ವೇರ್ಹೌಸ್ನಿಂದ ನೈಕ್ ಶೂಗಳನ್ನು ತುಂಬಿದ್ದ ಲಾರಿಯನ್ನೇ ಕದ್ದ ಅಸ್ಸಾಂ ಮೂಲದ ಕಳ್ಳರ ಬಂಧನ
ಬೆಂಗಳೂರು, ಜನವರಿ 03: ಬೆಂಗಳೂರಿನ ಗೋದಾಮಿನಿಂದ 1,558 ನೈಕ್ ಶೂಗಳನ್ನು ತುಂಬಿದ್ದ ಕಂಟೈನರ್ ಅನ್ನು ಕಳವು ಮಾಡಿದ್ದ ಮೂವರನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಬಂಧಿತನಾದ ಒಬ್ಬ ಆರೋಪಿಯು ನೈಕ್ ಗೋದಾಮಿನಲ್ಲಿ ಸರಕು ವಾಹನ ಚಾಲಕನಾಗಿ ಸೇರಿಕೊಂಡಿದ್ದನು. ಕೆಲವ ಮಾಡುತ್ತಲೇ ಶೂ ತುಂಬಿದ ಕಂಟೈನರ್ ಅನ್ನು ಕದ್ದಿದ್ದಾನೆ ಎಂದು ವರದಿಗಳು ತಿಳಿಸಿವೆ.

ಆರೋಪಿಗಳನ್ನು 30 ವರ್ಷದ ಶುಭಾನ್ ಪಾಷಾ, 26 ವರ್ಷದ ಮನ್ಸರ್ ಅಲಿ ಮತ್ತು 26 ವರ್ಷದ ಶಾಹಿದುಲ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಮೂವರೂ ಅಸ್ಸಾಂ ಮೂಲದವರು. ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರ ನಾಲ್ವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳು ಹಿಂದೆ ಸುಸ್ಥಾಪಿತ ಕಂಪನಿಗಳ ಗೋದಾಮುಗಳಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಈ ಗೋದಾಮುಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದರ ಬಗ್ಗೆ ತಿಳಿದಿದ್ದರು ಎನ್ನಲಾಗಿದೆ.
ಶೂ ತುಂಬಿದ ಕಂಟೈನರ್ ಕಳವು:
ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಸಲೇಹ್ ಅಹಮದ್ ಆನೇಕಲ್ನ ಶೆಟ್ಟಿಹಳ್ಳಿಯಲ್ಲಿರುವ ನೈಕ್ ಶೂ ಗೋದಾಮಿನಲ್ಲಿ ಸರಕು ಸಾಗಣೆ ವಾಹನ ಚಾಲಕನಾಗಿ ಸೇರಿಕೊಂಡಿದ್ದ. ಅವನು 1,558 ಜೋಡಿ ಬ್ರಾಂಡೆಡ್ ಶೂಗಳನ್ನು ತುಂಬಿದ್ದ ಸರಕು ವಾಹನದೊಂದಿಗೆ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಅನುಗೊಂಡನಹಳ್ಳಿ ಬಳಿಯ ಮೈಂತ್ರಾ ಗೋದಾಮಿಗೆ ಸರಕುಗಳನ್ನು ವರ್ಗಾಯಿಸಬೇಕಾಗಿತ್ತು. ಆದರೆ ಸಾಲೆ ಅವನು ಬೆಂಗಳೂರಿನ ರಜಾಕ್ ಪಾಳ್ಯದಲ್ಲಿರುವ ಕೋಣೆಗೆ ಸರಕುಗಳನ್ನು ತೆಗೆದುಕೊಂಡು ಹೋಗಿದ್ದನು. ಬಳಿಕ ಚಿಕ್ಕಜಾಲ ಸಮೀಪದ ತರಬನಹಳ್ಳಿಯಲ್ಲಿ ವಾಹನವನ್ನು ಬಿಟ್ಟು ಹೋಗಿದ್ದನು.
ಬಳಿಕ ಪೊಲೀಸರು ವಾಹನದಲ್ಲಿ ಅಳವಡಿಸಲಾಗಿರುವ ಜಿಪಿಎಸ್ ಟ್ರ್ಯಾಕರ್ ಬಳಸಿ ವಾಹನವನ್ನು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ. ಘಟನೆ ಕುರಿತು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಕಳ್ಳತನವಾದ ಶೂಗಳನ್ನು ವಶಪಡಿಸಿಕೊಂಡಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications