ವಿಶ್ವಾಸಮತ ಯಾಚನೆ ಮಾಡಿ, ಇಲ್ಲವಾದ್ರೆ ರಾಜೀನಾಮೆ ಕೊಡ್ತೀನಿ: ಸ್ಪೀಕರ್
ಬೆಂಗಳೂರು, ಜುಲೈ 22: ವಿಶ್ವಾಸಮತ ಯಾಚನೆಯು ಜಗ ಪ್ರಸವದಂತೆ ದೀರ್ಘವಾಗುತ್ತಿದೆ. ಇದು ಸ್ವತಃ ಸ್ಪೀಕರ್ ಅವರಿಗೇ ರೇಜಿಗೆ ಹುಟ್ಟಿಸಿದ್ದು, ಇಂದು ವಿಶ್ವಾಸಮತ ಅಂಗೀಕಾರ ಮಾಡಲೇ ಬೇಕು ಎಂದು ಸಿಎಂ ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಿದ್ದಾರೆ.
ಸೋಮವಾರ ವಿಶ್ವಾಸಮತ ಯಾಚನೆ ಮಾಡಿ ಎಂದು ಶುಕ್ರವಾರವೇ ಸ್ಪೀಕರ್ ರಮೇಶ್ ಕುಮಾರ್ ಅವರು ಸಿಎಂ ಅವರಿಗೆ ಮನವಿ ಮಾಡಿದ್ದರು. ಅದಕ್ಕೆ ಸಿಎಂ ಕುಮಾರಸ್ವಾಮಿ ಒಪ್ಪಿದ್ದರೂ ಸಹ ಆದರೆ ಇಂದು ಸಿಎಂ ಕುಮಾರಸ್ವಾಮಿ ಅವರು ಇನ್ನಷ್ಟು ಸಮಯವನ್ನು ಸ್ಪೀಕರ್ ಅವರ ಬಳಿ ಕೇಳಿದ್ದಾರೆ.
ಆದರೆ ಇದರಿಂದ ಅಸಮಾಧಾನಗೊಂಡ ಸ್ಪೀಕರ್ ರಮೇಶ್ ಕುಮಾರ್ ಅವರು, ಈಗಾಗಲೇ ಜನರಿಗೆ ನಮ್ಮ ಮೇಲೆ ವ್ಯತಿರಿಕ್ತ ಭಾವನೆ ಬಂದಿದೆ, ಮತ್ತೆ ನಾಳೆಗೆ ವಿಶ್ವಾಸಮತ ಮುಂದೂಡಿದರೆ ನಾನು ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ ಎಂದು ಸ್ಪೀಕರ್ ಅವರು ಹೇಳಿದ್ದಾರೆ.

ಇಂದು ರಾತ್ರಿ 9 ಗಂಟೆ ವೇಳೆಗೆ ವಿಶ್ವಾಸಮತ ಯಾಚನೆ ಮಾಡಿ, ಇಲ್ಲವಾದರೆ ನಾನೇ ರಾಜೀನಾಮೆ ಕೊಟ್ಟು ಹೊರ ನಡೆಯುತ್ತೇನೆ ಎಂದು ಸಿಎಂ ಮುಂದೆ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ ಎನ್ನಲಾಗಿದೆ.
ಇಂದೇ ವಿಶ್ವಾಸಮತ ಯಾಚನೆ ಆಗಲಿ ಎಂಬುದು ಸ್ಪೀಕರ್ ಅವರ ಆಸೆಯೂ ಆಗಿದೆ. ಇಂದೂ ಸಹ ಸದನದಲ್ಲಿ ಹಲವು ಬಾರಿ ಸ್ಪೀಕರ್ ಅವರು ಶಾಸಕರಲ್ಲಿ ಸಹ ಮನವಿ ಮಾಡಿದರು. ವಿಶ್ವಾಸಮತ ಯಾಚನೆ ಈಗಾಗಲೇ ತಡವಾಗಿದೆ, ಇಂದೂ ಸಹ ಮತಯಾಚನೆ ಆಗಲಿಲ್ಲವೆಂದರೆ ನಾನು ಅಪರಾಧಿಸ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಹೇಳಿದರು.
ಪಕ್ಷೇತರ ಶಾಸಕರು ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಿಕೊಂಡಿದ್ದು, ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ಹಾಗಾಗಿ ಅದರ ಫಲಿತಾಂಶ ನೋಡಿಕೊಂಡು ವಿಶ್ವಾಸಮತ ಯಾಚನೆ ಮಾಡುವುದು ಎಂಬ ಲೆಕ್ಕಾಚಾರ ದೋಸ್ತಿ ಪಕ್ಷಕ್ಕೆ ಇದ್ದಂತಿದೆ, ಹಾಗಾಗಿಯೇ ಕುಮಾರಸ್ವಾಮಿ ಅವರು ಹೆಚ್ಚಿನ ಕಾಲಾವಕಾಶ ಕೇಳಿದೆ ಎನ್ನಲಾಗುತ್ತಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications