ಹಲ್ಲೆ ಪ್ರಕರಣ: ಮೈತ್ರಿಯಾ ಗೌಡಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು, ಜೂನ್ 10: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈತ್ರಿಯಾ ಗೌಡ ಅವರಿಗೆ ಸೆಷನ್ಸ್ ಕೋರ್ಟಿನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟಿನ ಆದೇಶವನ್ನು ಅಮಾನತಿನಲ್ಲಿಟ್ಟಿರುವ ಸೆಷನ್ಸ್ ಕೋರ್ಟ್, ಮೈತ್ರಿಯಾಗೆ ಜಾಮೀನು ಮಂಜೂರು ಮಾಡಿದೆ.
ಮೇ 13ರಂದು ಶುಕ್ರವಾರ ಬೆಳಗ್ಗೆ ಜೈಲುಶಿಕ್ಷೆಗೊಳಗಾಗಿದ್ದ ನಟಿ ಮೈತ್ರಿಯಾ ಗೌಡ ಅವರು ಸಂಜೆ ವೇಳೆಗೆ ಜಾಮೀನು ಪಡೆದು ಮನೆಗೆ ತೆರಳಿದ್ದರು.[ಹಲ್ಲೆ ಪ್ರಕರಣ: ಮೈತ್ರಿಯಾಗೆ ರಿಲೀಫ್ ಬೆಳಗ್ಗೆ ಜೈಲು, ಸಂಜೆಗೆ ಬೇಲು]
2011ರ ಮೇ 20ರಂದು ನಡೆದ ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ (5ನೇ ಎಸಿಎಂಎಂ ) ಕೋರ್ಟ್ ಶುಕ್ರವಾರ ಬೆಳಗ್ಗೆ ಮೈತ್ರಿಯಾ ಗೌಡ ಅವರಿಗೆ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಮೈತ್ರಿಯಾ ಅವರ ತಂಗಿ ಸುಪ್ರಿಯಾ, ಸಂಬಂಧಿಕರಾದ ರೂಪಾ ಹಾಗೂ ರೇಖಾಗೆ ಕೋರ್ಟ್ ತಲಾ 1 ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿತ್ತು

ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸೆಷನ್ಸ್ ನ್ಯಾಯಾಲಯಕ್ಕೆ ಮೈತ್ರಿಯಾ ಅವರು ಅರ್ಜಿ ಸಲ್ಲಿಸಿದ್ದರು. ಮೈತ್ರಿಯಾ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ, ಮುಂದಿನ ವಿಚಾರಣೆ ನಡೆಯುವ ತನಕ ಶಿಕ್ಷೆ ಜಾರಿಗೊಳಿಸದಂತೆ ಆದೇಶಕ್ಕೆ ತಡೆ ನೀಡಿದೆ.
2011ರಲ್ಲಿ ಟ್ರಾಫಿಕ್ ಪೊಲೀಸ್ ಮೇಲೆ ನಟಿ ಮೈತ್ರಿಯಾ ಗೌಡ ಹಾಗೂ ಮನೆಯವರು ಕಾರಿನಲ್ಲಿ ಬರುತ್ತಿದ್ದ ವೇಳೆ ಮೊಬೈಲ್ ನಲ್ಲಿ ಸಂಭಾಷಣೆ ನಡೆಸುತ್ತಿದ್ದರು.
ಆಗ ಬಸವೇಶ್ವರ ನಗರ ಸಂಚಾರಿ ಠಾಣೆ ಮುಖ್ಯ ಪೇದೆ ಶಿವಕುಮಾರ್ ಅವರು ಕಾರನ್ನು ನಿಲ್ಲಿಸಿ, ಮೊಬೈಲ್ ಫೋನ್ ನಲ್ಲಿ ಮಾತನಾಡಿಕೊಂಡು ಕಾರು ಚಲಾಯಿಸದಂತೆ ಆಕ್ಷೇಪಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯಪೇದೆ ಶಿವಕುಮಾರ್ ಮೇಲೆ ಮೈತ್ರಿಯಾ ಗೌಡ ಹಲ್ಲೆ ನಡೆಸಿದ್ದರು.ಈ ಸಂಬಂಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications