ಸ್ಕೈ ಬಾರ್ ಕೇಸ್ : ಶಾಸಕ ಕಾಶಪ್ಪನವರ್ ಮೇಲೆ ಚಾರ್ಜ್ ಶೀಟ್
ಬೆಂಗಳೂರು, ಆಗಸ್ಟ್ 26: ಯುಬಿ ಸಿಟಿಯ ಸ್ಕೈಬಾರಿನಲ್ಲಿ ಎರಡು ವರ್ಷದ ಹಿಂದೆ ನಡೆದ ಹಲ್ಲೆ, ದಾಂಧಲೆ, ಕಾನೂನು ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ಸಿನ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಮೇಲೆ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಹಾಕಿದ್ದಾರೆ.
ಜುಲೈ 1, 2014 ರಂದು ಕಬ್ಬನ್ ಪಾರ್ಕ್ ಠಾಣೆಯ ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಬಾಗಲಕೋಟೆ ಜಿಲ್ಲೆ ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹಾಗೂ ಅವರ ಬಲಗೈ ಬಂಟ ರೌಡಿ ಶೀಟರ್ ಸೋಮಶೇಖರ್ ಗೌಡ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. [ಶಾಸಕ ವಿಜಯಾನಂದ ಕಾಶಪ್ಪನವರಗೆ ಕ್ಲೀನ್ ಚಿಟ್?]
ಪ್ರಕರಣದ ತನಿಖೆಯನ್ನು ನಂತರ ಸಿಸಿಬಿಗೆ ವರ್ಗಾಯಿಸಲಾಯಿತು. ಎರಡು ವರ್ಷಗಳ ಬಳಿಕ ಆರೋಪಿ ನಂ.1 ಸೋಮಶೇಖರ್ ಗೌಡ ಹಾಗೂ ನಂ. 2 ವಿಜಯಾನಂದ ಕಾಶಪ್ಪನವರ್ ವಿರುದ್ಧ ದೋಷಾರೋಪಣ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಘಟನೆ ಹಿನ್ನಲೆ: ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ಯುಬಿ ಸಿಟಿಯ ಸ್ಕೈ ಬಾರ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ಅವರ ಬೆಂಬಲಿಗರು ಹುಟ್ಟುಹಬ್ಬದ ಪಾರ್ಟಿ ನಡೆಸುತ್ತಿದ್ದರು. ರಾತ್ರಿ 11 ಗಂಟೆ ನಂತರ ಮದ್ಯ ಪೂರೈಕೆ ಮಾಡುವಂತೆ ಆಗ್ರಹಿಸಿ, ಸೋಮಶೇಖರ್ ಗೌಡ ದಬಾಯಿಸಿದ್ದಾರೆ. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ.[ಸಿಸಿಬಿ ಪೊಲೀಸರ ಮುಂದೆ ಕಾಶಪ್ಪನವರ್ ಹೇಳಿದ್ದೇನು?]
ರಾತ್ರಿ ಗಸ್ತಿನಲ್ಲಿದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗಳಾದ ಕಿರಣ್ ಮತ್ತು ಪ್ರಶಾಂತ್ ನಾಯಕ್ ದಾಂಧಲೆ ಬಗ್ಗೆ ಪ್ರಶ್ನಿಸಿದ್ದಾರೆ ಮತ್ತು ಅದನ್ನು ಚಿತ್ರೀಕರಿಸಲು ಮುಂದಾಗಿದ್ದಾರೆ. ಇದರಿಂದ ಕೆರಳಿದ ಶಾಸಕರು ಮತ್ತು ಅವರ ಬೆಂಬಲಿಗರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈಗ ಮತ್ತೊಮ್ಮೆ ಪ್ರಕರಣಕ್ಕೆ ಜೀವ ಬಂದಿದ್ದು, ಆರೋಪಿಗಳ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ. ಕಾಶಪ್ಪನವರ್ ವಿರುದ್ಧ ಸರಿ ಸುಮಾರು 16 ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳಿವೆ. (ಒನ್ಇಂಡಿಯಾ ಸುದ್ದಿ)
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ












Click it and Unblock the Notifications