ವಿದ್ಯಾರ್ಥಿನಿ ಮೇಲೆ ಹಲ್ಲೆ: ಪರಂ ವಿರುದ್ಧ ಟ್ವಿಟ್ಟರ್ ಮಂದಿ ಗರಂ
ಬೆಂಗಳೂರು, ಫೆ. 04: ತಾಂಜೇನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ. ಅರೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಲಾಗಿದೆ ಎಂಬ ವರದಿಯನ್ನು ಅಲ್ಲಗೆಳೆದ ಪರಮೇಶ್ವರ ಅವರು ಹಲ್ಲೆ ನಡೆದಿಲ್ಲ, ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದಿದ್ದಾರೆ. ಸಚಿವರ ಹೇಳಿಕೆಯನ್ನು ಖಂಡಿಸಿ ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ನಲ್ಲಿ ಕಿಚಾಯಿಸಲಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ ಅವರು, ಪ್ರಕರಣಕ್ಕೆ ಸಂಬಂಧಿಸಿ ಲೋಕೇಶ್ ಬಂಗಾರಿ, ವೆಂಕಟೇಶ್ ರಾಮಯ್ಯ, ಸಲೀಂ ಪಾಷಾ, ಭಾನುಪ್ರಕಾಶ್ ಮತ್ತು ರೆಹಮತುಲ್ಲಾ ಎಂಬುವರನ್ನು ಬಂಧಿಸಲಾಗಿದೆ ಎಂದು ಹೇಳಿದರು. ಯುವತಿಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿಲ್ಲ. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆಯೂ ಸ್ಪಷ್ಟ ಉಲ್ಲೇಖಗಳಿಲ್ಲ ಎಂದು ಹೇಳಿದರು. [ಲೈಂಗಿಕ ದೌರ್ಜನ್ಯ ನಡೆದಿಲ್ಲ, ಪ್ರಕರಣ ಸಿಸಿಬಿಗೆ: ಪರಮೇಶ್ವರ]
ಘಟನೆಗೆ ಕುಡಿದು ವಾಹನ ಚಲಾಯಿಸಿದ್ದೇ ಮೂಲ ಕಾರಣ. ದಂಪತಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದಾದ ನಂತರ ಗಲಾಟೆ ಆರಂಭವಾಗಿದೆ. ಈ ಎಲ್ಲ ವಿವರಗಳನ್ನು ಪೊಲೀಸರು ದಾಖಲು ಮಾಡಿದ್ದಾರೆ ಎಂದಿದ್ದರು.

ಪ್ರಕರಣದ ಸಮಗ್ರ ವರದಿವಿದೇಶಾಂಗ ಸಚಿವಾಲಯಕ್ಕೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಈ ಪ್ರಕರಣದ ಸಮಗ್ರ ವರದಿಯನ್ನು ಮುಖ್ಯ ಕಾರ್ಯದರ್ಶಿಯವರು ಕೇಂದ್ರದ ವಿದೇಶಾಂಗ ಸಚಿವಾಲಯಕ್ಕೆ ಇಂದು ಕಳುಹಿಸುವರು ಎಂದು ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದರು.
|
ಗೃಹ ಸಚಿವರ ಹೇಳಿಕೆ ಖಂಡಿಸಿದ ಸಾರ್ವಜನಿಕರು
ಗೃಹ ಸಚಿವರ ಹೇಳಿಕೆ ಖಂಡಿಸಿದ ಸಾರ್ವಜನಿಕರು ಟ್ವೀಟ್ ಮಾಡಿದ್ದು ಹೀಗೆ..
|
ನಾಚಿಕೆಗೇಡು ! ಕರ್ನಾಟಕ ಸರ್ಕಾರಕ್ಕೆ
ನಾಚಿಕೆಗೇಡು ! ಕರ್ನಾಟಕ ಸರ್ಕಾರಕ್ಕೆ, ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆದಿದೆ.
|
ಪತ್ರಕರ್ತೆ ಬರ್ಖಾದತ್ ರಿಂದ ಖಂಡನೆ
ಪತ್ರಕರ್ತೆ ಬರ್ಖಾದತ್ ರಿಂದಲೂ ಖಂಡನೆ, ನಾಚಿಕೆಗೇಡಿನ ಹೇಳಿಕೆ ಎಂದ ಬರ್ಖಾ
|
ಕೇಸ್ ಖತಂ ಆಗಿದೆ ಎಂದ ಮೇಲೆ ಇನ್ನೇನು
ಕೇಸ್ ಖತಂ ಆಗಿದೆ ಎಂದ ಮೇಲೆ ಇನ್ನೇನು ಹೇಳುವುದು ಬಾಕಿ ಇದೆ.
|
ಅವಧಿ ಮುಗಿದರೂ ಇಲ್ಲೇ ವಾಸ
ವೀಸಾದ ಅವಧಿ ಮುಗಿದರೂ ಹಲವಾರು ವಿದ್ಯಾರ್ಥಿಗಳು ಬೆಂಗಳೂರಿನಲ್ಲಿಯೇ ವಾಸ ಮಾಡುತ್ತಿರುವ ಮಾಹಿತಿಯೂ ದೊರೆತಿದೆ ಎಂದು ಪರಮೇಶ್ವರ್ ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications