಂಶ ನೋಡಿಕೊಂಡು ವಿಶ್ವಾಸಮತ ಯಾಚನೆ ಮಾಡುವುದು ಎಂಬ ಲೆಕ್ಕಾಚಾರ ದೋಸ್ತಿ ಪಕ್ಷಕ್ಕೆ ಇದ್ದಂತಿದೆ, ಹಾಗಾಗಿಯೇ ಕುಮಾರಸ್ವಾಮಿ ಅವರು ಹೆಚ್ಚಿನ ಕಾಲಾವಕಾಶ ಕೇಳಿದೆ ಎನ್ನಲಾಗುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications